ಬ್ರೇಕಿಂಗ್ ನ್ಯೂಸ್
19-12-24 04:28 pm Mangalore Correspondent ಕರಾವಳಿ
ಮಂಗಳೂರು, ಡಿ.19: ಆಸ್ತಿ ಪಹಣಿ ಪತ್ರದಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು ನಾಲ್ಕು ಲಕ್ಷದ ಲಂಚದ ಬೇಡಿಕೆಯೊಡ್ಡಿದ್ದ ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು ರೆಡ್ ಹ್ಯಾಂಡ್ ಆಗಿ ಬಂಧಿಸಲ್ಪಟ್ಟಿದ್ದಾನೆ.
ಅಜ್ಜಿ ಪದ್ಮಾವತಿ ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿ ಪತ್ರದಲ್ಲಿ ಸಂಬಂಧಿತರನ್ನು ಸೇರಿಸುವ ಸಲುವಾಗಿ ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ್ ಕಚೇರಿಗೆ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ಸದರಿ ಅರ್ಜಿಯನ್ನು ಮುಲ್ಕಿ ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗೆ ಕಳುಹಿಸಿದ್ದು, ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಯಾವುದೇ ಕ್ರಮ ಕೈಗೊಳ್ಳದೇ ಬಾಕಿ ಇರಿಸಿಕೊಂಡಿದ್ದರು.
ಈ ಬಗ್ಗೆ ಪಿರ್ಯಾದಿದಾರರು ಡಿ.9ರಂದು ಅರ್ಜಿಯ ಬಗ್ಗೆ ಕಂದಾಯ ನಿರೀಕ್ಷಕರ ಕಚೇರಿಗೆ ಹೋಗಿ ವಿಚಾರಿಸಿದಾಗ, ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಪಹಣಿ ಪತ್ರದಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡಲು 4 ಲಕ್ಷ ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಚ್ಛೆ ಇಲ್ಲದ ಕಾರಣ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಅದರಂತೆ, ಲೋಕಾಯುಕ್ತ ಅಧಿಕಾರಿಗಳು ಟ್ರಾಪ್ ಮಾಡಿದ್ದು ಡಿ.19ರ ಬೆಳಗ್ಗೆ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಅವರು ವ್ಯಕ್ತಿಯಿಂದ ರೂ.4 ಲಕ್ಷ ಲಂಚದ ಹಣವನ್ನು ಸ್ವೀಕರಿಸುವಾಗಲೇ ಸುರತ್ಕಲ್ ಜಂಕ್ಷನ್ ಬಳಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು ಬಂಧಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಎಸ್ಪಿ ಎಂ.ಎ ನಟರಾಜ್ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ. ಕುಮಾರ್, ಪೊಲೀಸ್ ನಿರೀಕ್ಷಕ ಅಮಾನುಲ್ಲಾ ಎ, ಸುರೇಶ್ ಕುಮಾರ್ ಪಿ, ಚಂದ್ರಶೇಖರ್ ಕೆ.ಎನ್ ಇವರು ಸಿಬ್ಬಂದಿಗಳ ಜೊತೆ ಟ್ರಾಪ್ ಕಾರ್ಯಾಚರಣೆ ಕೈಗೊಂಡಿದ್ದರು.
Mangalore Mulki Revenue officer caught red handed for demanding bribe of Four lakhs by Lokayukta. The arrested has been identified as G S Dinesh.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am