ಬ್ರೇಕಿಂಗ್ ನ್ಯೂಸ್
17-01-25 10:50 pm Mangalore Correspondent ಕರಾವಳಿ
ಮಂಗಳೂರು, ಜ.17: ತನ್ನ ಕಟ್ಟಡದಲ್ಲಿ ಬಾಡಿಗೆ ಇರುವ ಮಹಿಳೆಯೊಬ್ಬರಿಗೆ ಮಾಲೀಕನೇ ಮಾನಸಿಕ ಕಿರುಕುಳ ಕೊಡುವುದಲ್ಲದೆ, ನೀರು, ವಿದ್ಯುತ್ ಕಡಿತಗೊಳಿಸಿ ವಿನಾಕಾರಣ ತೊಂದರೆ ಕೊಡುತ್ತಿರುವ ಆರೋಪ ಕೇಳಿಬಂದಿದೆ.
ಸೋಮೇಶ್ವರ ಗ್ರಾಮದ ಅಂಬಿಕಾ ರೋಡ್ ಬಳಿಯ ಸುಧಾಕರ ಭಂಡಾರಿ ಎಂಬವರ ಕಟ್ಟಡದಲ್ಲಿ ಮಹಿಳೆ ತನ್ನ ಮಕ್ಕಳೊಂದಿಗೆ ಬಾಡಿಗೆಗೆ ಇದ್ದಾರೆ. ಕಳೆದ ಡಿಸೆಂಬರ್ ತಿಂಗಳಿನಿಂದ ರಾತ್ರಿ ವೇಳೆ ಈ ವ್ಯಕ್ತಿ ಮನೆಯ ಬಾಗಿಲು ಬಡಿಯುವುದು, ನಾಯಿ ಬಿಟ್ಟು ಕಿರುಕುಳ ಕೊಡುವುದು ಮಾಡುತ್ತಿದ್ದಾರೆ. ತಿಂಗಳ ಬಾಡಿಗೆಯನ್ನು ಸರಿಯಾಗಿ ಕೊಟ್ಟರೂ, ವಿನಾಕಾರಣ ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ, ನೀರು ಪೂರೈಕೆ ಮಾಡದೆ ಸತಾಯಿಸುತ್ತಿದ್ದಾರೆಂದು ಮಹಿಳೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.



ಆದರೆ ಪೊಲೀಸರು ಆರೋಪಿ ವ್ಯಕ್ತಿಯನ್ನು ಕರೆಸಿ ಮುಚ್ಚಳಿಕೆ ಬರೆಸಿ ಕಳಿಸಿಕೊಟ್ಟಿದ್ದಾರೆ. ಹಾಗಿದ್ದರೂ ನೀರು ಕೊಡದೆ ಸತಾಯಿಸುವ ಚಾಳಿ ಮುಂದುವರಿದಿದೆ. ಇದರಿಂದಾಗಿ ಮಹಿಳೆ ತೀವ್ರ ನೊಂದುಕೊಂಡಿದ್ದು, ಮಹಿಳೆಯರ ಆಸರೆಯಾದ ಸಖೀ ಕೇಂದ್ರಕ್ಕೂ ದೂರು ನೀಡಿದ್ದಾರೆ. ಅಲ್ಲಿನ ಸಿಬಂದಿ ಬಂದು ಪರಿಶೀಲನೆ ನಡೆಸಿದ್ದು, ಬಿಟ್ಟಿ ಸಲಹೆ ಕೊಟ್ಟು ಹೋಗಿದ್ದಾರಂತೆ. ತನ್ನ ಕಿರುಕುಳದ ಬಗ್ಗೆ 112 ಸಂಖ್ಯೆಗೂ ಮಹಿಳೆ ದೂರು ನೀಡಿದ್ದು, ಕಟ್ಟಡ ಮಾಲೀಕನ ದುರ್ನಡತೆ ಬಗ್ಗೆ ಹೇಳಿಕೊಂಡಿದ್ದಾರೆ. ಆದರೂ ಪ್ರಯೋಜನ ಆಗಿಲ್ಲ ಎಂದು ಮಹಿಳೆ ದೂರಿದ್ದಾರೆ.
ಈ ಹಿಂದೆ ಸುಧಾಕರ ಭಂಡಾರಿ ತನ್ನ ನಾಯಿಯನ್ನು ಬಿಟ್ಟು ಕಚ್ಚುವಂತೆ ಮಾಡಿದ್ದು ಆನಂತರ ಮಹಿಳೆ ಲೇಡಿಗೋಶನ್ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದು ಸುಧಾರಿಸಿಕೊಂಡಿದ್ದರು. ಆದರೂ ತಾಯಿ, ಮಕ್ಕಳಿಗೆ ಕಿರುಕುಳ ಕೊಡುವುದು ಬಿಟ್ಟಿಲ್ಲ. ನೀರು, ವಿದ್ಯುತ್ ಮನುಷ್ಯನ ಮೂಲಭೂತ ಹಕ್ಕು. ಅದನ್ನು ಬಾಡಿಗೆದಾರ ನಿರಾಕರಿಸುವ ಹಾಗಿಲ್ಲ. ಅಲ್ಲದೆ, ಅಗ್ರಿಮೆಂಟ್ ಅವಧಿಯಲ್ಲಿ ಮೂಲಭೂತ ಸೌಕರ್ಯ ಒದಗಿಸುವುದು ಕರ್ತವ್ಯ ಆಗಿರುತ್ತದೆ. ಪೊಲೀಸರೇ ಈ ಬಗ್ಗೆ ಕಠಿಣ ಕ್ರಮ ಜರುಗಿಸಬೇಕಾಗಿದೆ.
Mangalore Mental torture to by house owner in ullal, case filed. The owner is alleged of disconnecting curent and water facility to the women who is staying for rent.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm