ಬ್ರೇಕಿಂಗ್ ನ್ಯೂಸ್
29-12-24 11:08 pm Mangalore Correspondent ಕರಾವಳಿ
ಮಂಗಳೂರು, ಡಿ. 29: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಉಳಾಯಿಬೆಟ್ಟು ಗ್ರಾಮದ ಫೆರ್ಮಾಯ್ ಚರ್ಚ್ ಬಳಿಯ ನಿವಾಸಿ ಮನೋಹರ್ ಪಿರೇರಾ (47) ಅವರ ಮನೆಗೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಭೇಟಿ ನೀಡಿ ಕುಟುಂಬಸ್ಥರ ಅಹವಾಲು ಆಲಿಸಿದ್ದಾರೆ.
ಮನೋಹರ್ ಪಿರೇರಾ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಕಾರಣ ಎಂದು ಹೇಳಿ ತಮ್ಮ ಕೊನೆಯ ವಾಟ್ಸಾಪ್ ವಿಡಿಯೋ ಮಾಡಿದ್ದರು. ತನ್ನ ಸಾಲವನ್ನು ಮರುಪಾವತಿಸಲು ನೀಡಿದ ಹಣವನ್ನು ಸಾಲಕ್ಕೆ ಜಮೆ ಮಾಡದೆ 9 ಲಕ್ಷ ರೂಪಾಯಿ ಯನ್ನು ಅನಿಲ್ ಲೋಬೊ ತಿಂದಿದ್ದಾನೆ ಎಂದು ಹೇಳಿದ್ದರು.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು ಪೊಲೀಸರು ಅನಿಲ್ ಲೋಬೊನನ್ನು ಬಂಧಿಸಿದ್ದರು.
ಮನೋಹರ್ ಪಿರೇರಾ ಕುಟುಂಬಕ್ಕೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿ ಪರಿಸರದ ನೂರಾರು ಮಂದಿ ಸಹಿಯನ್ನೊಳಗೊಂಡ ಮನವಿಯನ್ನು ರಾಜ್ಯದ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್, ಮುಖ್ಯಮಂತ್ರಿಗಳು, ಗೃಹ ಸಚಿವರು, ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ರವರಿಗೆ ನೀಡಲಾಗಿತ್ತು.
ಮನವಿಗೆ ಸ್ಪಂದಿಸಿದ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾoತ್ವನ ಹೇಳಿದ್ದಾರೆ. ನಿಷ್ಪಕ್ಷ ತನಿಖೆಗೆ ಸೂಕ್ತ ಕ್ರಮ ವಹಿಸುವುದಾಗಿ ಭರವಸೆ ನೀಡಿರುತ್ತಾರೆ. ಎಂಸಿ ಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊನಿಂದ ತೊಂದರೆಗೊಳಗಾದ ಇತರ ಗ್ರಾಹಕರು ಸ್ಥಳದಲ್ಲಿ ಹಾಜರಿದ್ದು ತಮ್ಮ ಅಳಲನ್ನು ಯು.ಟಿ. ಖಾದರ್ ಬಳಿ ತೋಡಿಕೊಂಡರು. ಸ್ಥಳೀಯರು ವಿಧಾನ ಸಭಾಧ್ಯಕ್ಷ ಯು. ಟಿ ಖಾದರ್ ಬಳಿ ದಿವಂಗತ ಮನೋಹರ್ ಅವರ ಬದುಕಿನ ಕಷ್ಟಗಳನ್ನು ವಿವರಿಸಿದರು. ಅವರ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರಗಿಸಬೇಕೆಂದು ಒತ್ತಾಯಿಸಿದರು.
Mangalore Speaker UT Khader visits house of late Manohar Pereira Family in Anil Lobo MCC Bank suicide case offering his condolences and assuring them of an impartial investigation into the circumstances surrounding the tragedy. He also promised strict action against those found culpable.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
22-07-25 11:19 am
Mangalore Correspondent
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm