ಬ್ರೇಕಿಂಗ್ ನ್ಯೂಸ್
17-01-25 10:50 pm Mangalore Correspondent ಕರಾವಳಿ
ಮಂಗಳೂರು, ಜ.17: ತನ್ನ ಕಟ್ಟಡದಲ್ಲಿ ಬಾಡಿಗೆ ಇರುವ ಮಹಿಳೆಯೊಬ್ಬರಿಗೆ ಮಾಲೀಕನೇ ಮಾನಸಿಕ ಕಿರುಕುಳ ಕೊಡುವುದಲ್ಲದೆ, ನೀರು, ವಿದ್ಯುತ್ ಕಡಿತಗೊಳಿಸಿ ವಿನಾಕಾರಣ ತೊಂದರೆ ಕೊಡುತ್ತಿರುವ ಆರೋಪ ಕೇಳಿಬಂದಿದೆ.
ಸೋಮೇಶ್ವರ ಗ್ರಾಮದ ಅಂಬಿಕಾ ರೋಡ್ ಬಳಿಯ ಸುಧಾಕರ ಭಂಡಾರಿ ಎಂಬವರ ಕಟ್ಟಡದಲ್ಲಿ ಮಹಿಳೆ ತನ್ನ ಮಕ್ಕಳೊಂದಿಗೆ ಬಾಡಿಗೆಗೆ ಇದ್ದಾರೆ. ಕಳೆದ ಡಿಸೆಂಬರ್ ತಿಂಗಳಿನಿಂದ ರಾತ್ರಿ ವೇಳೆ ಈ ವ್ಯಕ್ತಿ ಮನೆಯ ಬಾಗಿಲು ಬಡಿಯುವುದು, ನಾಯಿ ಬಿಟ್ಟು ಕಿರುಕುಳ ಕೊಡುವುದು ಮಾಡುತ್ತಿದ್ದಾರೆ. ತಿಂಗಳ ಬಾಡಿಗೆಯನ್ನು ಸರಿಯಾಗಿ ಕೊಟ್ಟರೂ, ವಿನಾಕಾರಣ ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ, ನೀರು ಪೂರೈಕೆ ಮಾಡದೆ ಸತಾಯಿಸುತ್ತಿದ್ದಾರೆಂದು ಮಹಿಳೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಆದರೆ ಪೊಲೀಸರು ಆರೋಪಿ ವ್ಯಕ್ತಿಯನ್ನು ಕರೆಸಿ ಮುಚ್ಚಳಿಕೆ ಬರೆಸಿ ಕಳಿಸಿಕೊಟ್ಟಿದ್ದಾರೆ. ಹಾಗಿದ್ದರೂ ನೀರು ಕೊಡದೆ ಸತಾಯಿಸುವ ಚಾಳಿ ಮುಂದುವರಿದಿದೆ. ಇದರಿಂದಾಗಿ ಮಹಿಳೆ ತೀವ್ರ ನೊಂದುಕೊಂಡಿದ್ದು, ಮಹಿಳೆಯರ ಆಸರೆಯಾದ ಸಖೀ ಕೇಂದ್ರಕ್ಕೂ ದೂರು ನೀಡಿದ್ದಾರೆ. ಅಲ್ಲಿನ ಸಿಬಂದಿ ಬಂದು ಪರಿಶೀಲನೆ ನಡೆಸಿದ್ದು, ಬಿಟ್ಟಿ ಸಲಹೆ ಕೊಟ್ಟು ಹೋಗಿದ್ದಾರಂತೆ. ತನ್ನ ಕಿರುಕುಳದ ಬಗ್ಗೆ 112 ಸಂಖ್ಯೆಗೂ ಮಹಿಳೆ ದೂರು ನೀಡಿದ್ದು, ಕಟ್ಟಡ ಮಾಲೀಕನ ದುರ್ನಡತೆ ಬಗ್ಗೆ ಹೇಳಿಕೊಂಡಿದ್ದಾರೆ. ಆದರೂ ಪ್ರಯೋಜನ ಆಗಿಲ್ಲ ಎಂದು ಮಹಿಳೆ ದೂರಿದ್ದಾರೆ.
ಈ ಹಿಂದೆ ಸುಧಾಕರ ಭಂಡಾರಿ ತನ್ನ ನಾಯಿಯನ್ನು ಬಿಟ್ಟು ಕಚ್ಚುವಂತೆ ಮಾಡಿದ್ದು ಆನಂತರ ಮಹಿಳೆ ಲೇಡಿಗೋಶನ್ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದು ಸುಧಾರಿಸಿಕೊಂಡಿದ್ದರು. ಆದರೂ ತಾಯಿ, ಮಕ್ಕಳಿಗೆ ಕಿರುಕುಳ ಕೊಡುವುದು ಬಿಟ್ಟಿಲ್ಲ. ನೀರು, ವಿದ್ಯುತ್ ಮನುಷ್ಯನ ಮೂಲಭೂತ ಹಕ್ಕು. ಅದನ್ನು ಬಾಡಿಗೆದಾರ ನಿರಾಕರಿಸುವ ಹಾಗಿಲ್ಲ. ಅಲ್ಲದೆ, ಅಗ್ರಿಮೆಂಟ್ ಅವಧಿಯಲ್ಲಿ ಮೂಲಭೂತ ಸೌಕರ್ಯ ಒದಗಿಸುವುದು ಕರ್ತವ್ಯ ಆಗಿರುತ್ತದೆ. ಪೊಲೀಸರೇ ಈ ಬಗ್ಗೆ ಕಠಿಣ ಕ್ರಮ ಜರುಗಿಸಬೇಕಾಗಿದೆ.
Mangalore Mental torture to by house owner in ullal, case filed. The owner is alleged of disconnecting curent and water facility to the women who is staying for rent.
16-04-25 11:03 pm
Bangalore Correspondent
ಒಂದನೇ ತರಗತಿಗೆ ಪ್ರವೇಶ ; ಈ ವರ್ಷಕ್ಕೆ ಮಾತ್ರ ಮಕ್ಕಳ...
16-04-25 09:07 pm
Bigg Boss Kannada, Rajath arrested: ರೀಲ್ಸ್ ಶೋ...
16-04-25 06:42 pm
CM Siddaramaiah, Lokayukta, Muda: ಸಿಎಂ ಸಿದ್ದರ...
15-04-25 08:44 pm
Kannada Journalist S K Shyamsundar Death: ಹಿರ...
15-04-25 12:51 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
16-04-25 10:58 pm
Mangalore Correspondent
Mangalore Traffic diversion, Anti Waqf bill p...
16-04-25 08:22 pm
Asif Apatbandava, Rauf Bengre Honey Trap, Man...
16-04-25 02:02 pm
Panambur Bike Accident, Mangalore: ಪಣಂಬೂರಿನಲ್...
16-04-25 01:29 pm
NIA, Praveen Nettaru: ಪ್ರವೀಣ್ ನೆಟ್ಟಾರು ಕೊಲೆ ಪ...
15-04-25 09:57 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm