ಬ್ರೇಕಿಂಗ್ ನ್ಯೂಸ್
09-12-24 03:26 pm Mangalore Correspondent ಕರಾವಳಿ
ಪುತ್ತೂರು, ಡಿ.9: ವಿಟ್ಲ ಠಾಣೆ ವ್ಯಾಪ್ತಿಯ ಪೆರಾಜೆ ಗ್ರಾಮದಲ್ಲಿ ಹತ್ತು ವರ್ಷದ ಬಾಲಕಿಯೊಬ್ಬಳು ಜೋಕಾಲಿಗೆ ಸಿಲುಕಿ ಸಾವನ್ನಪ್ಪಿದ್ದಾಳೆಂದು ಹೇಳಲಾಗಿದ್ದ ಸುದ್ದಿಗೆ ತಿರುವು ಸಿಕ್ಕಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿದಾಗ, ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡುಬಂದಿದ್ದು, ಹೆತ್ತವರ ದೂರಿನಂತೆ ಅದೇ ರೀತಿಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಅದು ಆತ್ಮಹತ್ಯೆಯೋ, ಕೊಲೆಯೋ ಎನ್ನುವ ಬಗ್ಗೆ ಪೊಲೀಸರು ನಿರ್ಧಾರಕ್ಕೆ ಬಂದಿಲ್ಲ.
ಬುಡೋಳಿ ಗ್ರಾಮದ ಶೇರಾ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ, ಪೆರಾಜೆ ಗ್ರಾಮದ ಮದಕ ನಿವಾಸಿ ಕಿಶೋರ್ ಎಂಬವರ ಪುತ್ರಿ ತೀರ್ಥಶ್ರೀ(10) ಮೃತ ಬಾಲಕಿ. ಭಾನುವಾರ ರಾತ್ರಿ ಮನೆಯೊಳಗಿನ ಕೋಣೆಯಲ್ಲಿ ಬಟ್ಟೆ ಹಾಕಲು ಅಳವಡಿಸಿದ್ದ ಸ್ಟೀಲ್ ಸರಳಿಗೆ ಚೂಡಿದಾರದ ಹಗ್ಗದ ಒಂದು ತುದಿಯನ್ನು ಕಟ್ಟಿದ್ದು, ಮತ್ತೊಂದು ತುದಿಯನ್ನು ಬಾಲಕಿಯ ಕುತ್ತಿಗೆಗೆ ಕಟ್ಟಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ರಾತ್ರಿಯೇ ಮನೆಯವರು ನೋಡಿದ್ದು, ಹಗ್ಗ ಬಿಚ್ಚಿ ಬಾಲಕಿಯನ್ನು ರಕ್ಷಣೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಬೆಳಗ್ಗಿನ ವೇಳೆಗೆ ಸುದ್ದಿಯಾಗಿದ್ದು ಜೋಕಾಲಿಯಲ್ಲಿ ಸಿಲುಕಿ ಬಾಲಕಿ ಸಾವಿಗೀಡಾಗಿದ್ದಾಗಿ ವದಂತಿ ಹರಡಿತ್ತು. ಆದರೆ ಪೊಲೀಸರು ಮನೆಯವರನ್ನು ವಿಚಾರಣೆ ನಡೆಸಿದಾಗ, ಸೀರೆಯಲ್ಲ, ಚೂಡಿದಾರದ ಹಗ್ಗ ಎಂದು ತಿಳಿದುಬಂದಿತ್ತು. ಭಾನುವಾರ ಆಗಿದ್ದರಿಂದ ಬಾಲಕಿಗೆ ಶಾಲೆಗೆ ರಜೆ ಇದ್ದುದರಿಂದ ಬಾಲಕಿಗೆ ಮನೆಯಲ್ಲಿ ಏನು ಆಗಿತ್ತು, ಇಷ್ಟು ಸಣ್ಣ ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿದೆಯೇ, ಇದರ ಹಿಂದೆ ಬೇರೇನಾದರೂ ಕೈವಾಡ ಇದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ. ವಿಟ್ಲ ಪೊಲೀಸರು ಸದ್ಯ ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿದ್ದಾರೆ.
10 year old girl commits suicide using swing at Vitla in Mangalore. Initially was said she was playing on the swing and accidentally entangled her neck. But now police are suspecting it a suicide and investigating the case. The victim, Theerthashree, was the daughter of Kishore, a resident of Madala. She was a student of Shera School.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm