ಬ್ರೇಕಿಂಗ್ ನ್ಯೂಸ್
26-12-24 11:57 am Mangalore Correspondent ಕರಾವಳಿ
ಮಂಗಳೂರು, ಡಿ.26: ಜಮ್ಮು ಕಾಶ್ಮೀರದ ಪೂಂಛ್ನಲ್ಲಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಂದಾಪುರದ ಬೀಜಾಡಿಯ ಯೋಧ ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ (31) ಅವರ ಪಾರ್ಥೀವ ಶರೀರವನ್ನು ಬುಧವಾರ ತಡರಾತ್ರಿ ಒಂದು ಗಂಟೆ ಸುಮಾರಿಗೆ ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಯಿತು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ವಿಮಾನ ನಿಲ್ದಾಣಕ್ಕೆ ಭೇಟಿ, ಸೇನಾ ವಿಮಾನದಿಂದ ಪಾರ್ಥೀವ ಶರೀರವನ್ನು ಹೊರಗೆ ತೆಗೆಯುವ ವೇಳೆ ಶವ ಪಟ್ಟಿಗೆಗೆ ಹೆಗಲು ನೀಡಿದರು. ಮಾಜಿ ಯೋಧರೂ ಆಗಿರುವ ಸಂಸದ ಬ್ರಿಜೇಶ್ ಚೌಟ ಅಗಲಿದ ಯೋಧನಿಗೆ ಅಂತಿಮ ನಮನ ಸಲ್ಲಿಸಿ, ಶವ ಪೆಟ್ಟಿಗೆ ಹೊತ್ತುಕೊಂಡು ಸೇನಾ ವಾಹನದತ್ತ ಬಂದರು. ಈ ಸಂದರ್ಭದಲ್ಲಿ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರೂ ಜೊತೆಗಿದ್ದು ಅಗಲಿದ ಯೋಧನಿಗೆ ನಮಿಸಿ ಸೇನಾ ಸಿಬಂದಿ ಜೊತೆಗೆ ನಿಂತರು. ಮಾಜಿ ಯೋಧ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿ.ಎಲ್. ಅವರೂ ಸೇನಾ ಸಿಬಂದಿಗಳಿಗೆ ಜತೆಯಾದರು.



ಯೋಧನ ಪಾರ್ಥಿವ ಶರೀರವನ್ನು ಇಂದು (ಡಿ.26)ರ ಬೆಳಗ್ಗೆ 9ಕ್ಕೆ ತೆಕ್ಕಟ್ಟೆಯಿಂದ ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ತಂದು ಮನೆಯಲ್ಲಿ ಸಕಲ ವಿಧಿಗಳನ್ನು ನೆರವೇರಿಸಲಾಗುವುದು. ಅಂತಿಮ ಸಂಸ್ಕಾರಕ್ಕೆ ಮೊದಲು ಬೀಜಾಡಿ ಪಡು ಶಾಲೆಯ ಆವರಣದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ಅನಂತರ ಬೀಜಾಡಿ ಕಡಲ ಕಿನಾರೆಯ ಸರಕಾರಿ ಜಾಗದಲ್ಲಿ ಸರಕಾರದ ಗೌರವದೊಡನೆ ಅಂತಿಮ ಸಂಸ್ಕಾರ ನಡೆಸಲಾಗುತ್ತದೆ.
ಪೆರ್ಡೂರು ಮುಳ್ಳುಗುಡ್ಡೆಯ ಮಂಜುಶ್ರೀಯನ್ನು ಮದುವೆಯಾಗಿದ್ದ ಅನೂಪ್ ಅವರಿಗೆ ಒಂದೂವರೆ ವರ್ಷದ ಹೆಣ್ಣು ಮಗುವಿದೆ. ಡಿಸೆಂಬರ್ನಲ್ಲಿ ರಜೆ ಪಡೆದು ಊರಿಗೆ ಬಂದಿದ್ದ ಅನೂಪ್ ಅವರು ಕೋಟೇಶ್ವರದ ಕೊಡಿಹಬ್ಬದಲ್ಲಿ ಪಾಲ್ಗೊಂಡು ಮಿತ್ರರೊಡನೆ ಸಮಯ ಕಳೆದಿದ್ದರು. ಕೊಡಿಹಬ್ಬಕ್ಕೆ ಬಂದವರು ಅದೇ ಸಂದರ್ಭದಲ್ಲಿ ಮಗಳ ಹುಟ್ಟುಹಬ್ಬವನ್ನೂ ಆಚರಿಸಿದ್ದರು.
Mangalore Mortal remains of martyr Anoop Poojary brought to Udupi with full honours, Mp Brijesh Chowta pays tribute. The mortal remains of martyr soldier Anoop Poojary, who made the ultimate sacrifice while serving in Poonch, Jammu & Kashmir, were brought to Udupi with full military honours on Thursday. Member of Parliament (MP) Kota Srinivas Poojary received the soldier’s body at Mangalore International Airport and oversaw its dignified transfer to Udupi
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm