ಬ್ರೇಕಿಂಗ್ ನ್ಯೂಸ್
05-01-25 10:51 pm Mangalore Correspondent ಕರಾವಳಿ
ಉಳ್ಳಾಲ, ಜ.5: ಉಳ್ಳಾಲ ತಾಲೂಕಿನ ಪ್ರತಿಷ್ಟಿತ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ನಿರ್ದೇಶಕರ ಚುನಾವಣೆ ಭಾನುವಾರ ನಡೆದಿದ್ದು, ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು ಅವರ ನೇತೃತ್ವದ ಕೋಟೆಕಾರು ಸಹಕಾರ ಅಭಿವೃದ್ಧಿ ಸಮಿತಿಯ ಸಮಾನ ಮನಸ್ಕ ಅಭ್ಯರ್ಥಿಗಳು 12 ಕ್ಷೇತ್ರಗಳಲ್ಲೂ ಸ್ಪರ್ಧಿಸಿ ಗೆದ್ದು ಬೀಗಿದ್ದಾರೆ. 12 ಕ್ಷೇತ್ರದಲ್ಲೂ ಸ್ಫರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಖಾತೆ ತೆರೆಯುವಲ್ಲಿ ಮುಗ್ಗರಿಸಿದ್ದಾರೆ.
ಭಾನುವಾರ ಕೋಟೆಕಾರಿನ ಸ್ಟೆಲ್ಲಾ ಮೆರೀಸ್ ಶಾಲೆಯಲ್ಲಿ ಬೆಳಗ್ಗೆ 9 ರಿಂದ 4 ಗಂಟೆಯ ವರೆಗೆ ಸಂಘದ ಸದಸ್ಯರಿಂದ ಮತದಾನ ಪ್ರಕ್ರಿಯೆ ನಡೆದಿದ್ದು, ಸಂಜೆ ವೇಳೆ ಮತ ಎಣಿಕೆ ನಡೆದಿದೆ. ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಮಂಗಳೂರು ಇಲ್ಲಿನ ಅಧೀಕ್ಷಕರಾದ ಬಿ.ನಾಗೇಂದ್ರ ಅವರು ಫಲಿತಾಂಶವನ್ನು ಘೋಷಿಸಿದರು. ಫಲಿತಾಂಶದಲ್ಲಿ ಕೋಟೆಕಾರು ಸಹಕಾರ ಅಭಿವೃದ್ಧಿ ಸಮಿತಿಯ ಸಮಾನ ಮನಸ್ಕ 12 ಅಭ್ಯರ್ಥಿಗಳೂ ಜಯ ಗಳಿಸಿದ್ದಾರೆ.
ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಅಬ್ಬುಸಾಲಿ ಕೆ.ಬಿ, ಕೃಷ್ಣಪ್ಪ ಸಾಲ್ಯಾನ್, ಗಂಗಾಧರ ಯು, ರಾಘವ ಉಚ್ಚಿಲ್, ರಾಘವ ಆರ್.ಉಚ್ಚಿಲ್, ಸಾಲಗಾರ ಅನುಸೂಚಿತ ಜಾತಿ ಕ್ಷೇತ್ರದಲ್ಲಿ ಕೃಷ್ಣಪ್ಪ, ಸಾಲಗಾರ ಅನುಸೂಚಿತ ಪಂಗಡ ಕ್ಷೇತ್ರದಲ್ಲಿ ಬಾಬು ನಾಯಕ್ , ಸಾಲಗಾರ ಹಿಂದುಳಿದ ವರ್ಗ "ಎ" ಕ್ಷೇತ್ರದಲ್ಲಿ ಅರುಣ್ ಕುಮಾರ್ ಯು, ಸಾಲಗಾರ ಹಿಂದುಳಿದ ವರ್ಗ "ಬಿ" ಕ್ಷೇತ್ರದಲ್ಲಿ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು, ಸಾಲಗಾರ ಮಹಿಳಾ ಮೀಸಲು ಸ್ಥಾನ ಕ್ಷೇತ್ರದಲ್ಲಿ ಸುನಿತಾ ಲೋಬೊ, ಸುರೇಖಾ ಚಂದ್ರಹಾಸ್ ಜಯ ಗಳಿಸಿದ್ದಾರೆ.
ಸಾಲಗಾರರಲ್ಲದ ಕ್ಷೇತ್ರದಲ್ಲಿ ಉದಯ ಕುಮಾರ್ ಶೆಟ್ಟಿ ಕೊಂಡಾಣಗುತ್ತು ಜಯ ಗಳಿಸಿದ್ದಾರೆ.
ಮತದಾನ ಕೇಂದ್ರದ ಬಳಿಯಲ್ಲೇ ಕೆಲವರಿಗೆ ಸಂಘದ ಸದಸ್ಯತನದ ನಕಲಿ ಗುರುತಿನ ಕಾರ್ಡ್ ಗಳನ್ನ ನೀಡಿ ಮತದಾನ ನಡೆಸುತ್ತಿರುವ ಬಗ್ಗೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ.
Mangalore Kotekar Samaja Seva Sahakari Sangha bank election, major victory. BJP members thronged to open bank accounts soon after their leaders were announced as winners.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 07:43 pm
Mangalore Correspondent
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm