ಬ್ರೇಕಿಂಗ್ ನ್ಯೂಸ್
16-12-24 06:25 pm Mangalore Correspondent ಕರಾವಳಿ
ಮಂಗಳೂರು, ಡಿ.16: 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಕಾನೂನು ಉಲ್ಲಂಘಿಸಿ ಮದುವೆ ಮಾಡಿದ್ದಕ್ಕಾಗಿ ಬಾಲಕಿಯ ತಂದೆ, ತಾಯಿ, ಅತ್ತೆ, ಮಾವ ಮತ್ತು ಗಂಡನ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ದಾಖಲಾದ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಪೋಕ್ಸೋ ನ್ಯಾಯಾಲಯ ಆರೋಪಿತರಿಗೆ ಒಂದು ವರ್ಷ ಕಾಲ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಮೊಂಟೆಪದವು ನಿವಾಸಿ ಮಹಮ್ಮದ್ ಇಂತಿಯಾಜ್ (29), ಆತನ ತಂದೆ ಕೆ.ಐ ಮೊಹಮ್ಮದ್, ತಾಯಿ ಮೈಮೂನಾ, ಹುಡುಗಿ ತಂದೆ ಫರಂಗಿಪೇಟೆ ನಿವಾಸಿ ಅಬ್ದುಲ್ ಖಾದರ್ ಮತ್ತು ತಾಯಿ ರಮ್ಲತ್ ಒಂದು ವರ್ಷ ಶಿಕ್ಷೆಗೆ ಗುರಿಯಾಗಿದ್ದಾರೆ. 2023ರ ಮೇ 31ರಂದು ಮೊಂಟೆಪದವು ಗ್ರಾಮದ ಮದುವೆ ಗಂಡಿನ ಮನೆಯಲ್ಲಿ ಮಹಮ್ಮದ್ ಇಂತಿಯಾಜ್ ಜೊತೆಗೆ ಅಪ್ರಾಪ್ತ ಬಾಲಕಿಯನ್ನು ಮದುವೆ ಮಾಡಿಸಿದ್ದರು. ಹುಡುಗನ ತಂದೆ, ತಾಯಿ ಮತ್ತು ಹುಡುಗಿಯ ತಂದೆ, ತಾಯಿ ಸಮ್ಮುಖದಲ್ಲಿಯೇ ಮದುವೆ ನಡೆದಿತ್ತು.
ಆದರೆ ವಧುವಿಗೆ ಪ್ರಾಯ ಪೂರ್ತಿಯಾಗಿಲ್ಲ ಎಂಬ ಸುದ್ದಿ ಹಬ್ಬಿತ್ತು. ಇದರಂತೆ, ಮರುದಿನ ಜೂನ್ 1ರಂದು ತನಿಖೆ ನಡೆಸಿದ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ವರ ಮತ್ತು ವಧುವಿನ ತಂದೆ, ತಾಯಿ ಹಾಗೂ ಮದುವೆ ಗಂಡು ವಿರುದ್ಧ ಕೇಸು ದಾಖಲಿಸಿದ್ದರು. ಮಹಿಳಾ ಠಾಣೆಯ ಇನ್ಸ್ ಪೆಕ್ಟರ್ ರಾಜೇಂದ್ರ ಬಿ. ಅವರು ತನಿಖೆ ಪೂರ್ತಿಗೊಳಿಸಿ ಪೋಕ್ಸೋ ಕಾಯ್ದೆಯ ಕಲಂ 6 ಮತ್ತು ಬಾಲ್ಯ ವಿವಾಹ ಕಾಯ್ದೆ ಕಲಂ 9, 10, 11ರಂದು ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ಕೋರ್ಟಿನಲ್ಲಿ 10 ಸಾಕ್ಷಿದಾರರು ಮತ್ತು 22 ದಾಖಲೆಗಳನ್ನು ಪರಿಶೀಲಿಸಿ ಅಪರಾಧ ಸಾಬೀತಾಗಿದೆ ಎಂದು ನ್ಯಾಯಾಧೀಶ ಮಾನು ಕೆ.ಎಸ್ ತೀರ್ಪು ನೀಡಿದ್ದಾರೆ.
ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಕಲಂ 10 ಮತ್ತು 11ರಡಿಯಲ್ಲಿ ಒಂದು ವರ್ಷ ಕಾಲ ಆರೋಪಿತರಿಗೆ ತಲಾ ಒಂದು ವರ್ಷ ಕಾಲ ಶಿಕ್ಷೆ ಮತ್ತು ತಲಾ 5 ಸಾವಿರ ದಂಡ ವಿಧಿಸಲಾಗಿದೆ. ಸಂತ್ರಸ್ತೆ ಪರವಾಗಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಬದರಿನಾಥ ನಾಯರಿ ವಾದಿಸಿದ್ದರು. ಕೇಸು ದಾಖಲಾದ ಒಂದೂವರೆ ವರ್ಷದಲ್ಲಿ ಶಿಕ್ಷೆಯಾಗಿರುವುದು ವಿಶೇಷ.
The Additional District and Sessions Court - FTSC-II (Pocso) Judge Maanu K S has convicted five persons to one-year rigorous imprisonment and slapped a total fine of Rs 35,000, in a child marriage case under the Prohibition of Child Marriage Act
22-07-25 03:02 pm
HK News Desk
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 01:27 pm
Mangalore Correspondent
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm