ಬ್ರೇಕಿಂಗ್ ನ್ಯೂಸ್
02-01-25 02:09 pm Mangalore Correspondent ಕರಾವಳಿ
ಮಂಗಳೂರು, ಜ.2: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ತೆಂಗಿನಕಾಯಿ ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಹೀಗಾಗಿ ಬೇಡಿಕೆ ಹೆಚ್ಚಿರುವುದರಿಂದ ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹಣ ಕೊಡುತ್ತೇವೆ ಎಂದರೂ, ತೆಂಗಿನ ಕಾಯಿ ಸಿಗುತ್ತಾ ಇಲ್ಲ.
ಪ್ರಸ್ತುತ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ಕೆ.ಜಿಗೆ 60 ರೂ. ಇದ್ದರೆ, ಸಾಧಾರಣ ಮಟ್ಟದ ವ್ಯಾಪಾರಸ್ಥರು, ಅಂಗಡಿಗಳಲ್ಲಿ ಕೆ.ಜಿಗೆ 70-75 ರೂ. ಲಗೆ ಮಾರುತ್ತಿದ್ದಾರೆ. ಬಹುತೇಕ ನವೆಂಬರ್, ಡಿಸೆಂಬರ್ ತಿಂಗಳಲ್ಲಿ ತೆಂಗಿನಕಾಯಿ ಕೊಯ್ಲು ಆಗುವುದರಿಂದ ದರ ಕಡಿಮೆ ಆಗಬೇಕಿತ್ತು. ಆದರೆ ಮಂಗಳೂರು, ಕಾಸರಗೋಡು, ಉಡುಪಿ ಭಾಗದಲ್ಲಿ ದರ ಹೆಚ್ಚುತ್ತಲೇ ಇದೆ.
ಇದುವರೆಗೂ ಅಗತ್ಯದಷ್ಟು ತೆಂಗಿನಕಾಯಿ ಕರಾವಳಿ ಜಿಲ್ಲೆಗಳಲ್ಲಿ ಲಭಿಸುತ್ತಿತ್ತು. ಒಂದೆಡೆ ಹಬ್ಬಗಳ ಸೀಸನ್, ಮತ್ತೊಂದು ಕಡೆ ಶಬರಿಮಲೆ ಸೀಸನ್ ಇರುವುದರಿಂದ ತೆಂಗಿನಕಾಯಿಗೆ ಬೇಡಿಕೆ ವಿಪರೀತ ಹೆಚ್ಚಾಗಿದೆ. ತೆಂಗು ಬೆಳೆ ಹೆಚ್ಚಿರುವ ಮಂಡ್ಯ, ತುಮಕೂರಿನಲ್ಲಿಯೂ ಈ ಬಾರಿ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಆ ಕಡೆಯಿಂದ ಬರುವ ಎಳನೀರು ದರವೂ ಹೆಚ್ಚಾಗಿದೆ.
ಇದೇ ವೇಳೆ, ಕೊಬ್ಬರಿ ಕ್ವಿಂಟಾಲ್ಗೆ 17 ಸಾವಿರ ರೂ.ಗೆ ಏರಿದೆ. ಕೊಬ್ಬರಿ, ತೆಂಗಿನಕಾಯಿ ದರ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ತೆಂಗಿನೆಣ್ಣೆ ಬೆಲೆಯಲ್ಲೂ ಹೆಚ್ಚಳವಾಗಿದೆ. ಒಂದು ಲೀಟರ್ ತೆಂಗಿನ ಎಣ್ಣೆ ದರ 250 ರೂ. ದಾಟಿದೆ. ಇನ್ನೊಂದೆಡೆ ಬಿಸಿಲ ಝಳ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ಎಳನೀರಿಗೆ ಭಾರೀ ಬೇಡಿಕೆ ಇದೆ. ಗ್ರಾಮೀಣ ಮಾರುಕಟ್ಟೆಯಲ್ಲಿ ಎಳನೀರು ಒಂದಕ್ಕೆ 40 ರಿಂದ 50 ರೂ. ವರೆಗೆ ಇದ್ದರೆ, ನಗರ ಪ್ರದೇಶಗಳಲ್ಲಿ 65 ರೂ. ವರೆಗೆ ಇದೆ. ಎಳನೀರು ಪೂರೈಕೆಯೂ ಕುಸಿದಿದೆ.
Coconut Prices raise in price for new year Mangalore, 70 per kilo in Dakshina Kannada. Mandya and Tumkuru has seen price drop in coconut.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am