ಬ್ರೇಕಿಂಗ್ ನ್ಯೂಸ್
01-01-25 10:40 am Mangalore Correspondent ಕರಾವಳಿ
ಉಳ್ಳಾಲ, ಜ 01: ಸಮುದ್ರ ತೀರದ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಸ್ನೇಹಿತರಿಬ್ಬರು ಹರಟೆ ಹೊಡೆಯುತ್ತಿದ್ದು, ಈ ವೇಳೆ ಆಯತಪ್ಪಿ ಬಾವಿಯೊಳಗಡೆ ಬಿದ್ದ ಸ್ಥಳೀಯ ಮೀನುಗಾರರೋರ್ವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ತಿಂಗಳ ಹಿಂದಷ್ಟೆ ಈಜು ಕೊಳದಲ್ಲಿ ಮೂವರು ಯುವತಿಯರು ಮುಳುಗಿ ಸಾವನ್ನಪ್ಪಿದ್ದ ಸೋಮೇಶ್ವರ ಉಚ್ಚಿಲದ ವಾಝ್ಕೊ ರೆಸಾರ್ಟ್ ಮುಂಭಾಗದಲ್ಲಿ ಮಂಗಳವಾರ ಮುಸ್ಸಂಜೆ ಹೊತ್ತಲ್ಲಿ ನಡೆದಿದೆ. ಉಚ್ಚಿಲ ವಾಝ್ಕೊ ರೆಸಾರ್ಟ್ ಬಳಿಯ ನಿವಾಸಿ ಶಶೀಂದ್ರ ಎಂ. ಉಚ್ಚಿಲ್ (74) ಸಾವನ್ನಪ್ಪಿದ ವ್ಯಕ್ತಿ.
ಶಶೀಂದ್ರ ಅವರು ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದು, ಇಂದು ಸಂಜೆ ಸ್ನೇಹಿತನೊಂದಿಗೆ ವಾಝ್ಕೋ ರೆಸಾರ್ಟ್ ಮುಂಭಾಗದ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಹರಟುತ್ತಿದ್ದರಂತೆ. ಈ ವೇಳೆ ಶಶೀಂದ್ರ ಅವರು ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾರೆ. ನುರಿತ ಈಜುಗಾರರಾದ ಶಶೀಂದ್ರ ಅವರು ತಲೆಕೆಳಗಾಗಿ ಬಾವಿಗೆ ಬಿದ್ದಿದ್ದು, ಬಾವಿಯೊಳಗೆ ಕೇವಲ ಮೂರಡಿಯಷ್ಟು ನೀರಿದ್ದ ಪರಿಣಾಮ ತಲೆಗೆ ಗಂಭೀರ ಏಟು ತಗುಲಿ ಸಾವನ್ನಪ್ಪಿದ್ದಾರೆ. ಬಳಿಕ ಸ್ಥಳೀಯರೇ ಮೃತದೇಹವನ್ನ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಶಶೀಂದ್ರ ಅವರಿಗೆ ಇಬ್ಬರು ಹೆಣ್ಮಕ್ಕಳಿದ್ದು ವಿವಾಹಿತರಾಗಿದ್ದಾರೆ. ಅವರ ಪತ್ನಿ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆ ಸೇರಿದ್ದು ಬುಧವಾರ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸುವ ತಯಾರಿ ನಡೆದಿತ್ತು.
ಕಳೆದ ನವೆಂಬರ್ ತಿಂಗಳಲ್ಲಿ ವಾಝ್ಕೊ ರೆಸಾರ್ಟ್ ಗೆ ವೀಕೆಂಡ್ ಕಳೆಯಲು ಬಂದಿದ್ದ ಮೈಸೂರಿನ ಮೂವರು ಯುವತಿಯರು ಈಜು ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಇದೀಗ ಅದೇ ರೆಸಾರ್ಟ್ ಮುಂಭಾಗದಲ್ಲೇ ನುರಿತ ಈಜುಗಾರರೋರ್ವರು ಸಣ್ಣ ಬಾವಿಗೆ ಬಿದ್ದು ಸಾವನ್ನಪ್ಪಿದ್ದು ಸ್ಥಳೀಯರಲ್ಲಿ ಯುವತಿಯರ ಪ್ರೇತಾತ್ಮಗಳ ಬಗ್ಗೆ ಆತಂಕ ಮನೆ ಮಾಡುವಂತಾಗಿದೆ.
Uchila man slips falls into old well accidentally, dies on spot in Mangalore. The deceased has been identified as Shashindra.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm