ಬ್ರೇಕಿಂಗ್ ನ್ಯೂಸ್
29-12-24 10:02 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಸಮುದ್ರ ಪಾಲಾಗುತ್ತಿದ್ದ ಅಣ್ಣನ ಮಗಳನ್ನ ರಕ್ಷಿಸಿ ದಡಕ್ಕೆ ಕರೆತಂದ ವ್ಯಕ್ತಿಯೇ ರಕ್ಕಸ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಉಚ್ಚಿಲದ ಪೆರಿಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ಬೆಂಗಳೂರಿನ ಶಿವಾಜಿ ನಗರದ ಶಿವಾಜಿ ರೋಡ್ ನಿವಾಸಿ ಕೆ.ಎಂ. ಸಜ್ಜದ್ ಆಲಿ (45)ಮೃತ ವ್ಯಕ್ತಿ. ಸಜ್ಜದ್ ಅವರ ಅತ್ತಿಗೆ, ಮಕ್ಕಳು ಮತ್ತು ಸಹೋದರ ನಿನ್ನೆ ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಸಂಬಂಧಿಕರ ಮದುವೆ ಸಮಾರಂಭಕ್ಕೆ ಬಂದಿದ್ದರು. ಮದುವೆ ಮುಗಿಸಿ ಸಜ್ಜದ್ ಅವರ ಪತ್ನಿ ಅಲಿಮಾ ರಶೀದಾರವರ ಮಂಗಳೂರಿನ ಪಡೀಲಿನಲ್ಲಿರುವ ತಾಯಿ ಮನೆಯಲ್ಲಿ ರಾತ್ರಿ ಉಳಿದಿದ್ದರು. ಇಂದು ಬೆಂಗಳೂರಿನಿಂದ ಬಂದ ಸಜ್ಜದ್ ಆಲಿರವರು ಕುಟಂಬಸ್ಥರೊಂದಿಗೆ ಒಟ್ಟು 11 ಜನರು ಒಟ್ಟಾಗಿ ಮದ್ಯಾಹ್ನ ವೇಳೆಗೆ ಸೋಮೇಶ್ವರದ ಉಚ್ಚಿಲ ಪೆರಿಬೈಲು ಬೀಚಿಗೆ ಬಂದಿದ್ದರು.
ಬೀಚ್ ನಲ್ಲಿ ಕುಟುಂಬಸ್ಥರು ನೀರಾಟವಾಡುತ್ತಿದ್ದಾಗ ಸಜ್ಜದ್ ಅವರ ಅಣ್ಣನಾದ ದಿವಂಗತ ಸಾದಿಕ್ ಆಲಿಯವರ ಮಗಳು ಉಮೈ ಆಸಿಯಾ ಎಂಬಾಕೆ ಏಕಾಏಕಿ ಆಯತಪ್ಪಿ ಸಮುದ್ರದ ನೀರಿನ ಅಲೆಯಲ್ಲಿ ಕೊಚ್ಚಿಕೊಂಡು ಸ್ವಲ್ಪ ದೂರಕ್ಕೆ ಹೋಗಿದ್ದು ಪ್ರಾಣ ರಕ್ಷಣೆಗೆ ಬೊಬ್ಬಿಟ್ಟಿದ್ದಾಳೆ. ಕೂಡಲೇ ಸಜ್ಜದ್ ಅಲಿಯವರು ಸಮುದ್ರಕ್ಕೆ ಧುಮುಕಿ ಆಸಿಯಾಳನ್ನು ಎಳೆದು ತಂದು ದಡಕ್ಕೆ ಹಾಕಿದ್ದಾರೆ. ಅದೇ ಸಂದರ್ಭ ತೀರಕ್ಕೆ ಅಪ್ಪಳಿಸಿದ ದೈತ್ಯಾಕಾರದ ಮತ್ತೊಂದು ಅಲೆಯೊಂದು ಸಜ್ಜದ್ ಅವರನ್ನು
ಸಮುದ್ರದತ್ತ ಸೆಳೆದುಕೊಂಡಿದೆ. ಅದರ ಬೆನ್ನಲ್ಲೇ ಸಮುದ್ರದ ಅಲೆಯಲ್ಲಿ ಮತ್ತೆ ಸಜ್ಜದ್ ನೇರವಾಗಿ ತೀರಕ್ಕೆ ಬಂದು ಬಿದ್ದಿದ್ದಾರೆ. ಅಲೆಯಲ್ಲಿ ಅಪ್ಪಳಿಸಿದ ರೀತಿ ಬಿದ್ದಿದ್ದರಿಂದ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನ ಕೂಡಲೇ ದೇರಳಕಟ್ಟೆ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅಷ್ಟರಲ್ಲಿ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತೆನ್ನಲಾಗಿದೆ. ಜೀವನ್ಮರಣ ಸ್ಥಿತಿಯಲ್ಲಿದ್ದ ಸಜ್ಜದ್ ಅವರನ್ನ ಆಸ್ಪತ್ರೆಗೆ ಒಯ್ಯುತ್ತಿದ್ದ ದಾರಿ ಮಧ್ಯದ ಸಂಕೊಲಿಗೆ ಎಂಬಲ್ಲಿ ರೈಲ್ವೇ ಗೇಟ್ ಹಾಕಿದ್ದ ಕಾರಣ ಆಸ್ಪತ್ರೆ ಸೇರಲು ವಿಳಂಬವಾಗಿದೆ ಎನ್ನಲಾಗಿದೆ.
ಮೃತ ಕೆ.ಎಂ. ಸಜ್ಜದ್ ಅವರು ಪುತ್ತೂರಿನ ಅಲಿಮಾ ರಶೀದಾರವರನ್ನು ಮದುವೆಯಾಗಿದ್ದು ದಂಪತಿಗೆ ಮೂರು ಜನ ಮಕ್ಕಳಿದ್ದಾರೆ. ಮಕ್ಕಳ ವಿಧ್ಯಾಭ್ಯಾಸಕ್ಕಾಗಿ ಕಳೆದ 4 ವರುಷದಿಂದ ಪುತ್ತೂರಿನ ಬಾಡಿಗೆ ಫ್ಲ್ಯಾಟ್ ಒಂದರಲ್ಲಿ ಸಜ್ಜದ್ ಕುಟುಂಬ ವಾಸ ಮಾಡಿಕೊಂಡಿತ್ತು. ಸಜ್ಜದ್ ಆಲಿಯವರು ರಿಯಲ್ ಎಸ್ಟೇಟ್ ಕೆಲಸದ ನಿಮಿತ್ತ ಬೆಂಗಳೂರಿನಲ್ಲಿದ್ದು ವಾರಕ್ಕೊಮ್ಮೆ ಪುತ್ತೂರಿಗೆ ಬರುತ್ತಿದ್ದರು. ಮೃತ ಸಜ್ಜದ್ ಅವರ ತಮ್ಮ ಮಹಮ್ಮದ್ ಮುಜಮಿಲ್ ನೀಡಿದ ದೂರಿನಂತೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore 45 year old man from Bangalore drowned at Someshwara Beach trying to rescue brothers daughter. The deceased has been identified as Sajad Ali.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm