ಬ್ರೇಕಿಂಗ್ ನ್ಯೂಸ್
08-12-24 09:18 pm Mangalore Correspondent ಕರಾವಳಿ
ಮಂಗಳೂರು, ಡಿ.8: ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿದ್ದ ಫೆಂಗಲ್ ಚಂಡಮಾರುತ ಅಬ್ಬರಕ್ಕೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜನ ಕಂಗಾಲಾಗಿದ್ದರು. ಒಮ್ಮಿಂದೊಮ್ಮೆಲೇ ಭಾರೀ ಮಳೆಯಾಗಿದ್ದು ಇಡೀ ಮಳೆಗಾಲದ ಮಳೆಯನ್ನು ಒಂದೇ ದಿನ ಅನುಭವಿಸಿದ್ದೂ ಆಗಿತ್ತು. ಇದೀಗ ಮತ್ತೆ ಚಂಡಮಾರುತ ಕಾಣಿಸುವ ಬಗ್ಗೆ ಸೂಚನೆ ನೀಡಲಾಗಿದ್ದು ಮುಂದಿನ ಎರಡು ವಾರಗಳಲ್ಲಿ ಮತ್ತೊಮ್ಮೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ತಜ್ಞ ಶ್ರೀನಿವಾಸ್ ರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ಬಾರಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ರಾಜ್ಯದಲ್ಲೂ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.
ಡಿಸೆಂಬರ್ ಆರಂಭದಲ್ಲಿ ತಮಿಳುನಾಡಿನಿಂದ ಕರ್ನಾಟಕಕ್ಕೆ ಎಂಟ್ರಿ ಕೊಟ್ಟ ಫೆಂಗಲ್ ಚಂಡಮಾರುತವು ಅರಬ್ಬಿ ಸಮುದ್ರದತ್ತ ಹಾದುಹೋಗಿತ್ತು. ಅಪರೂಪ ಎನ್ನುವಂತೆ ಮಾರುತ ನಿಧಾನ ಗತಿಯಲ್ಲಿ ಸಾಗಿದ್ದರಿಂದ ದಕ್ಷಿಣ ಕರ್ನಾಟಕ ಜಿಲ್ಲೆಗಳು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸಿಡಿಲು ಮಳೆಯಾಗಿತ್ತು. ಫೆಂಗಲ್ ಚಂಡಮಾರುತದ ಹಾನಿಯಿಂದ ಜನ ಸುಧಾರಿಸುತ್ತಿರುವಾಗಲೇ ಮತ್ತೆ ಎರಡು ಸೈಕ್ಲೋನ್ ಸೃಷ್ಟಿಯಾಗಲಿದೆ ಎಂದು ಹೇಳಿರುವುದು ಆತಂಕ ಮೂಡಿಸಿದೆ.
ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಲಿದ್ದು, ಇದರಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 14 ಮತ್ತು 15 ರಂದು ಮಳೆಯಾಗಲಿದೆ. 2ನೇ ವಾಯುಭಾರ ಕುಸಿತವು ಡಿಸೆಂಬರ್ 16ಕ್ಕೆ ಉಂಟಾಗಲಿದ್ದು, ಡಿಸೆಂಬರ್ 17 - 18ಕ್ಕೆ ಜೋರು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
The people of South Karnataka and the coastal areas were devastated by the storm of Cyclone Fangal, which had formed in the Bay of Bengal. It rained heavily all at once, and experienced the rain of the entire monsoon season in a single day.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am