ಬ್ರೇಕಿಂಗ್ ನ್ಯೂಸ್
02-01-25 02:09 pm Mangalore Correspondent ಕರಾವಳಿ
ಮಂಗಳೂರು, ಜ.2: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ತೆಂಗಿನಕಾಯಿ ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಹೀಗಾಗಿ ಬೇಡಿಕೆ ಹೆಚ್ಚಿರುವುದರಿಂದ ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹಣ ಕೊಡುತ್ತೇವೆ ಎಂದರೂ, ತೆಂಗಿನ ಕಾಯಿ ಸಿಗುತ್ತಾ ಇಲ್ಲ.
ಪ್ರಸ್ತುತ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ಕೆ.ಜಿಗೆ 60 ರೂ. ಇದ್ದರೆ, ಸಾಧಾರಣ ಮಟ್ಟದ ವ್ಯಾಪಾರಸ್ಥರು, ಅಂಗಡಿಗಳಲ್ಲಿ ಕೆ.ಜಿಗೆ 70-75 ರೂ. ಲಗೆ ಮಾರುತ್ತಿದ್ದಾರೆ. ಬಹುತೇಕ ನವೆಂಬರ್, ಡಿಸೆಂಬರ್ ತಿಂಗಳಲ್ಲಿ ತೆಂಗಿನಕಾಯಿ ಕೊಯ್ಲು ಆಗುವುದರಿಂದ ದರ ಕಡಿಮೆ ಆಗಬೇಕಿತ್ತು. ಆದರೆ ಮಂಗಳೂರು, ಕಾಸರಗೋಡು, ಉಡುಪಿ ಭಾಗದಲ್ಲಿ ದರ ಹೆಚ್ಚುತ್ತಲೇ ಇದೆ.
ಇದುವರೆಗೂ ಅಗತ್ಯದಷ್ಟು ತೆಂಗಿನಕಾಯಿ ಕರಾವಳಿ ಜಿಲ್ಲೆಗಳಲ್ಲಿ ಲಭಿಸುತ್ತಿತ್ತು. ಒಂದೆಡೆ ಹಬ್ಬಗಳ ಸೀಸನ್, ಮತ್ತೊಂದು ಕಡೆ ಶಬರಿಮಲೆ ಸೀಸನ್ ಇರುವುದರಿಂದ ತೆಂಗಿನಕಾಯಿಗೆ ಬೇಡಿಕೆ ವಿಪರೀತ ಹೆಚ್ಚಾಗಿದೆ. ತೆಂಗು ಬೆಳೆ ಹೆಚ್ಚಿರುವ ಮಂಡ್ಯ, ತುಮಕೂರಿನಲ್ಲಿಯೂ ಈ ಬಾರಿ ಇಳುವರಿ ಕಡಿಮೆಯಾಗಿದೆ. ಹೀಗಾಗಿ ಆ ಕಡೆಯಿಂದ ಬರುವ ಎಳನೀರು ದರವೂ ಹೆಚ್ಚಾಗಿದೆ.
ಇದೇ ವೇಳೆ, ಕೊಬ್ಬರಿ ಕ್ವಿಂಟಾಲ್ಗೆ 17 ಸಾವಿರ ರೂ.ಗೆ ಏರಿದೆ. ಕೊಬ್ಬರಿ, ತೆಂಗಿನಕಾಯಿ ದರ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ತೆಂಗಿನೆಣ್ಣೆ ಬೆಲೆಯಲ್ಲೂ ಹೆಚ್ಚಳವಾಗಿದೆ. ಒಂದು ಲೀಟರ್ ತೆಂಗಿನ ಎಣ್ಣೆ ದರ 250 ರೂ. ದಾಟಿದೆ. ಇನ್ನೊಂದೆಡೆ ಬಿಸಿಲ ಝಳ ಹೆಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ಎಳನೀರಿಗೆ ಭಾರೀ ಬೇಡಿಕೆ ಇದೆ. ಗ್ರಾಮೀಣ ಮಾರುಕಟ್ಟೆಯಲ್ಲಿ ಎಳನೀರು ಒಂದಕ್ಕೆ 40 ರಿಂದ 50 ರೂ. ವರೆಗೆ ಇದ್ದರೆ, ನಗರ ಪ್ರದೇಶಗಳಲ್ಲಿ 65 ರೂ. ವರೆಗೆ ಇದೆ. ಎಳನೀರು ಪೂರೈಕೆಯೂ ಕುಸಿದಿದೆ.
Coconut Prices raise in price for new year Mangalore, 70 per kilo in Dakshina Kannada. Mandya and Tumkuru has seen price drop in coconut.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm