ಬ್ರೇಕಿಂಗ್ ನ್ಯೂಸ್
09-12-24 03:11 pm Mangalore Correspondent ಕರಾವಳಿ
ಉಳ್ಳಾಲ, ಡಿ.9: ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರು, ಉಚ್ಚಿಲದಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಒಂದರಲ್ಲಿ ತಾಂತ್ರಿಕ ದೋಷದಿಂದಾಗಿ ಹೈಡ್ರೋ ಕ್ಲೋರಿಕ್ ಆಸಿಡ್ ಸೋರಿಕೆಯಾಗಿದ್ದು, ಸ್ಥಳದಲ್ಲಿ ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಬೀಡುಬಿಟ್ಟಿದ್ದಾರೆ. ಎಂಆರ್ ಪಿಎಲ್ ತಜ್ಞರ ತಂಡ ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಕಾರವಾರದಿಂದ ಕೊಚ್ಚಿಗೆ ಹೈಡ್ರೋ ಕ್ಲೋರಿಕ್ ಆಸಿಡ್ ಹೊತ್ತೊಯ್ಯುತ್ತಿದ್ದ ಟ್ಯಾಂಕರಿನಲ್ಲಿ ತಾಂತ್ರಿಕ ದೋಷದಿಂದ ಆಸಿಡ್ ಸೋರಿಕೆಯುಂಟಾಗಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುವುದನ್ನು ಗಮನಿಸಿದ ಚಾಲಕ ಹೆದ್ದಾರಿ ಬಳಿ ಟ್ಯಾಂಕರನ್ನು ನಿಲ್ಲಿಸಿದ್ದಾರೆ. ತಕ್ಷಣ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆಸಿಡ್ ಸೋರಿಕೆಯಿಂದ ಶ್ವಾಸಕೋಶದ ತೊಂದರೆಯುಂಟಾಗುವ ಸಾಧ್ಯತೆಯಿದ್ದು, ಸ್ಥಳದಲ್ಲಿ ಅಗ್ನಿ ಶಾಮಕದಳ, ಉಳ್ಳಾಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಟ್ಯಾಂಕರನ್ನು ಸ್ಥಳೀಯ ನಿರ್ಮಾಣ ಹಂತದ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದು ,ಅನಿಲ ಸೋರಿಕೆ ಭಾಗಕ್ಕೆ ಎಮ್ಸಿಲ್ ಅಂಟಿಸಿದರೂ ಸೋರಿಕೆ ಮುಂದುವರಿದಿದ್ದು ಎಂಆರ್ ಪಿಎಲ್ ತಜ್ಞರ ತಂಡವನ್ನ ಸ್ಥಳಕ್ಕೆ ಕರೆಸಲಾಗಿದೆ.




ಹೆದ್ದಾರಿಯಲ್ಲಿ ವಾಹನ ಸಂಚಾರ ಯಥಾಸ್ಥಿತಿಯಲ್ಲಿದ್ದು, ಯಾವುದೇ ಸೂಚನೆಗಳನ್ನು ಸಂಬಂಧ ಪಟ್ಟ ಇಲಾಖೆ ಈವರೆಗೆ ಸ್ಥಳೀಯರಿಗೆ, ವಾಹನ ಸವಾರರಿಗೆ ನೀಡಿಲ್ಲ. ಏಸಿಡ್ ಸೋರಿಕೆಯಾದರೂ, ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಕಡಿಮೆ ಇರುವುದರಿಂದ ಪೊಲೀಸರು ಗಂಭೀರ ವಹಿಸಿದಂತಿಲ್ಲ. ಸದ್ಯ ಟ್ಯಾಂಕರನ್ನು ಎಂಆರ್ ಪಿಎಲ್ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿರುವುದಾಗಿ ಉಳ್ಳಾಲ ತಹಸೀಲ್ದಾರ್ ತಿಳಿಸಿದ್ದಾರೆ.
Mangalore Gas tanker faces leakage of Hydrochloric acid at kotekar, MRPL team arrives, major accident averted
03-04-26 07:35 am
HK News Staffer
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm