ಬ್ರೇಕಿಂಗ್ ನ್ಯೂಸ್
22-12-24 11:03 pm Mangalore Correspondent ಕರಾವಳಿ
ಮಂಗಳೂರು, ಡಿ.22: ತಾನು ಲೋಕಾಯುಕ್ತ ಅಧಿಕಾರಿಯೆಂದು ಹೇಳಿ ಫೋನ್ ಮಾಡಿ, ಪ್ರಕರಣವನ್ನು ಹಣ ಕೊಟ್ಟರೆ ಮುಗಿಸುತ್ತೇನೆಂದು ನಂಬಿಸಿ ಹಣ ಪೀಕಿಸಲು ಯತ್ನಿಸಿದ ಘಟನೆ ಬಗ್ಗೆ ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಆಂಧ್ರಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
2024ರ ಎಪ್ರಿಲ್ 6ರಂದು ಸೋಮೇಶ್ವರ ಪುರಸಭೆಯ ರೆವಿನ್ಯೂ ಅಧಿಕಾರಿ ಪುರುಷೋತ್ತಮ ಎಂಬವರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ ತಾನು ಮಂಗಳೂರು ಲೋಕಾಯುಕ್ತ ಇಲಾಖೆಯ ಅಧಿಕಾರಿ ಪ್ರಭಾಕರ ಎಂದು ಪರಿಚಯಿಸಿದ್ದ. ನಿಮ್ಮ ಮೇಲೆ ಭ್ರಷ್ಟಾಚಾರದ ಆರೋಪಗಳಿದ್ದು ಟೆಕ್ನಿಕಲ್ ಟೀಮ್ ಬರುವ ಮೊದಲು ಮಾತನಾಡಿ ಮುಗಿಸಿ ಬಿಡುವುದಾದರೆ ಮಾತುಕತೆ ಮಾಡಿ ಎಂದು ಹೇಳಿದ್ದ. ಪುರುಷೋತ್ತಮ ಅವರು ಮಂಗಳೂರು ಲೋಕಾಯುಕ್ತದಲ್ಲಿ ವಿಚಾರಿಸಿದಾಗ ಪ್ರಭಾಕರ ಎಂಬ ವ್ಯಕ್ತಿ ಇಲ್ಲವೆಂದು ತಿಳಿದುಬಂದಿತ್ತು. ಟ್ರು ಕಾಲರ್ ನಲ್ಲಿ ಪ್ರಭಾಕರ, ಲೋಕಾಯುಕ್ತ ಪಿಐ ಎಂದು ತೋರಿಸಿತ್ತು.
ಪುರಸಭೆಯಲ್ಲಿ ಆರೋಗ್ಯ ಇಲಾಖೆಯ ಇತರ ಅಧಿಕಾರಿಗಳಾದ ಲಿಲ್ಲಿ ನಾಯರ್ ಮತ್ತು ಕೃಷ್ಣ ಅವರಿಗು ಇದೇ ರೀತಿ ಬೆದರಿಕೆ ಕರೆಗಳು ಬಂದಿದ್ದವು. ಈ ಬಗ್ಗೆ ಅನುಮಾನಗೊಂಡ ಪುರುಷೋತ್ತಮ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ನಡೆಸಿದ್ದರು. ಇದೀಗ ಆರೋಪಿ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ನಿವಾಸಿ ಧನಂಜಯ ರೆಡ್ಡಿ ತೋಟಾ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಇದೇ ಮಾದರಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಠಾಣೆ ಮತ್ತು ಹೈದರಾಬಾದ್ ನಗರದ ಶಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಧಿಕಾರಿಗಳನ್ನು ಬೆದರಿಸಿ ಹಣ ಕೀಳಲು ಯತ್ನಿಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಎಸಿಪಿ ಧನ್ಯ ನಾಯಕ್ ಸೂಚನೆಯಂತೆ ಉಳ್ಳಾಲ ಪಿಎಸ್ಐ ಸಂತೋಷ್ ಕುಮಾರ್ ಮತ್ತು ಸಿಬಂದಿ ತಾಂತ್ರಿಕ ಸಾಕ್ಷ್ಯದಿಂದ ಆರೋಪಿಯನ್ನು ಪತ್ತೆ ಮಾಡಿ ಅರೆಸ್ಟ್ ಮಾಡಿದ್ದಾರೆ.
Mangalore Andhra native arrested by ullal police after posing as Lokayukta officer. The arrested has been identified as Dhananajaya Reddy.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm