ಬ್ರೇಕಿಂಗ್ ನ್ಯೂಸ್
09-12-24 03:11 pm Mangalore Correspondent ಕರಾವಳಿ
ಉಳ್ಳಾಲ, ಡಿ.9: ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರು, ಉಚ್ಚಿಲದಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಒಂದರಲ್ಲಿ ತಾಂತ್ರಿಕ ದೋಷದಿಂದಾಗಿ ಹೈಡ್ರೋ ಕ್ಲೋರಿಕ್ ಆಸಿಡ್ ಸೋರಿಕೆಯಾಗಿದ್ದು, ಸ್ಥಳದಲ್ಲಿ ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಬೀಡುಬಿಟ್ಟಿದ್ದಾರೆ. ಎಂಆರ್ ಪಿಎಲ್ ತಜ್ಞರ ತಂಡ ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಕಾರವಾರದಿಂದ ಕೊಚ್ಚಿಗೆ ಹೈಡ್ರೋ ಕ್ಲೋರಿಕ್ ಆಸಿಡ್ ಹೊತ್ತೊಯ್ಯುತ್ತಿದ್ದ ಟ್ಯಾಂಕರಿನಲ್ಲಿ ತಾಂತ್ರಿಕ ದೋಷದಿಂದ ಆಸಿಡ್ ಸೋರಿಕೆಯುಂಟಾಗಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುವುದನ್ನು ಗಮನಿಸಿದ ಚಾಲಕ ಹೆದ್ದಾರಿ ಬಳಿ ಟ್ಯಾಂಕರನ್ನು ನಿಲ್ಲಿಸಿದ್ದಾರೆ. ತಕ್ಷಣ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆಸಿಡ್ ಸೋರಿಕೆಯಿಂದ ಶ್ವಾಸಕೋಶದ ತೊಂದರೆಯುಂಟಾಗುವ ಸಾಧ್ಯತೆಯಿದ್ದು, ಸ್ಥಳದಲ್ಲಿ ಅಗ್ನಿ ಶಾಮಕದಳ, ಉಳ್ಳಾಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಟ್ಯಾಂಕರನ್ನು ಸ್ಥಳೀಯ ನಿರ್ಮಾಣ ಹಂತದ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದು ,ಅನಿಲ ಸೋರಿಕೆ ಭಾಗಕ್ಕೆ ಎಮ್ಸಿಲ್ ಅಂಟಿಸಿದರೂ ಸೋರಿಕೆ ಮುಂದುವರಿದಿದ್ದು ಎಂಆರ್ ಪಿಎಲ್ ತಜ್ಞರ ತಂಡವನ್ನ ಸ್ಥಳಕ್ಕೆ ಕರೆಸಲಾಗಿದೆ.
ಹೆದ್ದಾರಿಯಲ್ಲಿ ವಾಹನ ಸಂಚಾರ ಯಥಾಸ್ಥಿತಿಯಲ್ಲಿದ್ದು, ಯಾವುದೇ ಸೂಚನೆಗಳನ್ನು ಸಂಬಂಧ ಪಟ್ಟ ಇಲಾಖೆ ಈವರೆಗೆ ಸ್ಥಳೀಯರಿಗೆ, ವಾಹನ ಸವಾರರಿಗೆ ನೀಡಿಲ್ಲ. ಏಸಿಡ್ ಸೋರಿಕೆಯಾದರೂ, ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಕಡಿಮೆ ಇರುವುದರಿಂದ ಪೊಲೀಸರು ಗಂಭೀರ ವಹಿಸಿದಂತಿಲ್ಲ. ಸದ್ಯ ಟ್ಯಾಂಕರನ್ನು ಎಂಆರ್ ಪಿಎಲ್ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿರುವುದಾಗಿ ಉಳ್ಳಾಲ ತಹಸೀಲ್ದಾರ್ ತಿಳಿಸಿದ್ದಾರೆ.
Mangalore Gas tanker faces leakage of Hydrochloric acid at kotekar, MRPL team arrives, major accident averted
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm