ಬ್ರೇಕಿಂಗ್ ನ್ಯೂಸ್
05-01-25 10:51 pm Mangalore Correspondent ಕರಾವಳಿ
ಉಳ್ಳಾಲ, ಜ.5: ಉಳ್ಳಾಲ ತಾಲೂಕಿನ ಪ್ರತಿಷ್ಟಿತ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ನಿರ್ದೇಶಕರ ಚುನಾವಣೆ ಭಾನುವಾರ ನಡೆದಿದ್ದು, ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು ಅವರ ನೇತೃತ್ವದ ಕೋಟೆಕಾರು ಸಹಕಾರ ಅಭಿವೃದ್ಧಿ ಸಮಿತಿಯ ಸಮಾನ ಮನಸ್ಕ ಅಭ್ಯರ್ಥಿಗಳು 12 ಕ್ಷೇತ್ರಗಳಲ್ಲೂ ಸ್ಪರ್ಧಿಸಿ ಗೆದ್ದು ಬೀಗಿದ್ದಾರೆ. 12 ಕ್ಷೇತ್ರದಲ್ಲೂ ಸ್ಫರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಖಾತೆ ತೆರೆಯುವಲ್ಲಿ ಮುಗ್ಗರಿಸಿದ್ದಾರೆ.
ಭಾನುವಾರ ಕೋಟೆಕಾರಿನ ಸ್ಟೆಲ್ಲಾ ಮೆರೀಸ್ ಶಾಲೆಯಲ್ಲಿ ಬೆಳಗ್ಗೆ 9 ರಿಂದ 4 ಗಂಟೆಯ ವರೆಗೆ ಸಂಘದ ಸದಸ್ಯರಿಂದ ಮತದಾನ ಪ್ರಕ್ರಿಯೆ ನಡೆದಿದ್ದು, ಸಂಜೆ ವೇಳೆ ಮತ ಎಣಿಕೆ ನಡೆದಿದೆ. ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಮಂಗಳೂರು ಇಲ್ಲಿನ ಅಧೀಕ್ಷಕರಾದ ಬಿ.ನಾಗೇಂದ್ರ ಅವರು ಫಲಿತಾಂಶವನ್ನು ಘೋಷಿಸಿದರು. ಫಲಿತಾಂಶದಲ್ಲಿ ಕೋಟೆಕಾರು ಸಹಕಾರ ಅಭಿವೃದ್ಧಿ ಸಮಿತಿಯ ಸಮಾನ ಮನಸ್ಕ 12 ಅಭ್ಯರ್ಥಿಗಳೂ ಜಯ ಗಳಿಸಿದ್ದಾರೆ.




ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಅಬ್ಬುಸಾಲಿ ಕೆ.ಬಿ, ಕೃಷ್ಣಪ್ಪ ಸಾಲ್ಯಾನ್, ಗಂಗಾಧರ ಯು, ರಾಘವ ಉಚ್ಚಿಲ್, ರಾಘವ ಆರ್.ಉಚ್ಚಿಲ್, ಸಾಲಗಾರ ಅನುಸೂಚಿತ ಜಾತಿ ಕ್ಷೇತ್ರದಲ್ಲಿ ಕೃಷ್ಣಪ್ಪ, ಸಾಲಗಾರ ಅನುಸೂಚಿತ ಪಂಗಡ ಕ್ಷೇತ್ರದಲ್ಲಿ ಬಾಬು ನಾಯಕ್ , ಸಾಲಗಾರ ಹಿಂದುಳಿದ ವರ್ಗ "ಎ" ಕ್ಷೇತ್ರದಲ್ಲಿ ಅರುಣ್ ಕುಮಾರ್ ಯು, ಸಾಲಗಾರ ಹಿಂದುಳಿದ ವರ್ಗ "ಬಿ" ಕ್ಷೇತ್ರದಲ್ಲಿ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು, ಸಾಲಗಾರ ಮಹಿಳಾ ಮೀಸಲು ಸ್ಥಾನ ಕ್ಷೇತ್ರದಲ್ಲಿ ಸುನಿತಾ ಲೋಬೊ, ಸುರೇಖಾ ಚಂದ್ರಹಾಸ್ ಜಯ ಗಳಿಸಿದ್ದಾರೆ.
ಸಾಲಗಾರರಲ್ಲದ ಕ್ಷೇತ್ರದಲ್ಲಿ ಉದಯ ಕುಮಾರ್ ಶೆಟ್ಟಿ ಕೊಂಡಾಣಗುತ್ತು ಜಯ ಗಳಿಸಿದ್ದಾರೆ.
ಮತದಾನ ಕೇಂದ್ರದ ಬಳಿಯಲ್ಲೇ ಕೆಲವರಿಗೆ ಸಂಘದ ಸದಸ್ಯತನದ ನಕಲಿ ಗುರುತಿನ ಕಾರ್ಡ್ ಗಳನ್ನ ನೀಡಿ ಮತದಾನ ನಡೆಸುತ್ತಿರುವ ಬಗ್ಗೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ.
Mangalore Kotekar Samaja Seva Sahakari Sangha bank election, major victory. BJP members thronged to open bank accounts soon after their leaders were announced as winners.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm