ಬ್ರೇಕಿಂಗ್ ನ್ಯೂಸ್
05-01-25 10:51 pm Mangalore Correspondent ಕರಾವಳಿ
ಉಳ್ಳಾಲ, ಜ.5: ಉಳ್ಳಾಲ ತಾಲೂಕಿನ ಪ್ರತಿಷ್ಟಿತ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ನಿರ್ದೇಶಕರ ಚುನಾವಣೆ ಭಾನುವಾರ ನಡೆದಿದ್ದು, ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು ಅವರ ನೇತೃತ್ವದ ಕೋಟೆಕಾರು ಸಹಕಾರ ಅಭಿವೃದ್ಧಿ ಸಮಿತಿಯ ಸಮಾನ ಮನಸ್ಕ ಅಭ್ಯರ್ಥಿಗಳು 12 ಕ್ಷೇತ್ರಗಳಲ್ಲೂ ಸ್ಪರ್ಧಿಸಿ ಗೆದ್ದು ಬೀಗಿದ್ದಾರೆ. 12 ಕ್ಷೇತ್ರದಲ್ಲೂ ಸ್ಫರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಖಾತೆ ತೆರೆಯುವಲ್ಲಿ ಮುಗ್ಗರಿಸಿದ್ದಾರೆ.
ಭಾನುವಾರ ಕೋಟೆಕಾರಿನ ಸ್ಟೆಲ್ಲಾ ಮೆರೀಸ್ ಶಾಲೆಯಲ್ಲಿ ಬೆಳಗ್ಗೆ 9 ರಿಂದ 4 ಗಂಟೆಯ ವರೆಗೆ ಸಂಘದ ಸದಸ್ಯರಿಂದ ಮತದಾನ ಪ್ರಕ್ರಿಯೆ ನಡೆದಿದ್ದು, ಸಂಜೆ ವೇಳೆ ಮತ ಎಣಿಕೆ ನಡೆದಿದೆ. ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಮಂಗಳೂರು ಇಲ್ಲಿನ ಅಧೀಕ್ಷಕರಾದ ಬಿ.ನಾಗೇಂದ್ರ ಅವರು ಫಲಿತಾಂಶವನ್ನು ಘೋಷಿಸಿದರು. ಫಲಿತಾಂಶದಲ್ಲಿ ಕೋಟೆಕಾರು ಸಹಕಾರ ಅಭಿವೃದ್ಧಿ ಸಮಿತಿಯ ಸಮಾನ ಮನಸ್ಕ 12 ಅಭ್ಯರ್ಥಿಗಳೂ ಜಯ ಗಳಿಸಿದ್ದಾರೆ.
ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಅಬ್ಬುಸಾಲಿ ಕೆ.ಬಿ, ಕೃಷ್ಣಪ್ಪ ಸಾಲ್ಯಾನ್, ಗಂಗಾಧರ ಯು, ರಾಘವ ಉಚ್ಚಿಲ್, ರಾಘವ ಆರ್.ಉಚ್ಚಿಲ್, ಸಾಲಗಾರ ಅನುಸೂಚಿತ ಜಾತಿ ಕ್ಷೇತ್ರದಲ್ಲಿ ಕೃಷ್ಣಪ್ಪ, ಸಾಲಗಾರ ಅನುಸೂಚಿತ ಪಂಗಡ ಕ್ಷೇತ್ರದಲ್ಲಿ ಬಾಬು ನಾಯಕ್ , ಸಾಲಗಾರ ಹಿಂದುಳಿದ ವರ್ಗ "ಎ" ಕ್ಷೇತ್ರದಲ್ಲಿ ಅರುಣ್ ಕುಮಾರ್ ಯು, ಸಾಲಗಾರ ಹಿಂದುಳಿದ ವರ್ಗ "ಬಿ" ಕ್ಷೇತ್ರದಲ್ಲಿ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು, ಸಾಲಗಾರ ಮಹಿಳಾ ಮೀಸಲು ಸ್ಥಾನ ಕ್ಷೇತ್ರದಲ್ಲಿ ಸುನಿತಾ ಲೋಬೊ, ಸುರೇಖಾ ಚಂದ್ರಹಾಸ್ ಜಯ ಗಳಿಸಿದ್ದಾರೆ.
ಸಾಲಗಾರರಲ್ಲದ ಕ್ಷೇತ್ರದಲ್ಲಿ ಉದಯ ಕುಮಾರ್ ಶೆಟ್ಟಿ ಕೊಂಡಾಣಗುತ್ತು ಜಯ ಗಳಿಸಿದ್ದಾರೆ.
ಮತದಾನ ಕೇಂದ್ರದ ಬಳಿಯಲ್ಲೇ ಕೆಲವರಿಗೆ ಸಂಘದ ಸದಸ್ಯತನದ ನಕಲಿ ಗುರುತಿನ ಕಾರ್ಡ್ ಗಳನ್ನ ನೀಡಿ ಮತದಾನ ನಡೆಸುತ್ತಿರುವ ಬಗ್ಗೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ.
Mangalore Kotekar Samaja Seva Sahakari Sangha bank election, major victory. BJP members thronged to open bank accounts soon after their leaders were announced as winners.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm