ಬ್ರೇಕಿಂಗ್ ನ್ಯೂಸ್
12-01-25 10:06 pm Mangalore Correspondent ಕರಾವಳಿ
ಪುತ್ತೂರು, ಜ.12: ಪುತ್ತೂರು ಪಿಎಲ್ ಡಿ ಬ್ಯಾಂಕಿನ ನಿರ್ದೇಶಕರ ಚುನಾವಣೆಯಲ್ಲಿ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕೃತಗೊಳಿಸಿದ್ದಕ್ಕೆ ಸಿಟ್ಟಿಗೆದ್ದ ಶಾಸಕ ಅಶೋಕ್ ರೈ ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿಯನ್ನು ಖಡಕ್ ಭಾಷೆಯಲ್ಲಿ ತರಾಟೆಗೆ ಎತ್ತಿಕೊಂಡಿದ್ದಾರೆ.
ಪಿಎಲ್ ಡಿ ಬ್ಯಾಂಕಿನ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ರಾಜಶೇಖರ ಜೈನ್ ಮತ್ತು ಅಶೋಕ್ ರೈ ದೇರ್ಲ ಎಂಬವರ ನಾಮಪತ್ರವನ್ನು ಚುನಾವಣಾ ಅಧಿಕಾರಿ ಎಆರ್ ಒ ರಘು ತಿರಸ್ಕೃತಗೊಳಿಸಿದ್ದರು. ಸಕಾರಣವಿಲ್ಲದೆ ಮತ್ತು ಉದ್ದೇಶಪೂರ್ವಕವಾಗಿ ನಮ್ಮ ನಾಮಪತ್ರವನ್ನು ತಿರಸ್ಕಾರ ಮಾಡಿದ್ದಾರೆ ಎಂದು ಇಬ್ಬರು ಅಭ್ಯರ್ಥಿಗಳು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಕೆ.ಪಿ ಆಳ್ವರ ಗಮನಕ್ಕೆ ತಂದಿದ್ದಾರೆ. ಕೆ.ಪಿ ಆಳ್ವ ಅವರು ಶಾಸಕರಿಗೆ ಹೇಳಿ ಜೊತೆಯಾಗಿಯೇ ಬ್ಯಾಂಕಿಗೆ ತೆರಳಿದ್ದಾರೆ. ಶಾಸಕರು ಚುನಾವಣಾ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡಿದ್ದು ನಾಮಪತ್ರ ಪರಿಶೀಲನೆ ಮಾಡುವ ವೇಳೆ ಅದು ಸರಿಯಾಗಿಯೇ ಇತ್ತು. ಯಾವುದೇ ಕಾರಣವಿಲ್ಲದೆ ದುರುದ್ದೇಶದಿಂದ ಅಧಿಕಾರಿ ತಿರಸ್ಕಾರ ಮಾಡಿದ್ದಾರೆ ಎಂದು ನೇರ ಆರೋಪ ಮಾಡಿದರು.
ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿ ಯಾವ ಕೆಟಗರಿಯಲ್ಲಿ ಸ್ಪರ್ಧೆ ಮಾಡುತ್ತಿದ್ದಾನೆ ಎಂಬ ವಿಚಾರವನ್ನು ನಾಮಪತ್ರದಲ್ಲಿ ನಮೂದಿಸಬೇಕು, ನಮೂದಿಸಿದ ಬಳಿಕ ಉಳಿದ ಕೆಟಗರಿ ಹೆಸರನ್ನು ಅಳಿಸಬೇಕು, ಅಳಿಸದ ಕಾರಣ ನಾಮಪತ್ರ ತಿರಸ್ಕಾರ ಮಾಡಿದ್ದೇನೆ ಎಂದು ಶಾಸಕರಲ್ಲಿ ಚುನಾವಣಾಧಿಕಾರಿ ತಿಳಿಸಿದ್ದಾರೆ. ಆದರೆ ಕಾನೂನು ಪ್ರಕಾರ ಅಭ್ಯರ್ಥಿ ತಾನು ಸ್ಪರ್ಧಿಸುವ ವಿಭಾಗಕ್ಕೆ ರೈಟ್ ಗುರುತು ಹಾಕಬೇಕು ಎಂದು ಇದ್ದು ಉಳಿದ ಕೆಟಗರಿಯನ್ನು ಅಳಿಸಬೇಕೆಂಬ ನಿಯಮವಿರುವುದಿಲ್ಲ. ಆದರೆ ಅಧಿಕಾರಿ ಈ ವಿಚಾರದಲ್ಲಿ ತಪ್ಪು ಮಾಡಿದ್ದಾರೆ ಎಂದು ಶಾಸಕರು ಹೇಳಿದರು.
ಇದಲ್ಲದೆ, ನಾಮಪತ್ರ ತಿರಸ್ಕಾರ ಮಾಡಲು ಎಷ್ಟು ಲಂಚ ತಗೊಂಡಿದ್ದೀರಿ ಎಂದು ಅಧಿಕಾರಿ ರಘು ಅವರನ್ನು ನೇರವಾಗಿಯೇ ಪ್ರಶ್ನಿಸಿದ ಶಾಸಕ ಅಶೋಕ್ ರೈ ಅವರು ಪುತ್ತೂರಿನಲ್ಲಿ ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ಲಂಚ ತಗೊಂಡು ಮೋಸ ಮಾಡಲು ಬಿಡುವುದಿಲ್ಲ. ಉದ್ದೇಶಪೂರ್ವಕ ಈ ಕೃತ್ಯ ಮಾಡಿದ್ದೀರಿ ಎಂದು ಅಶೋಕ್ ರೈ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡರು.
ನಿಮ್ಮ ಮೇಲೆ ಮೊದಲೇ ನನಗೆ ದೂರು ಬಂದಿತ್ತು, ಸುಧಾರಿಸಬಹುದು ಎಂದು ಸುಮ್ಮನಿದ್ದೆ. ಈಗ ಬಣ್ಣ ಬಯಲಾಯಿತು. ಲಂಚ ತಗೊಂಡು, ಅನ್ಯಾಯ ಮಾಡಿದ ನಿಮ್ಮನ್ನು ಸಸ್ಪೆಂಡ್ ಮಾಡಿಸ್ತೇನೆ. ನಿಮಗೆ ಬೇಕಾದಂತೆ ಕಾನೂನು ಬದಲಾಯಿಸುವ ಅಧಿಕಾರ ನಿಮಗಿಲ್ಲ ಎಂದು ಅಧಿಕಾರಿಗೆ ಶಾಸಕರು ಎಚ್ಚರಿಸಿದರು.
PLD bank election, nomination of congress leader rejected, MLA Ashok Rai slams officer in Puttur.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 04:57 pm
HK News Desk
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am