ಬ್ರೇಕಿಂಗ್ ನ್ಯೂಸ್
17-12-24 01:55 pm Mangaluru correspondent ಕರಾವಳಿ
ಮಂಗಳೂರು, ಡಿ.17: ಜನಪರ ಸಂಘಟನೆಗಳು ಹಮ್ಮಿಕೊಳ್ಳುವ ಧರಣಿ, ಪ್ರತಿಭಟನೆಗಳಿಗೆ ನಿಯಮಗಳನ್ನು ಮೀರಿ ನಿರ್ಬಂಧ ಹೇರುವ, ಹೋರಾಟಗಾರರ ಮೇಲೆ ದುರುದ್ದೇಶದಿಂದ ಎಫ್ಐಆರ್ ದಾಖಲಿಸುತ್ತಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಅವರನ್ನು ಅಮಾನತುಗೊಳಿಸಬೇಕು, ಅವರ ಮೇಲಿನ ಆರೋಪಗಳ ಕುರಿತು ಇಲಾಖಾ ತನಿಖೆ ಕೈಗೊಳ್ಳಬೇಕು, ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಈ ಹಿಂದಿನಂತೆ ಧರಣಿ, ಪ್ರತಿಭಟನೆಗಳಿಗೆ ಮುಕ್ತ ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿ ಡಿಸೆಂಬರ್ 23 ರಂದು ಬೆಳಗ್ಗೆ 10 ರಿಂದ ಅಪರಾಹ್ನ 1 ಗಂಟೆ ವರೆಗೆ ಬೃಹತ್ ಸಾಮೂಹಿಕ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ದ.ಕ.ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ ಪ್ರಕಟನೆಯಲ್ಲಿ ತಿಳಿಸಿದೆ.
ಕಮಿಷನರ್ ಅಗರ್ವಾಲ್ ಜನಪರ ಸಂಘಟನೆಗಳು, ಜನ ಸಾಮಾನ್ಯರ ಬೇಡಿಕೆಗಳ ಮೇಲಿನ ಹೋರಾಟಗಳ ಕುರಿತು ಪೂರ್ವಾಗ್ರಹಗಳನ್ನು ಹೊಂದಿದ್ದಾರೆ, ತಿರಸ್ಕಾರ ಮನೋಭಾವವನ್ನು ಪ್ರದರ್ಶಿಸುತ್ತಿದ್ದಾರೆ. ನೆಪಗಳನ್ನು ಮುಂದಿಟ್ಟು ಧರಣಿ, ಪ್ರತಿಭಟನೆಗಳಿಗೆ ಅನುಮತಿ ನಿರಾಕರಿಸುತ್ತಿದ್ದಾರೆ. ಸರಕಾರದ ಯಾವುದೇ ಆದೇಶ ಇಲ್ಲದಿದ್ದರೂ ಧರಣಿ, ಪ್ರತಿಭಟನೆಗಳು ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ಮಾತ್ರ ನಡೆಸಬೇಕು ಎಂದು ಸರ್ವಾಧಿಕಾರಿಯಂತೆ ಆದೇಶಿಸುತ್ತಿದ್ದಾರೆ.
ಧರಣಿ ನಿರತರ ಮೇಲೆ ಎಫ್ಐಆರ್ ಗಳನ್ನು ಹಾಕುತ್ತಿದ್ದಾರೆ. ಮತ್ತು ಇಂತಹ ನಿರ್ಬಂಧಗಳು, ನಿಷೇಧಗಳನ್ನು ಜನಪರ, ಜಾತ್ಯತೀತ ಸಂಘಟನೆಗಳಿಗಷ್ಟೆ ಸೀಮಿತಗೊಳಿಸುತ್ತಿದ್ದಾರೆ. ಬಲಪಂಥೀಯ ಸಂಘಟನೆಗಳಿಗೆ ಇಂತಹ ಯಾವುದೇ ನಿರ್ಬಂಧಗಳನ್ನು ವಿಧಿಸದೆ ಬಹಿರಂಗ ತಾರತಮ್ಯ ಅನುಸರಿಸುತ್ತಿದ್ದಾರೆ. ಇದಲ್ಲದೆ, ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ, ಜೂಜು, ಗ್ಯಾಂಬ್ಲಿಂಗ್ ಗಳಿಗೆ ಮುಕ್ತ ಅವಕಾಶ ಒದಗಿಸಿದ್ದಾರೆ.
ಇಂತಹ ಜನ ವಿರೋಧಿ, ಸರ್ವಾಧಿಕಾರಿ ಪೊಲೀಸ್ ಕಮೀಷನರ್ ರನ್ನು ತಕ್ಷಣ ಅಮಾನತುಗೊಳಿಸಿ ತನಿಖೆಗೆ ಒಳಪಡಿಸಬೇಕು ಎಂದು ಹಲವು ಹಂತದ ಹೋರಾಟಗಳನ್ನು ನಡೆಸಲಾಗಿದೆ. ಆದರೂ, ಯಾವುದೇ ಕ್ರಮಗಳನ್ನು ಕೈಗೊಳ್ಳದಿರುವುದರಿಂದ ಹೋರಾಟ ತೀವ್ರಗೊಳಿಸಲು ಜಂಟಿ ವೇದಿಕೆ ತೀರ್ಮಾನಿಸಿದೆ. ಅದರ ಭಾಗವಾಗಿ ಡಿಸೆಂಬರ್ 23 ರಂದು ಮಂಗಳೂರು ಮಿನಿ ವಿಧಾನಸೌಧದ ಮುಂಭಾಗ ದಲಿತ, ರೈತ, ಕಾರ್ಮಿಕ. ಮಹಿಳಾ, ಯುವಜನ ಸಂಘಟನೆಗಳೂ ಒಳಗೊಂಡು ಇಪ್ಪತ್ತೈದಕ್ಕೂ ಹೆಚ್ಚು ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಬೃಹತ್ ಧರಣಿ ಹಮ್ಮಿಕೊಳ್ಳಲಾಗಿದೆ, ಜಿಲ್ಲೆಯ ಎಲ್ಲ ತಾಲೂಕುಗಳಿಂದ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ ತಿಳಿಸಿದೆ.
Massive protest to be held against mangalore police commissioner Anupam Agarwal on Dec 23 by Like Minded organisation's demanding his suspension. IPS Anupam Agarwa has been alleged of corruption and Hitler rule by Dfyi. The organisation's now demand enquiry against commissioner.
22-07-25 03:02 pm
HK News Desk
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 01:27 pm
Mangalore Correspondent
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm