ಬ್ರೇಕಿಂಗ್ ನ್ಯೂಸ್
15-12-20 12:32 pm Mangalore Correspondent ಕರಾವಳಿ
ಬೆಂಗಳೂರು, ಡಿ.15: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಚಾರಿಟೆಬಲ್ ಎಂಡೋಮೆಂಟ್ ಕಾಯ್ದೆ (ಎಚ್ಆರ್ಐಸಿಇ ಕಾಯ್ದೆ) ಅನ್ವಯ, ಹಿಂದೂ ಧರ್ಮದವರ ಹೊರತಾಗಿ ಇತರರು ಧಾರ್ಮಿಕ ಇಲಾಖೆ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಬಾರದು ಎಂಬ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ದೂರಿನ ಬಗ್ಗೆ ವಾದ ಆಲಿಸಿದ ಬಳಿಕ "ಹಿಂದೂ ಧರ್ಮ ಎಂದೂ ಸಂಕುಚಿತವಲ್ಲ ; ಹಿಂದೂ ಧರ್ಮ ಇಷ್ಟೊಂದು ಸಂಕುಚಿತ ಮನೋಭಾವದವರನ್ನು ಒಳಗೊಂಡಿಲ್ಲ" ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಅಭಿಪ್ರಾಯಪಟ್ಟಿದ್ದಾರೆ.
ಸಂವಿಧಾನ ಜಾರಿಯಲ್ಲಿರುವ ದೇಶದಲ್ಲಿ ನಾವು ಇಂತಹ ಅರ್ಜಿಗಳನ್ನು ನ್ಯಾಯಾಲಯದಲ್ಲಿ ಪರಿಗಣಿಸುವುದಿಲ್ಲ. ನಮ್ಮನ್ನು 100 ವರ್ಷ ಹಿಂದೆ ತೆಗೆದುಕೊಂಡು ಹೋಗುವಂತಹ ಅರ್ಜಿಗಳನ್ನು ಸ್ವೀಕರಿಸಲಾಗದು " ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.
ಎಚ್ಆರ್ಐಸಿಇ ಕಾಯ್ದೆಯ ಸೆಕ್ಷನ್ 7ರ ಕಟ್ಟುನಿಟ್ಟಿನ ಜಾರಿಗೆ ಆಗ್ರಹಿಸಿ ಅರ್ಜಿ ಸಲ್ಲಿಸಲಾಗಿತ್ತು. ಇದರ ಅನ್ವಯ ಈ ಕಾಯ್ದೆಯಡಿ ರಚಿಸಿದ ಆಯುಕ್ತರ ಕಚೇರಿಯಲ್ಲಿ ಹಿಂದೂ ಧರ್ಮದವರನ್ನು ಹೊರತುಪಡಿಸಿ ಇತರರು ಸೇವೆ ಸಲ್ಲಿಸಲು ಅವಕಾಶ ನೀಡಬಾರದು ಎಂದು ಕೋರಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದಾಗ ಐಎಎಸ್ ಅಧಿಕಾರಿ ಎ.ಬಿ.ಇಬ್ರಾಹಿಂ ಅವರ ಹೆಸರನ್ನು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಯ ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿರುವುದನ್ನು ಅರ್ಜಿದಾರ ಎನ್.ಪಿ.ಅಮೃತೇಶ್ ಪ್ರಶ್ನಿಸಿದ್ದರು. ಇದಲ್ಲದೆ ಆಯುಕ್ತರ ಕಚೇರಿ ಅಧೀಕ್ಷಕರಾಗಿ ಮುಹಮ್ಮದ್ ದೇಶವ್ ಅಲಿಖಾನ್ ಅವರನ್ನು ನೇಮಕ ಮಾಡಿದ್ದನ್ನು ಭಾರತ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಇನ್ನೊಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು.
ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಅರ್ಜಿಗಳನ್ನು ವಜಾಗೊಳಿಸಿದೆ.
"ಉಪ ಆಯುಕ್ತರು ಸಿದ್ಧತೆಗಳ ಮೇಲ್ವಿಚಾರಣೆಗೆ ದೇವಸ್ಥಾನ ಪ್ರವೇಶಿಸಿದರೆ ಸ್ವರ್ಗ ಕೆಳಗೆ ಬೀಳುತ್ತದೆಯೇ? ಹಿಂದು ಧರ್ಮ ಎಂದೂ ಸಂಕುಚಿತವಲ್ಲ; ಹಿಂದೂ ಧರ್ಮ ಇಷ್ಟೊಂದು ಸಂಕುಚಿತ ಮನೋಭಾವದವರನ್ನು ಒಳಗೊಂಡಿಲ್ಲ" ಎಂದು ನ್ಯಾಯಪೀಠ ಹೇಳಿದೆ.
The Karnataka High Court on Monday dismissed writ petitions which sought for directions that non-Hindus should not be permitted to work in the office of Commissioners under the Karnataka Hindu Religious Institutions and Charitable Endowments Act(HRICE Act).
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm