ಬ್ರೇಕಿಂಗ್ ನ್ಯೂಸ್
08-12-24 09:18 pm Mangalore Correspondent ಕರಾವಳಿ
ಮಂಗಳೂರು, ಡಿ.8: ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿದ್ದ ಫೆಂಗಲ್ ಚಂಡಮಾರುತ ಅಬ್ಬರಕ್ಕೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜನ ಕಂಗಾಲಾಗಿದ್ದರು. ಒಮ್ಮಿಂದೊಮ್ಮೆಲೇ ಭಾರೀ ಮಳೆಯಾಗಿದ್ದು ಇಡೀ ಮಳೆಗಾಲದ ಮಳೆಯನ್ನು ಒಂದೇ ದಿನ ಅನುಭವಿಸಿದ್ದೂ ಆಗಿತ್ತು. ಇದೀಗ ಮತ್ತೆ ಚಂಡಮಾರುತ ಕಾಣಿಸುವ ಬಗ್ಗೆ ಸೂಚನೆ ನೀಡಲಾಗಿದ್ದು ಮುಂದಿನ ಎರಡು ವಾರಗಳಲ್ಲಿ ಮತ್ತೊಮ್ಮೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ತಜ್ಞ ಶ್ರೀನಿವಾಸ್ ರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ಬಾರಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ರಾಜ್ಯದಲ್ಲೂ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.
ಡಿಸೆಂಬರ್ ಆರಂಭದಲ್ಲಿ ತಮಿಳುನಾಡಿನಿಂದ ಕರ್ನಾಟಕಕ್ಕೆ ಎಂಟ್ರಿ ಕೊಟ್ಟ ಫೆಂಗಲ್ ಚಂಡಮಾರುತವು ಅರಬ್ಬಿ ಸಮುದ್ರದತ್ತ ಹಾದುಹೋಗಿತ್ತು. ಅಪರೂಪ ಎನ್ನುವಂತೆ ಮಾರುತ ನಿಧಾನ ಗತಿಯಲ್ಲಿ ಸಾಗಿದ್ದರಿಂದ ದಕ್ಷಿಣ ಕರ್ನಾಟಕ ಜಿಲ್ಲೆಗಳು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸಿಡಿಲು ಮಳೆಯಾಗಿತ್ತು. ಫೆಂಗಲ್ ಚಂಡಮಾರುತದ ಹಾನಿಯಿಂದ ಜನ ಸುಧಾರಿಸುತ್ತಿರುವಾಗಲೇ ಮತ್ತೆ ಎರಡು ಸೈಕ್ಲೋನ್ ಸೃಷ್ಟಿಯಾಗಲಿದೆ ಎಂದು ಹೇಳಿರುವುದು ಆತಂಕ ಮೂಡಿಸಿದೆ.
ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಲಿದ್ದು, ಇದರಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 14 ಮತ್ತು 15 ರಂದು ಮಳೆಯಾಗಲಿದೆ. 2ನೇ ವಾಯುಭಾರ ಕುಸಿತವು ಡಿಸೆಂಬರ್ 16ಕ್ಕೆ ಉಂಟಾಗಲಿದ್ದು, ಡಿಸೆಂಬರ್ 17 - 18ಕ್ಕೆ ಜೋರು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
The people of South Karnataka and the coastal areas were devastated by the storm of Cyclone Fangal, which had formed in the Bay of Bengal. It rained heavily all at once, and experienced the rain of the entire monsoon season in a single day.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 08:31 pm
HK News Staffer
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm