ಬ್ರೇಕಿಂಗ್ ನ್ಯೂಸ್
21-12-24 08:16 pm Mangalore Correspondent ಕರಾವಳಿ
ಮಂಗಳೂರು, ಡಿ.21: ಕರಾವಳಿ ಉತ್ಸವ ಮತ್ತು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ಹೆಲಿಟೂರಿಸಂ ಆಯೋಜಿಸಿದೆ. ಹೆಲಿಕಾಪ್ಟರ್ ನಲ್ಲಿ ಮಂಗಳೂರು ನಗರವನ್ನು ಪ್ರದಕ್ಷಿಣೆ ಹಾಕುವ ಅಪೂರ್ವ ಅವಕಾಶವನ್ನು ಸಾರ್ವಜನಿಕರಿಗೆ ನೀಡಲಾಗಿದೆ.
ಡಿ.21ರಿಂದ 9 ದಿನಗಳ ಕಾಲ ಹೆಲಿಟೂರಿಸಂ ಇರಲಿದ್ದು ಮಂಗಳೂರು ನಗರದ ಸೌಂದರ್ಯವನ್ನು ಬಾನಂಗಳದಿಂದ ಸವಿಯುವ ಅವಕಾಶವನ್ನು ಜನರಿಗೆ ಒದಗಿಸುತ್ತಿದೆ. ತುಂಬೆ ಏರ್ ಟ್ಯಾಕ್ಸ್ ಕಂಪೆನಿಯ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ಹೆಲಿಟೂರಿಸಂ ಆಯೋಜಿಸಿದೆ. ಡಿ.21ರ ಬೆಳಗ್ಗೆ ಮಂಗಳೂರು ನಗರದ ಮೇರಿಹಿಲ್ ಹೆಲಿಪ್ಯಾಡ್ ನಲ್ಲಿ ಹೆಲಿ ಟೂರಿಸಂ ಅನ್ನು ಉದ್ಘಾಟಿಸಲಾಯಿತು.
ಸ್ವತಃ ದ. ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಎಸ್ಪಿ ಯತೀಶ್, ದ.ಕ ಜಿಲ್ಲೆಯ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಹಾಗೂ ಮಹಾಲಿಂಗ ನಾಯ್ಕರೊಂದಿಗೆ ಹೆಲಿಕಾಪ್ಟರ್ನಲ್ಲಿ ರೌಂಡ್ ಹೊಡೆದು ನಗರದ ಸೌಂದರ್ಯವನ್ನು ಕಣ್ತುಂಬಿಕೊಂಡರು. ಹೆಲಿಕಾಪ್ಟರ್ನಲ್ಲಿ ರೌಂಡ್ ಹೊಡೆದು ಮಂಗಳೂರು ನಗರ, ನೇತ್ರಾವತಿ ನದಿ ತೀರ, ಪಣಂಬೂರು ಬೀಚ್ ಸೌಂದರ್ಯವನ್ನು ವೀಕ್ಷಿಸಬಹುದಾಗಿದೆ. ಪ್ರತೀ ರೌಂಡ್ನಲ್ಲಿ ಆರು ಮಂದಿಗೆ ಹೆಲಿಕಾಪ್ಟರ್ ಸುತ್ತಾಟಕ್ಕೆ ಅವಕಾಶವಿದೆ. ಒಬ್ಬರಿಗೆ 4,500 ರೂ. ಪಾವತಿಸಬೇಕಾಗುತ್ತದೆ. ಒಂದು ರೌಂಡ್ 6-7 ನಿಮಿಷಗಳ ಕಾಲ ತೆಗೆದುಕೊಳ್ಳುತ್ತದೆ. ಮಂಗಳೂರು ನಗರವನ್ನು ನೇತ್ರಾವತಿ ಮತ್ತು ಫಲ್ಗುಣಿ ನದಿ ಸುತ್ತುವರಿದಿದ್ದು ಮೇಲ್ಭಾಗದಲ್ಲಿ ನೋಡಿದರೆ ರಮಣೀಯ ದೃಶ್ಯ ಕಾಣಿಸುತ್ತದೆ.
ಈ ಬಗ್ಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಹೆಲಿಟೂರಿಸಂ ಸಕ್ಸಸ್ ಆದಲ್ಲಿ ಮುಂದಕ್ಕೆ ಇದನ್ನು ಮತ್ತಷ್ಟು ವಿಸ್ತರಿಸುವ ಚಿಂತನೆ ಇದೆ. ಕೊಲ್ಲೂರು ಸೇರಿದಂತೆ ಪ್ರವಾಸಿ ತಾಣಗಳಾದ ಬೇಲೂರು -ಹಳೇಬೀಡು, ಬೇಕಲ್ ಫೋರ್ಟ್ಗಳಲ್ಲಿ ಹೆಲಿಟೂರಿಸಂ ಅಳವಡಿಸುವ ಬಗ್ಗೆ ಪ್ರಸ್ತಾಪಗಳಿದ್ದು ಪ್ರವಾಸಿಗರ ಆಸಕ್ತಿ ಅಳವಡಿಸಬಹುದಾಗಿದೆ ಎಂದರು.
District in-charge minister Dinesh Gundu Rao inaugurated the month-long Karavali Utsava on Saturday, December 21, at the Karavali Utsava Grounds, Lalbagh. The festival, running from December 21 to January 19, commenced with a grand and colorful procession from Aloysius PU College to the Utsava
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm