ಬ್ರೇಕಿಂಗ್ ನ್ಯೂಸ್
14-12-20 10:52 pm Mangaluru Correspondent ಕರಾವಳಿ
ಮಂಗಳೂರು, ಡಿ.14: ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ಸಂದರ್ಭಗಳಲ್ಲಿ ತುರ್ತು ಸೇವೆಗಾಗಿ ದೇಶದಾದ್ಯಂತ ಜಾರಿಗೊಳ್ಳುತ್ತಿರುವ 112 ತುರ್ತು ಸಹಾಯವಾಣಿ ಸೇವೆಗೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲೂ ಚಾಲನೆ ನೀಡಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಸೋಮವಾರ ತಮ್ಮ ಕಚೇರಿ ಎದುರು 112 ತುರ್ತು ಸೇವೆಗೆ ನಿಯೋಜನೆಗೊಂಡಿರುವ 19 ವಾಹನಗಳಿಗೆ ಹಸಿರು ನಿಶಾನೆ ನೀಡಿದರು.
ದೇಶದಲ್ಲಿ ಒಂದೇ ತುರ್ತು ಕರೆ ಸಂಖ್ಯೆ ‘112’ ಜಾರಿಗೊಳ್ಳುತ್ತಿದೆ. ಅದರಂತೆ ಮಂಗಳೂರು ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲೂ ಈ ಸೇವೆಗೆ ಚಾಲನೆ ನೀಡಲಾಗಿದೆ. ರವಿವಾರದಂದೇ ಸೇವೆ ಆರಂಭಗೊಂಡಿದ್ದು ಸೋಮವಾರ ಅಧಿಕೃತ ಚಾಲನೆ ನೀಡಲಾಗಿದೆ. ರವಿವಾರ ತುರ್ತು ಸೇವೆಗೆ 24 ಕರೆಗಳು ಬಂದಿದ್ದು ತುರ್ತಾಗಿ ಸ್ಪಂದಿಸಲಾಗಿದೆ ಎಂದು ಆಯುಕ್ತ ವಿಕಾಸ್ ಕುಮಾರ್ ತಿಳಿಸಿದರು.

ತುರ್ತು ಸಂದರ್ಭಗಳಿಗೆ 100ಗೆ ಕರೆ ಮಾಡಿದರೆ ಸೇವೆ ದೊರೆಯುತ್ತಿತ್ತು. ಮುಂದೆ 112ಗೆ ಕರೆ ಮಾಡಿದರೆ ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ತುರ್ತು ಸೇವೆಗಳು ದೊರೆಯಲಿವೆ. 100ಕ್ಕೆ ಕರೆ ಮಾಡಿದರೂ ಇದು 112 ಸಂಖ್ಯೆಗೆ ಸಂಪರ್ಕಗೊಂಡು ಸೇವೆ ದೊರೆಯುತ್ತದೆ ಎಂದರು.
ಅತ್ಯಂತ ಕಡಿಮೆ ಅವಧಿಯಲ್ಲಿ ಸೇವೆ ಒದಗಿಸುವುದು ಇದರ ಉದ್ದೇಶ. ತುರ್ತು ಸಂದರ್ಭದಲ್ಲಿ ಕರೆ ಮಾಡಿದಾಗ ಬೆಂಗಳೂರಿನಲ್ಲಿರುವ ನಿಯಂತ್ರಣ ಕೊಠಡಿಗೆ ಮಾಹಿತಿ ಹೋಗಿ ಅಲ್ಲಿಂದ ಜಿಪಿಎಸ್ ಆಧಾರದಲ್ಲಿ ಸಹಾಯ ಬೇಕಿರುವ ಪ್ರದೇಶದಲ್ಲಿರುವ ಸಹಾಯವಾಣಿ ವಾಹನ/ ಪೊಲೀಸ್ ತಂಡಕ್ಕೆ ತಕ್ಷಣ ಮಾಹಿತಿ ರವಾನೆಯಾಗುತ್ತದೆ. ಅಗ್ನಿಶಾಮಕ ಮತ್ತಿತರ ವಿಪತ್ತು ನಿರ್ವಹಣಾ ತಂಡಗಳಿಗೆ ಸಂಬಂಧಿಸಿದ ಮಾಹಿತಿ ಕೂಡ ಕೂಡಲೇ ಆಯಾ ವಿಭಾಗಗಳಿಗೆ ಹೋಗುತ್ತದೆ. ಸ್ಥಳೀಯ ಪೊಲೀಸ್ ಠಾಣೆಗೂ ಮಾಹಿತಿ ರವಾನೆಯಾಗುತ್ತದೆ ಎಂದು ಆಯುಕ್ತರು ಮಾಹಿತಿ ನೀಡಿದರು.
ತುರ್ತು ಸೇವೆಯು ದಿನದ 24 ಗಂಟೆಯೂ ದೊರೆಯಲಿದ್ದು, ಸಿಬ್ಬಂದಿ ಪಾಳಿಯಲ್ಲಿ ಕೆಲಸ ಮಾಡಲಿದ್ದಾರೆ. ಗರಿಷ್ಠ 15ರಿಂದ 30 ನಿಮಿಷಗಳೊಳಗೆ ಸೇವೆ ಒದಗಿಸುವುದು ಇದರ ಉದ್ದೇಶ. ಸ್ಥಳ ಸಮೀಪದಲ್ಲಿದ್ದರೆ ಹೆಚ್ಚು ಬೇಗನೆ ಸೇವೆ ದೊರೆಯಲಿದೆ ಎಂದು ವಿಕಾಸ್ ಕುಮಾರ್ ತಿಳಿಸಿದರು.
ತುರ್ತು ಸೇವೆಗೆ ನಿಯೋಜನೆಗೊಂಡ 19 ವಾಹನಗಳು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರ್ಯಾಲಿ ನಡೆಸಿದವು. ಡಿಸಿಪಿಗಳಾದ ವಿನಯ ಗಾಂವ್ಕರ್, ಹರಿರಾಮ್ ಶಂಕರ್, ಸಂಚಾರ ವಿಭಾಗದ ಎಸಿಪಿಗಳಾದ ಎಂ.ಎ. ನಟರಾಜ್ ಉಪಾಸೆ, ಇನ್ಸ್ಪೆಕ್ಟರ್ ರಂಗೇಗೌಡ ಮತ್ತಿತರರು ಉಪಸ್ಥಿತರಿದ್ದರು.
Mangaluru city police commissioner Vikash Kumar Vikash on Monday, December 14 launched single emergency helpline number '112' under the Emergency Response Support System.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm