ಬ್ರೇಕಿಂಗ್ ನ್ಯೂಸ್
01-01-25 10:40 am Mangalore Correspondent ಕರಾವಳಿ
ಉಳ್ಳಾಲ, ಜ 01: ಸಮುದ್ರ ತೀರದ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಸ್ನೇಹಿತರಿಬ್ಬರು ಹರಟೆ ಹೊಡೆಯುತ್ತಿದ್ದು, ಈ ವೇಳೆ ಆಯತಪ್ಪಿ ಬಾವಿಯೊಳಗಡೆ ಬಿದ್ದ ಸ್ಥಳೀಯ ಮೀನುಗಾರರೋರ್ವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ತಿಂಗಳ ಹಿಂದಷ್ಟೆ ಈಜು ಕೊಳದಲ್ಲಿ ಮೂವರು ಯುವತಿಯರು ಮುಳುಗಿ ಸಾವನ್ನಪ್ಪಿದ್ದ ಸೋಮೇಶ್ವರ ಉಚ್ಚಿಲದ ವಾಝ್ಕೊ ರೆಸಾರ್ಟ್ ಮುಂಭಾಗದಲ್ಲಿ ಮಂಗಳವಾರ ಮುಸ್ಸಂಜೆ ಹೊತ್ತಲ್ಲಿ ನಡೆದಿದೆ. ಉಚ್ಚಿಲ ವಾಝ್ಕೊ ರೆಸಾರ್ಟ್ ಬಳಿಯ ನಿವಾಸಿ ಶಶೀಂದ್ರ ಎಂ. ಉಚ್ಚಿಲ್ (74) ಸಾವನ್ನಪ್ಪಿದ ವ್ಯಕ್ತಿ.
ಶಶೀಂದ್ರ ಅವರು ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದು, ಇಂದು ಸಂಜೆ ಸ್ನೇಹಿತನೊಂದಿಗೆ ವಾಝ್ಕೋ ರೆಸಾರ್ಟ್ ಮುಂಭಾಗದ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಹರಟುತ್ತಿದ್ದರಂತೆ. ಈ ವೇಳೆ ಶಶೀಂದ್ರ ಅವರು ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾರೆ. ನುರಿತ ಈಜುಗಾರರಾದ ಶಶೀಂದ್ರ ಅವರು ತಲೆಕೆಳಗಾಗಿ ಬಾವಿಗೆ ಬಿದ್ದಿದ್ದು, ಬಾವಿಯೊಳಗೆ ಕೇವಲ ಮೂರಡಿಯಷ್ಟು ನೀರಿದ್ದ ಪರಿಣಾಮ ತಲೆಗೆ ಗಂಭೀರ ಏಟು ತಗುಲಿ ಸಾವನ್ನಪ್ಪಿದ್ದಾರೆ. ಬಳಿಕ ಸ್ಥಳೀಯರೇ ಮೃತದೇಹವನ್ನ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.


ಶಶೀಂದ್ರ ಅವರಿಗೆ ಇಬ್ಬರು ಹೆಣ್ಮಕ್ಕಳಿದ್ದು ವಿವಾಹಿತರಾಗಿದ್ದಾರೆ. ಅವರ ಪತ್ನಿ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆ ಸೇರಿದ್ದು ಬುಧವಾರ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸುವ ತಯಾರಿ ನಡೆದಿತ್ತು.
ಕಳೆದ ನವೆಂಬರ್ ತಿಂಗಳಲ್ಲಿ ವಾಝ್ಕೊ ರೆಸಾರ್ಟ್ ಗೆ ವೀಕೆಂಡ್ ಕಳೆಯಲು ಬಂದಿದ್ದ ಮೈಸೂರಿನ ಮೂವರು ಯುವತಿಯರು ಈಜು ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಇದೀಗ ಅದೇ ರೆಸಾರ್ಟ್ ಮುಂಭಾಗದಲ್ಲೇ ನುರಿತ ಈಜುಗಾರರೋರ್ವರು ಸಣ್ಣ ಬಾವಿಗೆ ಬಿದ್ದು ಸಾವನ್ನಪ್ಪಿದ್ದು ಸ್ಥಳೀಯರಲ್ಲಿ ಯುವತಿಯರ ಪ್ರೇತಾತ್ಮಗಳ ಬಗ್ಗೆ ಆತಂಕ ಮನೆ ಮಾಡುವಂತಾಗಿದೆ.
Uchila man slips falls into old well accidentally, dies on spot in Mangalore. The deceased has been identified as Shashindra.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm