ಬ್ರೇಕಿಂಗ್ ನ್ಯೂಸ್
06-01-25 08:29 pm Mangalore Correspondent ಕರಾವಳಿ
ಮಂಗಳೂರು, ಜ.6: ಅಪರೂಪದಲ್ಲಿ ಅಪರೂಪ ಎನ್ನುವಂತೆ ಮಹಿಳೆಯೊಬ್ಬರು ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಮಹಿಳೆಯ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಎಂಬವರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ. ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮಟ್ಟಿಗೆ ಅತ್ಯಂತ ಅಪರೂಪದ ಪ್ರಕರಣ ಎಂದೆನಿಸಿದೆ. 30 ವಾರಗಳಲ್ಲಿ ಅಂದರೆ ತಿಂಗಳು ಭರ್ತಿಯಾಗದೆ ಹೆರಿಗೆಯಾಗಿದ್ದು ನಾಲ್ಕು ಮಕ್ಕಳಿದ್ದುದರಿಂದ ಮಹಿಳೆಯನ್ನು ಏಳು ತಿಂಗಳಲ್ಲಿ ಸಿಸೇರಿಯನ್ ಮಾಡಲಾಗಿದೆ. ಸದ್ಯ ಮಕ್ಕಳಿಗೆ ಎನ್ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಲ್ಕು ಮಕ್ಕಳ ಜನನ ಬಹಳ ಅಪರೂಪವಾಗಿದ್ದು, ಇದು 7 ಲಕ್ಷ ಗರ್ಭಧಾರಣೆಗಳಲ್ಲಿ ಒಂದರಲ್ಲಿ ಮಾತ್ರ ಸಂಭವಿಸುತ್ತವೆ ಎಂದು ವೈದ್ಯರು ಹೇಳುತ್ತಾರೆ. ಸ್ತ್ರೀರೋಗ ತಜ್ಞೆ ಡಾ.ಜೋಯ್ಲೀನ್ ಡಿ ಅಲ್ಮೇಡಾ ಗರ್ಭಿಣಿಯ ಪ್ರಸವಪೂರ್ವ ಆರೈಕೆ ಮಾಡಿದ್ದು ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗದ ವೈದ್ಯಕೀಯ ತಂಡ ಮುತುವರ್ಜಿಯಿಂದ ತಾಯಿ- ಮಕ್ಕಳಿಗೆ ಆರೈಕೆ ಮಾಡಿದೆ. ದ.ಕ. ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಅಪರೂಪದ ಹೆರಿಗೆ ಪ್ರಕರಣ ಎನ್ನಲಾಗಿದೆ.
In a remarkable and heartwarming event in Mangalore, a mother gave birth to quadruplets at Fr. Muller's Hospital during her seventh month of pregnancy. Celebrations erupted as the hospital staff and family welcomed the safe arrival of four precious babies—two boys and two girls—all of whom are reported to be healthy and thriving.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 07:43 pm
Mangalore Correspondent
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm