ಬ್ರೇಕಿಂಗ್ ನ್ಯೂಸ್
15-12-20 04:51 pm Mangalore Correspondent ಕರಾವಳಿ
ಮಂಗಳೂರು, ಡಿ.15: ಕುಲಶೇಖರದ ಕೆಎಂಎಫ್ ಹಾಲಿನ ಡೈರಿಯಲ್ಲಿ ಟ್ಯಾಂಕ್ ಕ್ಲೀನಿಂಗ್ ನಡೆಸುತ್ತಿದ್ದ ವೇಳೆ ಕೆಮಿಕಲ್ ಬ್ಲಾಸ್ಟ್ ಆಗಿ ಒಬ್ಬ ಕಾರ್ಮಿಕನ ದೇಹ ಪೂರ್ತಿ ಸುಟ್ಟುಹೋದ ಘಟನೆ ನಡೆದಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಗುತ್ತಿಗೆ ನೌಕರ, ಸುಳ್ಯ ಮೂಲದ ಸತೀಶ್ (21) ಎಂಬಾತ ಟ್ಯಾಂಕ್ ಮತ್ತು ಟ್ಯೂಬ್ ಕ್ಲೀನ್ ಮಾಡಲೆಂದು ಕುದಿಯುತ್ತಿದ್ದ ನೀರಿಗೆ ಕೆಮಿಕಲ್ ಸುರಿದಾಗ ನೀರು ಒಮ್ಮೆಲೇ ಹೊರಗೆಸೆಯಲ್ಪಟ್ಟು ಘಟನೆ ನಡೆದಿದೆ. ಸೂಕ್ತ ಮುಂಜಾಗ್ರತೆ ಮತ್ತು ನಿರ್ಲಕ್ಷ್ಯ ವಹಿಸಿದ್ದರಿಂದ ಘಟನೆ ನಡೆದಿದ್ದು, ಸತೀಶ್ ದೇಹ ಬಿಸಿ ನೀರು ಮೈಗೆ ಬಿದ್ದು ಸುಟ್ಟು ಹೋಗಿದೆ.


ಇತರೇ ನೌಕರರು ಸೇರಿ ಕೂಡಲೇ ಸತೀಶ್ ನನ್ನು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕೆಎಂಎಫ್ ಡೈರಿಯಲ್ಲಿ ಗುತ್ತಿಗೆ ಕಾರ್ಮಿಕನಾಗಿದ್ದರೂ, ಇವರಿಗೆ ಇಎಸ್ಐ ಸೌಲಭ್ಯ ಇರುತ್ತದೆ. ಆದರೆ, ಆಸ್ಪತ್ರೆಯಲ್ಲಿ ಇಎಸ್ಐ ಸೌಲಭ್ಯ ಕೇಳಿದರೆ ಬೆಡ್ ಇಲ್ಲ ಎಂದು ಸಬೂಬು ಹೇಳುತ್ತಿದ್ದಾರೆಂದು ಜೊತೆಗಿದ್ದ ಕಾರ್ಮಿಕರು ದೂರಿದ್ದಾರೆ. ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಇಎಸ್ಐ ಸೌಲಭ್ಯ ಸಿಗದಿದ್ದರೆ ಗುತ್ತಿಗೆ ಕಂಪನಿಯವರೇ ದುಡ್ಡು ಕೊಡಬೇಕು ಎನ್ನುತ್ತಿದ್ದಾರೆ.
ಕೆಎಂಎಫ್ ಡೈರಿಯಲ್ಲಿ ಪ್ರೊಡಕ್ಷನ್ ವಿಭಾಗದಲ್ಲಿ 350 ಜನರು ಕಾರ್ಮಿಕರಿದ್ದು, ಎಲ್ಲರೂ ಗುತ್ತಿಗೆ ಕಾರ್ಮಿಕರು. ಬೆಂಗಳೂರಿನ ಕ್ರಿಯೇಟಿವಿಟಿ ಎನ್ನುವ ಕಂಪನಿ ಉಪ ಗುತ್ತಿಗೆ ಪಡೆದು ಕಾರ್ಮಿಕರ ಮೂಲಕ ಕೆಲಸ ಮಾಡಿಸುತ್ತಿದೆ. ಹೀಗಾಗಿ ದುರ್ಘಟನೆ ನಡೆದರೂ, ಕೆಎಂಎಫ್ ಡೈರಿ ಪ್ರಮುಖರು ತಮಗೇನು ಸಂಬಂಧವೇ ಇಲ್ಲ ಎಂದು ವರ್ತಿಸುತ್ತಿದ್ದಾರೆ. ಬ್ಲಾಸ್ಟ್ ಆಗಿ ಸುಟ್ಟ ಗಾಯ ಆಗಿದ್ದರೂ ಆಸ್ಪತ್ರೆಗೆ ಒಯ್ಯುವುದಕ್ಕೂ ವಾಹನ ನೀಡಿಲ್ಲ ಎಂದು ಕಾರ್ಮಿಕರು ಅಲವತ್ತುಕೊಂಡಿದ್ದಾರೆ.
Chemical blast in KMF (Karnataka Milk Federation) one staff seriously injured has been admitted to A.J hospital. The negligence of the authorities has resulted in the blast it is said.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm