ಬ್ರೇಕಿಂಗ್ ನ್ಯೂಸ್
16-12-24 06:25 pm Mangalore Correspondent ಕರಾವಳಿ
ಮಂಗಳೂರು, ಡಿ.16: 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಕಾನೂನು ಉಲ್ಲಂಘಿಸಿ ಮದುವೆ ಮಾಡಿದ್ದಕ್ಕಾಗಿ ಬಾಲಕಿಯ ತಂದೆ, ತಾಯಿ, ಅತ್ತೆ, ಮಾವ ಮತ್ತು ಗಂಡನ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ದಾಖಲಾದ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಪೋಕ್ಸೋ ನ್ಯಾಯಾಲಯ ಆರೋಪಿತರಿಗೆ ಒಂದು ವರ್ಷ ಕಾಲ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಮೊಂಟೆಪದವು ನಿವಾಸಿ ಮಹಮ್ಮದ್ ಇಂತಿಯಾಜ್ (29), ಆತನ ತಂದೆ ಕೆ.ಐ ಮೊಹಮ್ಮದ್, ತಾಯಿ ಮೈಮೂನಾ, ಹುಡುಗಿ ತಂದೆ ಫರಂಗಿಪೇಟೆ ನಿವಾಸಿ ಅಬ್ದುಲ್ ಖಾದರ್ ಮತ್ತು ತಾಯಿ ರಮ್ಲತ್ ಒಂದು ವರ್ಷ ಶಿಕ್ಷೆಗೆ ಗುರಿಯಾಗಿದ್ದಾರೆ. 2023ರ ಮೇ 31ರಂದು ಮೊಂಟೆಪದವು ಗ್ರಾಮದ ಮದುವೆ ಗಂಡಿನ ಮನೆಯಲ್ಲಿ ಮಹಮ್ಮದ್ ಇಂತಿಯಾಜ್ ಜೊತೆಗೆ ಅಪ್ರಾಪ್ತ ಬಾಲಕಿಯನ್ನು ಮದುವೆ ಮಾಡಿಸಿದ್ದರು. ಹುಡುಗನ ತಂದೆ, ತಾಯಿ ಮತ್ತು ಹುಡುಗಿಯ ತಂದೆ, ತಾಯಿ ಸಮ್ಮುಖದಲ್ಲಿಯೇ ಮದುವೆ ನಡೆದಿತ್ತು.
ಆದರೆ ವಧುವಿಗೆ ಪ್ರಾಯ ಪೂರ್ತಿಯಾಗಿಲ್ಲ ಎಂಬ ಸುದ್ದಿ ಹಬ್ಬಿತ್ತು. ಇದರಂತೆ, ಮರುದಿನ ಜೂನ್ 1ರಂದು ತನಿಖೆ ನಡೆಸಿದ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ವರ ಮತ್ತು ವಧುವಿನ ತಂದೆ, ತಾಯಿ ಹಾಗೂ ಮದುವೆ ಗಂಡು ವಿರುದ್ಧ ಕೇಸು ದಾಖಲಿಸಿದ್ದರು. ಮಹಿಳಾ ಠಾಣೆಯ ಇನ್ಸ್ ಪೆಕ್ಟರ್ ರಾಜೇಂದ್ರ ಬಿ. ಅವರು ತನಿಖೆ ಪೂರ್ತಿಗೊಳಿಸಿ ಪೋಕ್ಸೋ ಕಾಯ್ದೆಯ ಕಲಂ 6 ಮತ್ತು ಬಾಲ್ಯ ವಿವಾಹ ಕಾಯ್ದೆ ಕಲಂ 9, 10, 11ರಂದು ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ಕೋರ್ಟಿನಲ್ಲಿ 10 ಸಾಕ್ಷಿದಾರರು ಮತ್ತು 22 ದಾಖಲೆಗಳನ್ನು ಪರಿಶೀಲಿಸಿ ಅಪರಾಧ ಸಾಬೀತಾಗಿದೆ ಎಂದು ನ್ಯಾಯಾಧೀಶ ಮಾನು ಕೆ.ಎಸ್ ತೀರ್ಪು ನೀಡಿದ್ದಾರೆ.
ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಕಲಂ 10 ಮತ್ತು 11ರಡಿಯಲ್ಲಿ ಒಂದು ವರ್ಷ ಕಾಲ ಆರೋಪಿತರಿಗೆ ತಲಾ ಒಂದು ವರ್ಷ ಕಾಲ ಶಿಕ್ಷೆ ಮತ್ತು ತಲಾ 5 ಸಾವಿರ ದಂಡ ವಿಧಿಸಲಾಗಿದೆ. ಸಂತ್ರಸ್ತೆ ಪರವಾಗಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಬದರಿನಾಥ ನಾಯರಿ ವಾದಿಸಿದ್ದರು. ಕೇಸು ದಾಖಲಾದ ಒಂದೂವರೆ ವರ್ಷದಲ್ಲಿ ಶಿಕ್ಷೆಯಾಗಿರುವುದು ವಿಶೇಷ.
The Additional District and Sessions Court - FTSC-II (Pocso) Judge Maanu K S has convicted five persons to one-year rigorous imprisonment and slapped a total fine of Rs 35,000, in a child marriage case under the Prohibition of Child Marriage Act
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm