ಬ್ರೇಕಿಂಗ್ ನ್ಯೂಸ್
14-12-20 10:52 pm Mangaluru Correspondent ಕರಾವಳಿ
ಮಂಗಳೂರು, ಡಿ.14: ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ಸಂದರ್ಭಗಳಲ್ಲಿ ತುರ್ತು ಸೇವೆಗಾಗಿ ದೇಶದಾದ್ಯಂತ ಜಾರಿಗೊಳ್ಳುತ್ತಿರುವ 112 ತುರ್ತು ಸಹಾಯವಾಣಿ ಸೇವೆಗೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲೂ ಚಾಲನೆ ನೀಡಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಸೋಮವಾರ ತಮ್ಮ ಕಚೇರಿ ಎದುರು 112 ತುರ್ತು ಸೇವೆಗೆ ನಿಯೋಜನೆಗೊಂಡಿರುವ 19 ವಾಹನಗಳಿಗೆ ಹಸಿರು ನಿಶಾನೆ ನೀಡಿದರು.
ದೇಶದಲ್ಲಿ ಒಂದೇ ತುರ್ತು ಕರೆ ಸಂಖ್ಯೆ ‘112’ ಜಾರಿಗೊಳ್ಳುತ್ತಿದೆ. ಅದರಂತೆ ಮಂಗಳೂರು ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲೂ ಈ ಸೇವೆಗೆ ಚಾಲನೆ ನೀಡಲಾಗಿದೆ. ರವಿವಾರದಂದೇ ಸೇವೆ ಆರಂಭಗೊಂಡಿದ್ದು ಸೋಮವಾರ ಅಧಿಕೃತ ಚಾಲನೆ ನೀಡಲಾಗಿದೆ. ರವಿವಾರ ತುರ್ತು ಸೇವೆಗೆ 24 ಕರೆಗಳು ಬಂದಿದ್ದು ತುರ್ತಾಗಿ ಸ್ಪಂದಿಸಲಾಗಿದೆ ಎಂದು ಆಯುಕ್ತ ವಿಕಾಸ್ ಕುಮಾರ್ ತಿಳಿಸಿದರು.

ತುರ್ತು ಸಂದರ್ಭಗಳಿಗೆ 100ಗೆ ಕರೆ ಮಾಡಿದರೆ ಸೇವೆ ದೊರೆಯುತ್ತಿತ್ತು. ಮುಂದೆ 112ಗೆ ಕರೆ ಮಾಡಿದರೆ ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ತುರ್ತು ಸೇವೆಗಳು ದೊರೆಯಲಿವೆ. 100ಕ್ಕೆ ಕರೆ ಮಾಡಿದರೂ ಇದು 112 ಸಂಖ್ಯೆಗೆ ಸಂಪರ್ಕಗೊಂಡು ಸೇವೆ ದೊರೆಯುತ್ತದೆ ಎಂದರು.
ಅತ್ಯಂತ ಕಡಿಮೆ ಅವಧಿಯಲ್ಲಿ ಸೇವೆ ಒದಗಿಸುವುದು ಇದರ ಉದ್ದೇಶ. ತುರ್ತು ಸಂದರ್ಭದಲ್ಲಿ ಕರೆ ಮಾಡಿದಾಗ ಬೆಂಗಳೂರಿನಲ್ಲಿರುವ ನಿಯಂತ್ರಣ ಕೊಠಡಿಗೆ ಮಾಹಿತಿ ಹೋಗಿ ಅಲ್ಲಿಂದ ಜಿಪಿಎಸ್ ಆಧಾರದಲ್ಲಿ ಸಹಾಯ ಬೇಕಿರುವ ಪ್ರದೇಶದಲ್ಲಿರುವ ಸಹಾಯವಾಣಿ ವಾಹನ/ ಪೊಲೀಸ್ ತಂಡಕ್ಕೆ ತಕ್ಷಣ ಮಾಹಿತಿ ರವಾನೆಯಾಗುತ್ತದೆ. ಅಗ್ನಿಶಾಮಕ ಮತ್ತಿತರ ವಿಪತ್ತು ನಿರ್ವಹಣಾ ತಂಡಗಳಿಗೆ ಸಂಬಂಧಿಸಿದ ಮಾಹಿತಿ ಕೂಡ ಕೂಡಲೇ ಆಯಾ ವಿಭಾಗಗಳಿಗೆ ಹೋಗುತ್ತದೆ. ಸ್ಥಳೀಯ ಪೊಲೀಸ್ ಠಾಣೆಗೂ ಮಾಹಿತಿ ರವಾನೆಯಾಗುತ್ತದೆ ಎಂದು ಆಯುಕ್ತರು ಮಾಹಿತಿ ನೀಡಿದರು.
ತುರ್ತು ಸೇವೆಯು ದಿನದ 24 ಗಂಟೆಯೂ ದೊರೆಯಲಿದ್ದು, ಸಿಬ್ಬಂದಿ ಪಾಳಿಯಲ್ಲಿ ಕೆಲಸ ಮಾಡಲಿದ್ದಾರೆ. ಗರಿಷ್ಠ 15ರಿಂದ 30 ನಿಮಿಷಗಳೊಳಗೆ ಸೇವೆ ಒದಗಿಸುವುದು ಇದರ ಉದ್ದೇಶ. ಸ್ಥಳ ಸಮೀಪದಲ್ಲಿದ್ದರೆ ಹೆಚ್ಚು ಬೇಗನೆ ಸೇವೆ ದೊರೆಯಲಿದೆ ಎಂದು ವಿಕಾಸ್ ಕುಮಾರ್ ತಿಳಿಸಿದರು.
ತುರ್ತು ಸೇವೆಗೆ ನಿಯೋಜನೆಗೊಂಡ 19 ವಾಹನಗಳು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರ್ಯಾಲಿ ನಡೆಸಿದವು. ಡಿಸಿಪಿಗಳಾದ ವಿನಯ ಗಾಂವ್ಕರ್, ಹರಿರಾಮ್ ಶಂಕರ್, ಸಂಚಾರ ವಿಭಾಗದ ಎಸಿಪಿಗಳಾದ ಎಂ.ಎ. ನಟರಾಜ್ ಉಪಾಸೆ, ಇನ್ಸ್ಪೆಕ್ಟರ್ ರಂಗೇಗೌಡ ಮತ್ತಿತರರು ಉಪಸ್ಥಿತರಿದ್ದರು.
Mangaluru city police commissioner Vikash Kumar Vikash on Monday, December 14 launched single emergency helpline number '112' under the Emergency Response Support System.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm