ಬ್ರೇಕಿಂಗ್ ನ್ಯೂಸ್
02-01-25 02:09 pm Mangalore Correspondent ಕರಾವಳಿ
ಮಂಗಳೂರು, ಜ.2: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ತೆಂಗಿನಕಾಯಿ ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಹೀಗಾಗಿ ಬೇಡಿಕೆ ಹೆಚ್ಚಿರುವುದರಿಂದ ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹಣ ಕೊಡುತ್ತೇವೆ ಎಂದರೂ, ತೆಂಗಿನ ಕಾಯಿ ಸಿಗುತ್ತಾ ಇಲ್ಲ.
ಪ್ರಸ್ತುತ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ಕೆ.ಜಿಗೆ 60 ರೂ. ಇದ್ದರೆ, ಸಾಧಾರಣ ಮಟ್ಟದ ವ್ಯಾಪಾರಸ್ಥರು, ಅಂಗಡಿಗಳಲ್ಲಿ ಕೆ.ಜಿಗೆ 70-75 ರೂ. ಲಗೆ ಮಾರುತ್ತಿದ್ದಾರೆ. ಬಹುತೇಕ ನವೆಂಬರ್, ಡಿಸೆಂಬರ್ ತಿಂಗಳಲ್ಲಿ ತೆಂಗಿನಕಾಯಿ ಕೊಯ್ಲು ಆಗುವುದರಿಂದ ದರ ಕಡಿಮೆ ಆಗಬೇಕಿತ್ತು. ಆದರೆ ಮಂಗಳೂರು, ಕಾಸರಗೋಡು, ಉಡುಪಿ ಭಾಗದಲ್ಲಿ ದರ ಹೆಚ್ಚುತ್ತಲೇ ಇದೆ.
ಇದುವರೆಗೂ ಅಗತ್ಯದಷ್ಟು ತೆಂಗಿನಕಾಯಿ ಕರಾವಳಿ ಜಿಲ್ಲೆಗಳಲ್ಲಿ ಲಭಿಸುತ್ತಿತ್ತು. ಒಂದೆಡೆ ಹಬ್ಬಗಳ ಸೀಸನ್, ಮತ್ತೊಂದು ಕಡೆ ಶಬರಿಮಲೆ ಸೀಸನ್ ಇರುವುದರಿಂದ ತೆಂಗಿನಕಾಯಿಗೆ ಬೇಡಿಕೆ ವಿಪರೀತ ಹೆಚ್ಚಾಗಿದೆ. ತೆಂಗು ಬೆಳೆ ಹೆಚ್ಚಿರುವ ಮಂಡ್ಯ, ತುಮಕೂರಿನಲ್ಲಿಯೂ ಈ ಬಾರಿ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಆ ಕಡೆಯಿಂದ ಬರುವ ಎಳನೀರು ದರವೂ ಹೆಚ್ಚಾಗಿದೆ.
ಇದೇ ವೇಳೆ, ಕೊಬ್ಬರಿ ಕ್ವಿಂಟಾಲ್ಗೆ 17 ಸಾವಿರ ರೂ.ಗೆ ಏರಿದೆ. ಕೊಬ್ಬರಿ, ತೆಂಗಿನಕಾಯಿ ದರ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ತೆಂಗಿನೆಣ್ಣೆ ಬೆಲೆಯಲ್ಲೂ ಹೆಚ್ಚಳವಾಗಿದೆ. ಒಂದು ಲೀಟರ್ ತೆಂಗಿನ ಎಣ್ಣೆ ದರ 250 ರೂ. ದಾಟಿದೆ. ಇನ್ನೊಂದೆಡೆ ಬಿಸಿಲ ಝಳ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ಎಳನೀರಿಗೆ ಭಾರೀ ಬೇಡಿಕೆ ಇದೆ. ಗ್ರಾಮೀಣ ಮಾರುಕಟ್ಟೆಯಲ್ಲಿ ಎಳನೀರು ಒಂದಕ್ಕೆ 40 ರಿಂದ 50 ರೂ. ವರೆಗೆ ಇದ್ದರೆ, ನಗರ ಪ್ರದೇಶಗಳಲ್ಲಿ 65 ರೂ. ವರೆಗೆ ಇದೆ. ಎಳನೀರು ಪೂರೈಕೆಯೂ ಕುಸಿದಿದೆ.
Coconut Prices raise in price for new year Mangalore, 70 per kilo in Dakshina Kannada. Mandya and Tumkuru has seen price drop in coconut.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm