ಬ್ರೇಕಿಂಗ್ ನ್ಯೂಸ್
02-01-25 02:09 pm Mangalore Correspondent ಕರಾವಳಿ
ಮಂಗಳೂರು, ಜ.2: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ತೆಂಗಿನಕಾಯಿ ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಹೀಗಾಗಿ ಬೇಡಿಕೆ ಹೆಚ್ಚಿರುವುದರಿಂದ ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹಣ ಕೊಡುತ್ತೇವೆ ಎಂದರೂ, ತೆಂಗಿನ ಕಾಯಿ ಸಿಗುತ್ತಾ ಇಲ್ಲ.
ಪ್ರಸ್ತುತ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ಕೆ.ಜಿಗೆ 60 ರೂ. ಇದ್ದರೆ, ಸಾಧಾರಣ ಮಟ್ಟದ ವ್ಯಾಪಾರಸ್ಥರು, ಅಂಗಡಿಗಳಲ್ಲಿ ಕೆ.ಜಿಗೆ 70-75 ರೂ. ಲಗೆ ಮಾರುತ್ತಿದ್ದಾರೆ. ಬಹುತೇಕ ನವೆಂಬರ್, ಡಿಸೆಂಬರ್ ತಿಂಗಳಲ್ಲಿ ತೆಂಗಿನಕಾಯಿ ಕೊಯ್ಲು ಆಗುವುದರಿಂದ ದರ ಕಡಿಮೆ ಆಗಬೇಕಿತ್ತು. ಆದರೆ ಮಂಗಳೂರು, ಕಾಸರಗೋಡು, ಉಡುಪಿ ಭಾಗದಲ್ಲಿ ದರ ಹೆಚ್ಚುತ್ತಲೇ ಇದೆ.
ಇದುವರೆಗೂ ಅಗತ್ಯದಷ್ಟು ತೆಂಗಿನಕಾಯಿ ಕರಾವಳಿ ಜಿಲ್ಲೆಗಳಲ್ಲಿ ಲಭಿಸುತ್ತಿತ್ತು. ಒಂದೆಡೆ ಹಬ್ಬಗಳ ಸೀಸನ್, ಮತ್ತೊಂದು ಕಡೆ ಶಬರಿಮಲೆ ಸೀಸನ್ ಇರುವುದರಿಂದ ತೆಂಗಿನಕಾಯಿಗೆ ಬೇಡಿಕೆ ವಿಪರೀತ ಹೆಚ್ಚಾಗಿದೆ. ತೆಂಗು ಬೆಳೆ ಹೆಚ್ಚಿರುವ ಮಂಡ್ಯ, ತುಮಕೂರಿನಲ್ಲಿಯೂ ಈ ಬಾರಿ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಆ ಕಡೆಯಿಂದ ಬರುವ ಎಳನೀರು ದರವೂ ಹೆಚ್ಚಾಗಿದೆ.
ಇದೇ ವೇಳೆ, ಕೊಬ್ಬರಿ ಕ್ವಿಂಟಾಲ್ಗೆ 17 ಸಾವಿರ ರೂ.ಗೆ ಏರಿದೆ. ಕೊಬ್ಬರಿ, ತೆಂಗಿನಕಾಯಿ ದರ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ತೆಂಗಿನೆಣ್ಣೆ ಬೆಲೆಯಲ್ಲೂ ಹೆಚ್ಚಳವಾಗಿದೆ. ಒಂದು ಲೀಟರ್ ತೆಂಗಿನ ಎಣ್ಣೆ ದರ 250 ರೂ. ದಾಟಿದೆ. ಇನ್ನೊಂದೆಡೆ ಬಿಸಿಲ ಝಳ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ಎಳನೀರಿಗೆ ಭಾರೀ ಬೇಡಿಕೆ ಇದೆ. ಗ್ರಾಮೀಣ ಮಾರುಕಟ್ಟೆಯಲ್ಲಿ ಎಳನೀರು ಒಂದಕ್ಕೆ 40 ರಿಂದ 50 ರೂ. ವರೆಗೆ ಇದ್ದರೆ, ನಗರ ಪ್ರದೇಶಗಳಲ್ಲಿ 65 ರೂ. ವರೆಗೆ ಇದೆ. ಎಳನೀರು ಪೂರೈಕೆಯೂ ಕುಸಿದಿದೆ.
Coconut Prices raise in price for new year Mangalore, 70 per kilo in Dakshina Kannada. Mandya and Tumkuru has seen price drop in coconut.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm