ಬ್ರೇಕಿಂಗ್ ನ್ಯೂಸ್
15-01-25 10:47 pm Udupi Correspondent ಕರಾವಳಿ
ಉಡುಪಿ, ಜ.16: ರಾತ್ರಿ ವೇಳೆ ಯಕ್ಷಗಾನ ನಡೆಯುತ್ತಿದ್ದಾಗ ಪೊಲೀಸ್ ಅನುಮತಿ ಪಡೆದಿಲ್ಲ ಎಂಬ ಕಾರಣವೊಡ್ಡಿ ಅರ್ಧಕ್ಕೆ ನಿಲ್ಲಿಸಲು ಯತ್ನಿಸಿದ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಠಾಣೆ ವ್ಯಾಪ್ತಿಯ ಶಿರ್ಲಾಲಿನಲ್ಲಿ ನಡೆದಿದೆ.
ಮುಂಡ್ಲಿಯ ಈಶ್ವರ ಯಕ್ಷಗಾನ ಮಂಡಳಿಯಿಂದ ಯಕ್ಷಗಾನ ಆಯೋಜನೆಗೊಂಡಿತ್ತು. ರಾತ್ರಿ 10 ಗಂಟೆ ನಂತರ ಧ್ವನಿವರ್ಧಕ ಬಳಸಲು ಸುಪ್ರೀಂ ಕೋರ್ಟ್ ಅನುಮತಿ ಇಲ್ಲ ಎಂದು ಅಜೆಕಾರು ಉಪನಿರೀಕ್ಷಕ ಶುಭಕರ್ ಆಕ್ಷೇಪ ಎತ್ತಿದ್ದಾರೆ. ಈ ವೇಳೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.
ಕಾರ್ಯಕ್ರಮ ನಿಲ್ಲಿಸದಿದ್ದರೆ ಯಕ್ಷಗಾನ ಮಂಡಳಿ ಅಧ್ಯಕ್ಷನನ್ನು ಬಂಧಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಯಕ್ಷಗಾನಕ್ಕಾಗಿ ಜನವರಿ 10 ರಂದು ಪಂಚಾಯತ್ ಪರವಾನಿಗೆ ಪಡೆಯಲು ಪಿಡಿಒ ಬಳಿ ಆಯೋಜಕರು ತೆರಳಿದ್ದರು. ಮೂರು ದಿನಗಳ ರಜೆಯಿದ್ದ ಕಾರಣಕ್ಕೆ ಪಂಚಾಯತ್ ಅನುಮತಿ ದೊರಕಿರಲಿಲ್ಲ. ಜನವರಿ 13ರಂದು ಅನುಮತಿಗಾಗಿ ಆಯೋಜಕರು ಅಜೆಕಾರು ಠಾಣೆಗೆ ತೆರಳಿದ್ದರು. ಈ ವೇಳೆ, ಪಂಚಾಯತ್ ಅನುಮತಿ ತರುವಂತೆ ಪೊಲೀಸರು ತಾಕೀತು ಮಾಡಿದ್ದಾರೆ. ಹೀಗಾಗಿ ಧ್ವನಿವರ್ಧಕ ಬಳಸಲು ಅನುಮತಿ ಸಿಕ್ಕಿರಲಿಲ್ಲ.
ಇದೇ ನೆಪದಲ್ಲಿ ಪೊಲೀಸರು ಯಕ್ಷಗಾನ ನಿಲ್ಲಿಸಲು ಮುಂದಾಗಿದ್ದಾರೆ. ಆದರೆ ಗ್ರಾಮಸ್ಥರು ಯಾವುದೇ ಕಾರಣಕ್ಕೂ ಯಕ್ಷಗಾನ ನಿಲ್ಲಿಸಲು ಬಿಡಲ್ಲ ಎಂದು ತಡೆದಿದ್ದಾರೆ. ಈ ಬಗ್ಗೆ ಯಕ್ಷಗಾನ ಮಂಡಳಿ ಅಧ್ಯಕ್ಷ ಸದಾನಂದ ಶೆಟ್ಟಿ ಮತ್ತು ಮಹಾಲಕ್ಷ್ಮಿ ಸೌಂಡ್ಸ್ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ.
ಸ್ಥಳೀಯರ ದೂರಿನಂತೆ ರಾತ್ರಿ 11.30 ಗಂಟೆಗೆ ಪೊಲೀಸರು ತೆರಳಿ ಧ್ವನಿವರ್ಧಕ ಬಳಸದಂತೆ ತಿಳಿಸಿದರೂ, ಬೆಳಗ್ಗೆ 4.30 ಗಂಟೆಯ ವರೆಗೂ ಮೈಕ್ ಮುಂದುವರಿಸಿದ್ದರು. ಹೀಗಾಗಿ ಅನುಮತಿ ಪಡೆಯದೆ ರಾತ್ರಿ ವೇಳೆ ಧ್ವನಿವರ್ಧಕ ಬಳಸಿ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಆಯೋಜಕರ ಮೇಲೆ ಅಜೆಕಾರು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 02/25 ಕಲಂ. 292 BNS ಮತ್ತು 37 KP Act. ರಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A Yakshagana performance in Mundli, near Jarkala, Shirlal village in Karkala taluk, was halted by police on Tuesday night. The authorities intervened, citing the absence of permission to use loudspeakers. This action sparked outrage among the villagers.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm