ಬ್ರೇಕಿಂಗ್ ನ್ಯೂಸ್
13-01-25 09:08 pm Mangalore Correspondent ಕರಾವಳಿ
ಮಂಗಳೂರು, ಜ.13: ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ಇಡೀ ರಾಜ್ಯದಲ್ಲಿ ಮಾರ್ದನಿಸಿದೆ. ಬಿಜೆಪಿ ನಾಯಕರು, ಹಿಂದು ಸಮಾಜದ ಸಂತರು ರಾಜ್ಯದೆಲ್ಲೆಡೆ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿದ್ದು, ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್ಸಿ ಆಗಿರುವ ಎನ್. ರವಿಕುಮಾರ್, ಹಸುವಿನ ಕೆಚ್ಚಲು ಕೊಯ್ದಿರುವ ಘಟನೆ ಆಕಸ್ಮಿಕ ಆಗಿರುವುದಲ್ಲ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹಿಂದು ಭಾವನೆ ಕೆಣಕುವ ಯತ್ನ ನಡೆದಿದೆ. ಪ್ರಕರಣದಲ್ಲಿ ಯಾರೋ ಬಿಹಾರ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆತನೇ ಈ ಕೃತ್ಯ ಮಾಡಿದ್ದಾನೆ ಎಂಬುದಕ್ಕೆ ಯಾವ ದಾಖಲೆ ಇದೆ. ಅಲ್ಲದೆ, ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆಂದು ಹೇಳುತ್ತಿದ್ದಾರೆ. ಯಾವ ಕುಡಿದ ಮತ್ತಿನಲ್ಲೂ ಇಂಥ ಘೋರ ಕೃತ್ಯ ಎಸಗಲ್ಲ. ಇದು ಮನುಷ್ಯ ತಲೆತಗ್ಗಿಸುವ ಕೃತ್ಯ. ಈ ಕೃತ್ಯಕ್ಕೆ ಸಿಎಂ ಸಿದ್ದರಾಮಯ್ಯ ನಿರ್ಲಜ್ಜ ಆಡಳಿತವೇ ಕಾರಣ ಎಂದರು.
ಬಿಜೆಪಿ ಸರಕಾರ ಇದ್ದಾಗ ಗೋಹತ್ಯೆ ನಿಷೇಧ ಕಾಯ್ದೆ ತರಲಾಗಿತ್ತು. ಆದರೆ ಕಾಂಗ್ರೆಸ್ ಈ ಕಾನೂನು ಜಾರಿಯಲ್ಲಿದ್ದರೂ, ಅನುಷ್ಠಾನ ಮಾಡುತ್ತಿಲ್ಲ. ಇದರಿಂದಾಗಿ ಎಲ್ಲೆಂದರಲ್ಲಿ ಗೋವಿನ ಹತ್ಯೆ ಆಗುತ್ತಿದೆ, ಈಗ ಯಾವುದೋ ದ್ವೇಷದಲ್ಲಿ ಕೆಚ್ಚಲು ಕೊಯ್ದು ಮೃಗೀಯ ವರ್ತನೆ ತೋರಿದ್ದಾರೆ. ಸಿದ್ದರಾಮಯ್ಯ ಒಂದು ವರ್ಗದ ಬಗ್ಗೆ ತೀವ್ರ ಮಮಕಾರ ತೋರಿದ್ದರ ಪ್ರತಿಫಲ ಕಾಣುತ್ತಿದ್ದೇವೆ. ಈ ಕೃತ್ಯಕ್ಕೆ ಯಾರೆಲ್ಲ ಹೊಣೆಯಾಗಿದ್ದಾರೋ ಅವರೆಲ್ಲರನ್ನೂ ಬಂಧಿಸಬೇಕು. ಬಹುಮತದ ಆಡಳಿತ ಇದೆಯೆಂದು ಏನು ಮಾಡಿದರೂ ಆಗುತ್ತದೆ ಎಂದುಕೊಂಡಿದ್ದಾರೆ. ಕಾಂಗ್ರೆಸಿಗರು ಅಹಂಕಾರದ ಪರಮಾವಧಿ ತೋರಿಸುತ್ತಿದ್ದಾರೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಎಂಎಲ್ಸಿ ಕಿಶೋರ್ ಕುಮಾರ್, ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ನಂದನ್ ಮಲ್ಯ ಮತ್ತಿತರರು ಇದ್ದರು.
The BJP staged a protest against the chopping of udders of cows at Chamarajpet in central Bengaluru, in front of the Mini Vidhana Soudha in Mangaluru on Monday.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm