ಬ್ರೇಕಿಂಗ್ ನ್ಯೂಸ್
17-01-25 11:10 pm Mangalore Correspondent ಕರಾವಳಿ
ಮಂಗಳೂರು, ಜ.17: ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ, ಕೊಡವ ಮತ್ತು ಯಕ್ಷಗಾನ ಅಕಾಡೆಮಿ ವತಿಯಿಂದ ಶುಕ್ರವಾರ ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಂಡಿದ್ದ ಬಹು ಸಂಸ್ಕೃತಿ ಉತ್ಸವ ಉದ್ಘಾಟನೆಯೇ ಆಗದೆ ನಾಮ್ಕೇವಾಸ್ತೆ ಎನ್ನುವ ರೀತಿ ಮುಗಿದು ಹೋಗಿದೆ. ಅಕಾಡೆಮಿಗಳ ಪದಾಧಿಕಾರಿಗಳು ಅತ್ಯಂತ ಆಸ್ಥೆಯಿಂದ ವ್ಯವಸ್ಥೆ ಮಾಡಿದ್ದರು. ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರೇ ಉದ್ಘಾಟನೆ ಮಾಡಬೇಕೆಂದು ಮತ್ತೆ ಮತ್ತೆ ಮುಂದೂಡಿಕೆ ಆದರೂ ಆಯೋಜನೆ ಮಾಡಿದ್ದರು.
ಹೀಗಾಗಿ ಮೂರು ಬಾರಿ ದಿನಾಂಕ ನಿಗದಿಯಾದರೂ ಅನಿವಾರ್ಯ ಕಾರಣಗಳಿಂದ ಮುಂದೂಡಲ್ಪಟ್ಟು ನಾಲ್ಕನೇ ಬಾರಿಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕೊನೆಗೂ ಮುಹೂರ್ತ ಕೂಡಿ ಬಂತು ಎಂದುಕೊಂಡು ಅಕಾಡೆಮಿ ಮುಖ್ಯಸ್ಥರು ಮುಖ್ಯಮಂತ್ರಿ ಬರುವಿಕೆಗಾಗಿ ಇಡೀ ದಿನ ಕಾದು ಕುಳಿತರು. ಆದರೆ ಉದ್ಘಾಟನೆ ಮಾಡಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು ಬಂದರೂ ಕಾರ್ಯಕ್ರಮ ನಡೆಯುವ ಪುರಭವನಕ್ಕೆ ಬರಲೇ ಇಲ್ಲ.

ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ಪ್ರವಾಸ ಪಟ್ಟಿಯಲ್ಲೂ ಉಲ್ಲೇಖಿಸಲಾಗಿತ್ತು. ಅಲ್ಲದೆ, ಕಾರ್ಯಕ್ರಮವನ್ನು 12 ಗಂಟೆ ವೇಳೆಗೆ ಸಿಎಂ ಸಿದ್ದರಾಮಯ್ಯ ಅವರೇ ಉದ್ಘಾಟನೆ ಮಾಡುತ್ತಾರೆಂದು ಆಮಂತ್ರಣ ಪತ್ರಿಕೆ ಮತ್ತು ಮಾಧ್ಯಮಗಳಲ್ಲೂ ಬಂದಿತ್ತು. ಆದರೆ ಉದ್ಘಾಟನೆಗೆ ಆಗಮಿಸಬೇಕಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
ಹೀಗಾಗಿ ಬಹು ಸಂಸ್ಕೃತಿ ಉತ್ಸವ ಉದ್ಘಾಟನೆಯೇ ಆಗದೆ ಮುಗಿದು ಹೋಗಿದೆ. ವಿವಿಧ ಅಕಾಡಮಿಗಳ ನೇತೃತ್ವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಮಾಡಿದ್ದರೂ, ಒಟ್ಟು ಉತ್ಸವ ಅಷ್ಟಕ್ಕೇ ಸೀಮಿತ ಆಗುವಂತಾಯ್ತು. ಸಂಜೆ ನಾಲ್ಕು ಗಂಟೆ ವರೆಗೆ ಅಧಿಕಾರಿ ವರ್ಗ, ಅಕಾಡೆಮಿ ಮುಖ್ಯಸ್ಥರು ಕಾದು ಕುಳಿತರೂ ಮುಖ್ಯಮಂತ್ರಿ ಬರಲಿಲ್ಲ. ಮೇರಿಹಿಲ್ ನಲ್ಲಿ ರಾಜೀವ ಗಾಂಧಿ ಆರೋಗ್ಯ ವಿವಿ ಕಾರ್ಯಕ್ರಮ ಮಧ್ಯಾಹ್ನ ಮುಗಿಸಿದ ಬಳಿಕ ಎಂಎಲ್ಸಿ ಐವಾನ್ ಡಿಸೋಜ ಮನೆಯಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಸಿದ್ದರಾಮಯ್ಯ ಮತ್ತು ದಂಡು ಅಲ್ಲಿಗೆ ಹೋದವರು, ಅಲ್ಲಿರುವಾಗಲೇ ಬ್ಯಾಂಕ್ ದರೋಡೆ ಸುದ್ದಿ ಬಂದಿದ್ದರಿಂದ ಪೊಲೀಸ್ ಅಧಿಕಾರಿಗಳನ್ನು ಕರೆದು ತುರ್ತು ಸಭೆಯನ್ನೇನೋ ಮಾಡಿದರು. ತಾವು ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮ ಮರೆತೇ ಬಿಟ್ಟರು.
Chief minister Siddaramaiah, by not attending the opening ceremony of Bahusamskrithi Utsava (multicultural festival) at Kudmul Ranga Rao Town Hall on Friday, caused discomfort among representatives from six academies, performing groups from across the state, and numerous spectators who gathered for the event.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm