ಬ್ರೇಕಿಂಗ್ ನ್ಯೂಸ್
20-12-24 04:40 pm Mangalore Correspondent ಕರಾವಳಿ
ಮಂಗಳೂರು, ಡಿ.20: ಕೇಂದ್ರ ಸಚಿವ ಅಮಿತ್ ಷಾ ಮತ್ತು ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಗುಜರಾತಿನ ಗೂಂಡಾ ಅಮಿತ್ ಷಾ, ಕೊಲೆಗಡುಕ, ಕುಡುಕ ಸಿಟಿ ರವಿ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು.
ಮಿನಿ ವಿಧಾನಸೌಧ ಬಳಿ ಪ್ರತಿಭಟನೆ ನಡೆಸಿ ಬಳಿಕ ಏಕಾಏಕಿ ರಸ್ತೆಗೆ ಬಂದು ಪ್ರತಿಭಟನೆ ನಡೆಸಿದರು. ಈ ವೇಳೆ, ಪೊಲೀಸರು ಬಂದು ರಸ್ತೆ ತಡೆ ಮಾಡದಂತೆ ತಡೆದು ಕಾರ್ಯಕರ್ತರನ್ನು ಬದಿಗೆ ಸರಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಅಮಿತ್ ಷಾ ಒಬ್ಬ ಕ್ರಿಮಿನಲ್ ಆಗಿದ್ದು ಗುಜರಾತಿನಿಂದ ಗಡೀಪಾರು ಮಾಡಲಾಗಿತ್ತು. ಅಂಥ ಕ್ರಿಮಿನಲ್ ಈಗ ಗೃಹ ಸಚಿವರಾಗಿದ್ದು ಈಗ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ. ಇಂಥವರು ಕೇಂದ್ರ ಸಚಿವರಾಗಿ ಮುಂದುವರಿಯಬಾರದು. ಅವರನ್ನು ಸಂಪುಟದಿಂದಲೇ ಕಿತ್ತು ಹಾಕಬೇಕು ಎಂದು ಆಗ್ರಹಿಸಿದರು.




ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ಮಾತನಾಡಿ, ಸಿಟಿ ರವಿ ಒಬ್ಬ ಕೊಲೆಗಾರ, ಕುಡುಕ ವ್ಯಕ್ತಿ. ಆತನನ್ನು ಅದೇ ರೀತಿ ಕರೆದರೆ ಈ ವ್ಯಕ್ತಿ ಮಾತ್ರ ಮಹಿಳೆಯೆಂದೂ ನೋಡದೆ ಅಶ್ಲೀಲವಾಗಿ ಮಾತನಾಡಿದ್ದಾನೆ. ಇಂಥವರು ಶಾಸಕರಾಗಿ ಇರುವುದಕ್ಕೆ ನಾಲಾಯಕ್. ಪರಿಷತ್ ಸ್ಥಾನದಿಂದ ಅನರ್ಹ ಮಾಡಬೇಕು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಬ್ಲಾಕ್ ಅಧ್ಯಕ್ಷರಾದ ಸುರೇಂದ್ರ ಕಂಬಳಿ, ಪ್ರಕಾಶ್ ಸಾಲ್ಯಾನ್, ಪುರುಷೋತ್ತಮ ಚಿತ್ರಾಪುರ, ಮುಖಂಡರಾದ ಸುರೇಶ್ ಬಳ್ಳಾಲ್, ಕೆ.ಹರಿನಾಥ್, ಸದಾಶಿವ್ ಉಳ್ಳಾಲ್, ಅಬ್ದುಲ್ ರವೂಫ್, ಕೆ.ಪಿ.ಥೋಮಸ್, ಭರತ್ ಮುಂಡೋಡಿ, ಕೆ.ಅಶ್ರಫ್, ಪದ್ಮನಾಭ ಅಮೀನ್, ಮಮತಾ ಗಟ್ಟಿ, ಶಾಲೆಟ್ ಪಿಂಟೊ, ಅಬ್ಬಾಸ್ ಅಲಿ, ಟಿ.ಹೊನ್ನಯ್ಯ, ನೀರಜ್ ಚಂದ್ರ ಪಾಲ್, ಟಿ.ಕೆ.ಸುಧೀರ್, ಜಯಶೀಲ ಅಡ್ಯಂತಾಯ, ಸಾಹುಲ್ ಹಮೀದ್, ವಿಶ್ವಾಸ್ ಕುಮಾರ್ ದಾಸ್, ಎ.ಸಿ.ವಿನಯರಾಜ್, ಸತೀಶ್ ಪೆಂಗಲ್, ಚೇತನ್ ಬೆಂಗ್ರೆ, ಕೆ.ಅಪ್ಪಿ, ಮ.ನ.ಪಾ ವಿಪಕ್ಷ ನಾಯಕ ಅನಿಲ್ ಕುಮಾರ್, ಗಿರೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Chikkamagaluru (Karnataka): BJP supporters and local leaders were taken into preventive custody for obstruction of traffic at Hanumathappa Circle here on Friday as they staged a protest here condemning the arrest of senior party leader leader C T Ravi.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm