ಬ್ರೇಕಿಂಗ್ ನ್ಯೂಸ್
16-12-24 11:55 am Mangalore Correspondent ಕರಾವಳಿ
ಉಳ್ಳಾಲ, ಡಿ.16: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಂಡು ಸಮುದ್ರ ಸ್ನಾನಕ್ಕಿಳಿದಿದ್ದ ಮಹಿಳೆಯೊಬ್ಬರು ಸಮುದ್ರ ಪಾಲಾಗಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಅವರ ಪತ್ನಿ ಉಷಾ (72) ಮೃತ ಮಹಿಳೆ. ಉಷಾ ಅವರ ತಂಗಿ ನಿಶಾ ಭಂಡಾರಿ ಅವರ ಗಂಡ ಕರುಣಾಕರ ಭಂಡಾರಿ ಇತ್ತೀಚಿಗೆ ನಿಧನರಾಗಿದ್ದು ಇಂದು ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಸಂಬಂಧಿಕರ ಜೊತೆಗೆ ಸೋಮೇಶ್ವರಕ್ಕೆ ಆಗಮಿಸಿದ್ದರು. ಪುರೋಹಿತರು ಸಮುದ್ರ ತೀರದಲ್ಲಿ ಪಿಂಡಪ್ರದಾನ ನೆರವೇರಿಸಿದ ಬಳಿಕ ಉಷಾ ಅವರು ಸಮುದ್ರ ಸ್ನಾನ ಮಾಡಲು ತೆರಳಿದ್ದು ಕಾಲು ಜಾರಿ ಸಂಬಂಧಿಗಳು ನೋಡುತ್ತಿದ್ದಂತೆಯೇ ಸಮುದ್ರ ಪಾಲಾಗಿದ್ದಾರೆ.
ಸ್ಥಳೀಯರು ಮತ್ತು ನಾಡದೋಣಿಗರು ಸಮುದ್ರಕ್ಕೆ ಧುಮುಕಿ ಉಷಾ ಅವರನ್ನ ತೀರಕ್ಕೆ ಎಳೆದಿದ್ದು,ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದಾರೆ. ಮೃತದೇಹವನ್ನು
ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಾಸಿದ್ದಾರೆ.
ಉಷಾ ಅವರು ಎನ್ಎಮ್ ಪಿಟಿಯಲ್ಲಿ ನಲ್ವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿ ಅಸಿಸ್ಟೆಂಟ್ ಸೆಕ್ರೆಟರಿ ಆಗಿ ನಿವೃತ್ತರಾಗಿದ್ದರು. ಅವರು ಪುತ್ರಿಯನ್ನ ಅಗಲಿದ್ದಾರೆ.
ಶಾಶ್ವತ ಜೀವರಕ್ಷಕ ಸಿಬ್ಬಂದಿಗಳಿಲ್ಲ ;
ಸೋಮೇಶ್ವರ ಕಡಲ ತೀರಕ್ಕೆ ನಿತ್ಯವೂ ಪ್ರವಾಸಿಗರು ಭೇಟಿ ಕೊಡುತ್ತಾರೆ. ಹಾಗಿದ್ದರೂ ಪ್ರವಾಸೋದ್ಯಮ ಇಲಾಖೆಯು ಇಲ್ಲಿ ಶಾಶ್ವತ ಜೀವರಕ್ಷಕ ಸಿಬ್ಬಂದಿಯನ್ನ ನಿಯೋಜಿಸಿಲ್ಲ. ಕರಾವಳಿ ಕಾವಲು ಪಡೆಯ ಅರೆಕಾಲಿಕ ಜೀವರಕ್ಷಕ ಸಿಬ್ಬಂದಿಗಳು ಸೋಮೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಅನೇಕರ ಪ್ರಾಣ ರಕ್ಷಿಸಿದ್ದಾರೆ. ಶಾಶ್ವತವಾಗಿ ಇಲ್ಲಿ ಜೀವರಕ್ಷಕ ಸಿಬ್ಬಂದಿಗಳನ್ನ ನೇಮಿಸಿದಲ್ಲಿ ಸಮದ್ರ ತೀರದಲ್ಲಿ ನಡೆಯುವ ಪ್ರಾಣಹಾನಿಗಳನ್ನ ತಪ್ಪಿಸಬಹುದಾಗಿದೆ.
Mangalore Someshwara 72 year old women drowned in sea while performing Pinda pradana. The deceased has been identified as Usha from Derebail.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am