ಬ್ರೇಕಿಂಗ್ ನ್ಯೂಸ್
05-01-25 02:13 pm Mangalore Correspondent ಕರಾವಳಿ
ಮಂಗಳೂರು, ಜ.5 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಂಗಳೂರಿನಲ್ಲಿ ಸೈನಿಕ ಶಾಲೆ ಹಾಗೂ ಮಿಲಿಟರಿ ನೆಲೆ ಸ್ಥಾಪಿಸುವುದು ಸೇರಿದಂತೆ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ ರಕ್ಷಣಾ ಮೂಲಸೌಕರ್ಯ ಒದಗಿಸುವ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಸಲ್ಲಿಕೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸೈನಿಕ ಶಾಲೆಯನ್ನು ಆರಂಭಿಸುವುದರ ಜೊತೆಗೆ ಈ ಭಾಗದಲ್ಲಿ ಮಿಲಿಟರಿ ಬೇಸ್ ಅನ್ನು ಸ್ಥಾಪಿಸುವುದರಿಂದ ಯುವಜನತೆಯನ್ನು ದೇಶ ಸೇವೆಯತ್ತ ಪ್ರೇರೇಪಿಸುವುದಕ್ಕೆ ಅನುಕೂಲವಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ವಿಶ್ವದರ್ಜೆ ಶಿಕ್ಷಣ ಸಂಸ್ಥೆಗಳು ಇರುವ ಹಿನ್ನಲೆಯಲ್ಲಿ ಸೈನಿಕ ಶಾಲೆ ಸ್ಥಾಪಿಸುವುದು ಶೈಕ್ಷಣಿಕವಾಗಿಯೂ ಹೆಚ್ಚಿನ ಅನುಕೂಲ ಒದಗಿಸಲಿದೆ ಎಂದು ಮನವಿಯಲ್ಲಿ ಹೇಳಿದ್ದಾರೆ.





ದೇಶದ ರಕ್ಷಣಾ ಕ್ಷೇತ್ರಕ್ಕೆ ಮಂತ್ರಿಯಾಗಿ ಗಮನಾರ್ಹ ಕೊಡುಗೆ ನೀಡಿರುವ ಮಾಜಿ ರಕ್ಷಣಾ ಸಚಿವ ಜಾರ್ಜ್ ಫೆರ್ನಾಂಡಿಸ್, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ನಮ್ಮ ಕ್ಯಾಪ್ಟನ್ ಪ್ರಾಂಜಲ್ ಹಾಗೂ ಕಮಾಂಡರ್ ಜಾರ್ಜ್ ಮಾರ್ಟಿಸ್ ಅವರ ಬಲಿದಾನವನ್ನು ಸದಾ ಸ್ಮರಿಸುವಂತಹ ಕೆಲಸ ಕಾರ್ಯಗಳು ಮಂಗಳೂರಿನಲ್ಲಿ ರಕ್ಷಣಾ ಇಲಾಖೆಯಿಂದ ಆಗಬೇಕು ಎಂದು ಕ್ಯಾ. ಚೌಟ ಕೋರಿದ್ದಾರೆ
ತಮ್ಮ ಭೇಟಿ ವೇಳೆ ಕ್ಯಾ. ಚೌಟ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯರೂಪಕ್ಕೆ ತರಬಹುದಾದ ರಕ್ಷಣಾ ವಲಯಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆ ರಾಜನಾಥ್ ಸಿಂಗ್ ಅವರಿಂದ ಮಾರ್ಗದರ್ಶನವನ್ನು ಪಡೆದುಕೊಂಡರು. ಇದೇ ವೇಳೆ ಕ್ಯಾ. ಚೌಟ ಅವರು ಸಚಿವ ರಾಜನಾಥ್ ಸಿಂಗ್ ಅವರಿಗೆ ಕರಾವಳಿಯ ಸಂಸ್ಕೃತಿ ಸಂಕೇತವಾದ ಕಂಬಳದ ಭಾವಚಿತ್ರವನ್ನು ನೆನಪಿನ ಕಾಣಿಕೆಯಾಗಿ ನೀಡಿದರು.
Dakshina Kannada MP Capt Brijesh Chowta met with Defence Minister Rajnath Singh to propose significant defence infrastructure initiatives for the district, including the establishment of a Sainik School and a military base in Mangaluru.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm