ಬ್ರೇಕಿಂಗ್ ನ್ಯೂಸ್
17-01-25 10:50 pm Mangalore Correspondent ಕರಾವಳಿ
ಮಂಗಳೂರು, ಜ.17: ತನ್ನ ಕಟ್ಟಡದಲ್ಲಿ ಬಾಡಿಗೆ ಇರುವ ಮಹಿಳೆಯೊಬ್ಬರಿಗೆ ಮಾಲೀಕನೇ ಮಾನಸಿಕ ಕಿರುಕುಳ ಕೊಡುವುದಲ್ಲದೆ, ನೀರು, ವಿದ್ಯುತ್ ಕಡಿತಗೊಳಿಸಿ ವಿನಾಕಾರಣ ತೊಂದರೆ ಕೊಡುತ್ತಿರುವ ಆರೋಪ ಕೇಳಿಬಂದಿದೆ.
ಸೋಮೇಶ್ವರ ಗ್ರಾಮದ ಅಂಬಿಕಾ ರೋಡ್ ಬಳಿಯ ಸುಧಾಕರ ಭಂಡಾರಿ ಎಂಬವರ ಕಟ್ಟಡದಲ್ಲಿ ಮಹಿಳೆ ತನ್ನ ಮಕ್ಕಳೊಂದಿಗೆ ಬಾಡಿಗೆಗೆ ಇದ್ದಾರೆ. ಕಳೆದ ಡಿಸೆಂಬರ್ ತಿಂಗಳಿನಿಂದ ರಾತ್ರಿ ವೇಳೆ ಈ ವ್ಯಕ್ತಿ ಮನೆಯ ಬಾಗಿಲು ಬಡಿಯುವುದು, ನಾಯಿ ಬಿಟ್ಟು ಕಿರುಕುಳ ಕೊಡುವುದು ಮಾಡುತ್ತಿದ್ದಾರೆ. ತಿಂಗಳ ಬಾಡಿಗೆಯನ್ನು ಸರಿಯಾಗಿ ಕೊಟ್ಟರೂ, ವಿನಾಕಾರಣ ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ, ನೀರು ಪೂರೈಕೆ ಮಾಡದೆ ಸತಾಯಿಸುತ್ತಿದ್ದಾರೆಂದು ಮಹಿಳೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.



ಆದರೆ ಪೊಲೀಸರು ಆರೋಪಿ ವ್ಯಕ್ತಿಯನ್ನು ಕರೆಸಿ ಮುಚ್ಚಳಿಕೆ ಬರೆಸಿ ಕಳಿಸಿಕೊಟ್ಟಿದ್ದಾರೆ. ಹಾಗಿದ್ದರೂ ನೀರು ಕೊಡದೆ ಸತಾಯಿಸುವ ಚಾಳಿ ಮುಂದುವರಿದಿದೆ. ಇದರಿಂದಾಗಿ ಮಹಿಳೆ ತೀವ್ರ ನೊಂದುಕೊಂಡಿದ್ದು, ಮಹಿಳೆಯರ ಆಸರೆಯಾದ ಸಖೀ ಕೇಂದ್ರಕ್ಕೂ ದೂರು ನೀಡಿದ್ದಾರೆ. ಅಲ್ಲಿನ ಸಿಬಂದಿ ಬಂದು ಪರಿಶೀಲನೆ ನಡೆಸಿದ್ದು, ಬಿಟ್ಟಿ ಸಲಹೆ ಕೊಟ್ಟು ಹೋಗಿದ್ದಾರಂತೆ. ತನ್ನ ಕಿರುಕುಳದ ಬಗ್ಗೆ 112 ಸಂಖ್ಯೆಗೂ ಮಹಿಳೆ ದೂರು ನೀಡಿದ್ದು, ಕಟ್ಟಡ ಮಾಲೀಕನ ದುರ್ನಡತೆ ಬಗ್ಗೆ ಹೇಳಿಕೊಂಡಿದ್ದಾರೆ. ಆದರೂ ಪ್ರಯೋಜನ ಆಗಿಲ್ಲ ಎಂದು ಮಹಿಳೆ ದೂರಿದ್ದಾರೆ.
ಈ ಹಿಂದೆ ಸುಧಾಕರ ಭಂಡಾರಿ ತನ್ನ ನಾಯಿಯನ್ನು ಬಿಟ್ಟು ಕಚ್ಚುವಂತೆ ಮಾಡಿದ್ದು ಆನಂತರ ಮಹಿಳೆ ಲೇಡಿಗೋಶನ್ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದು ಸುಧಾರಿಸಿಕೊಂಡಿದ್ದರು. ಆದರೂ ತಾಯಿ, ಮಕ್ಕಳಿಗೆ ಕಿರುಕುಳ ಕೊಡುವುದು ಬಿಟ್ಟಿಲ್ಲ. ನೀರು, ವಿದ್ಯುತ್ ಮನುಷ್ಯನ ಮೂಲಭೂತ ಹಕ್ಕು. ಅದನ್ನು ಬಾಡಿಗೆದಾರ ನಿರಾಕರಿಸುವ ಹಾಗಿಲ್ಲ. ಅಲ್ಲದೆ, ಅಗ್ರಿಮೆಂಟ್ ಅವಧಿಯಲ್ಲಿ ಮೂಲಭೂತ ಸೌಕರ್ಯ ಒದಗಿಸುವುದು ಕರ್ತವ್ಯ ಆಗಿರುತ್ತದೆ. ಪೊಲೀಸರೇ ಈ ಬಗ್ಗೆ ಕಠಿಣ ಕ್ರಮ ಜರುಗಿಸಬೇಕಾಗಿದೆ.
Mangalore Mental torture to by house owner in ullal, case filed. The owner is alleged of disconnecting curent and water facility to the women who is staying for rent.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm