ಬ್ರೇಕಿಂಗ್ ನ್ಯೂಸ್
06-01-25 08:29 pm Mangalore Correspondent ಕರಾವಳಿ
ಮಂಗಳೂರು, ಜ.6: ಅಪರೂಪದಲ್ಲಿ ಅಪರೂಪ ಎನ್ನುವಂತೆ ಮಹಿಳೆಯೊಬ್ಬರು ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಮಹಿಳೆಯ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಎಂಬವರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ. ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮಟ್ಟಿಗೆ ಅತ್ಯಂತ ಅಪರೂಪದ ಪ್ರಕರಣ ಎಂದೆನಿಸಿದೆ. 30 ವಾರಗಳಲ್ಲಿ ಅಂದರೆ ತಿಂಗಳು ಭರ್ತಿಯಾಗದೆ ಹೆರಿಗೆಯಾಗಿದ್ದು ನಾಲ್ಕು ಮಕ್ಕಳಿದ್ದುದರಿಂದ ಮಹಿಳೆಯನ್ನು ಏಳು ತಿಂಗಳಲ್ಲಿ ಸಿಸೇರಿಯನ್ ಮಾಡಲಾಗಿದೆ. ಸದ್ಯ ಮಕ್ಕಳಿಗೆ ಎನ್ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಲ್ಕು ಮಕ್ಕಳ ಜನನ ಬಹಳ ಅಪರೂಪವಾಗಿದ್ದು, ಇದು 7 ಲಕ್ಷ ಗರ್ಭಧಾರಣೆಗಳಲ್ಲಿ ಒಂದರಲ್ಲಿ ಮಾತ್ರ ಸಂಭವಿಸುತ್ತವೆ ಎಂದು ವೈದ್ಯರು ಹೇಳುತ್ತಾರೆ. ಸ್ತ್ರೀರೋಗ ತಜ್ಞೆ ಡಾ.ಜೋಯ್ಲೀನ್ ಡಿ ಅಲ್ಮೇಡಾ ಗರ್ಭಿಣಿಯ ಪ್ರಸವಪೂರ್ವ ಆರೈಕೆ ಮಾಡಿದ್ದು ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗದ ವೈದ್ಯಕೀಯ ತಂಡ ಮುತುವರ್ಜಿಯಿಂದ ತಾಯಿ- ಮಕ್ಕಳಿಗೆ ಆರೈಕೆ ಮಾಡಿದೆ. ದ.ಕ. ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಅಪರೂಪದ ಹೆರಿಗೆ ಪ್ರಕರಣ ಎನ್ನಲಾಗಿದೆ.
In a remarkable and heartwarming event in Mangalore, a mother gave birth to quadruplets at Fr. Muller's Hospital during her seventh month of pregnancy. Celebrations erupted as the hospital staff and family welcomed the safe arrival of four precious babies—two boys and two girls—all of whom are reported to be healthy and thriving.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm