ಬ್ರೇಕಿಂಗ್ ನ್ಯೂಸ್
20-01-25 11:05 pm Mangalore Correspondent ಕರಾವಳಿ
ಉಳ್ಳಾಲ, ಜ.20: ಕೋಟೆಕಾರು ಸಹಕಾರ ಬ್ಯಾಂಕಿನ ದರೋಡೆ ಹಿನ್ನೆಲೆಯಲ್ಲಿ ಅಡವಿಟ್ಟ ಚಿನ್ನಾಭರಣದ ಮಾಲೀಕರು ಹಾಗೂ ಎಸ್ಡಿಪಿಐ ಮುಖಂಡರು ಕೆಸಿ ರೋಡ್ ಶಾಖೆಯ ಕಚೇರಿಯಲ್ಲಿ ಬ್ಯಾಂಕ್ನ ಅಧ್ಯಕ್ಷರು ಮತ್ತು ನಿರ್ದೇಶಕರ ಜೊತೆ ಚರ್ಚೆ ನಡೆಸಿದರು. ಅಡವಿಟ್ಟ ಚಿನ್ನಾಭರಣವನ್ನು ಮರಳಿಸಬೇಕು ಎಂದು ಗ್ರಾಹಕರು ಒತ್ತಾಯ ಮಾಡಿದ್ದಾರೆ.
ಇದಕ್ಕೆ ಅಧ್ಯಕ್ಷ ಕೃಷ್ಣ ಶೆಟ್ಟಿ ಸಮಯ ಕೇಳಿದ್ದಕ್ಕೆ ಎಸ್ಡಿಪಿಐ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಹಕರಿಗೆ ಕಾಯಲು ಸಮಯವಿಲ್ಲ, ತಕ್ಷಣಕ್ಕೆ ಆಡಳಿತ ಮಂಡಳಿ ಸಭೆ ಕರೆದು ಗ್ರಾಹಕರು ಅಡವಿಟ್ಟ ಚಿನ್ನಾಭರಣಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿದರು. ಅಡವಿಟ್ಟ ಚಿನ್ನದ ಮೌಲ್ಯಕ್ಕೆ ತಕ್ಕಂತೆ ಈಗಿನ ಮೌಲ್ಯವನ್ನು ಅಥವಾ ಚಿನ್ನ ನೀಡುವುದಾಗಿ ಅಧ್ಯಕ್ಷರು ಹೇಳಿದರೂ ಚಿನ್ನದ ಜೊತೆಯಲ್ಲಿ ತೇಮಾನು, ವೇಸ್ಟೇಜ್, ಜಿಎಸ್ಟಿ ಎಲ್ಲವನ್ನು ಭರಿಸಬೇಕೆಂದು ಹೇಳಿದರು.


ಅಂದಾಜು 20 ಕೋಟಿ ರೂ. ಮೌಲ್ಯದ ಚಿನ್ನಾಭರಣ ಅಡವಿಟ್ಟ ಬ್ಯಾಂಕ್ ಕಚೇರಿಯಲ್ಲಿ ಕನಿಷ್ಠ ಒಬ್ಬ ಸೆಕ್ಯೂರಿಟಿ ಗಾರ್ಡ್ ಇಲ್ಲದಿರುವುದು ಬ್ಯಾಂಕ್ ಸುರಕ್ಷತೆ ಬಗ್ಗೆ ಸಂಶಯ ಹುಟ್ಟಿಸಿದೆ ಎಂದು ಎಸ್ಡಿಪಿಐ ನಾಯಕ ಇದಾಯತ್ ಮಾರಿಪಳ್ಳ ಆಕ್ರೋಶ ವ್ಯಕ್ತಪಡಿಸಿದರು. ಎಲ್ಲ ಗ್ರಾಹಕರ ಚಿನ್ನಾಭರಣದ ಮೌಲ್ಯಕ್ಕೆ ಸಮನಾಗಿ ಚಿನ್ನ ಅಥವಾ ಮೌಲ್ಯವನ್ನು ನೀಡಲಿದ್ದೇವೆ. ಕಾನೂನು ಪ್ರಕ್ರಿಯೆ ನಡೆಯುತ್ತಿದ್ದು ಕೆಲವು ದಿನದ ಮಟ್ಟಿಗೆ ಗ್ರಾಹಕರು ಸಹಕರಿಸಬೇಕು. ಕೂಡಲೇ ಆಡಳಿತ ಮಂಡಳಿ ಸಭೆ ಕರೆಯಲಿದ್ದೇವೆ ಎಂದು ಬ್ಯಾಂಕ್ ಅಧ್ಯಕ್ಷ ಕೃಷ್ಣ ಶೆಟ್ಟಿ ತಿಳಿಸಿದರು.
ಎಲ್ಲ ಠಾಣೆ ವ್ಯಾಪ್ತಿಯಲ್ಲಿ ಸುರಕ್ಷತೆ ಬಗ್ಗೆ ಸಭೆ
ಕೋಟೆಕಾರು ಬ್ಯಾಂಕಿನ ದರೋಡೆ ಹಿನ್ನಲೆಯಲ್ಲಿ ಸೋಮವಾರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಡಿಸಿಪಿ ರವಿಶಂಕರ್ ನೇತೃತ್ವದಲ್ಲಿ ಠಾಣೆ ವ್ಯಾಪ್ತಿಯ ಎಲ್ಲ ಬ್ಯಾಂಕ್, ಸೊಸೈಟಿ, ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಸಭೆ ನಡೆಸಲಾಗಿದೆ. ಉಳ್ಳಾಲ, ಕಂಕನಾಡಿ ಸೇರಿದಂತೆ ಬಹುತೇಕ ಠಾಣೆ ವ್ಯಾಪ್ತಿಗಳ ಬ್ಯಾಂಕ್ ಗಳು, ಕೋ-ಆಪರೇಟಿವ್ ಸೊಸೈಟಿಗಳು, ಸಹಕಾರಿ ಸಂಘಗಳು ಹಾಗೂ ಜ್ಯುವೆಲ್ಲರಿ ಮಾಲಕರು/ವ್ಯವಸ್ಥಾಪಕರನ್ನು ಕರೆಸಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಸೊತ್ತುಗಳ ರಕ್ಷಣೆಯ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆಗಳನ್ನ ಅಧಿಕಾರಿಗಳು ನೀಡಿದ್ದಾರೆ.
Mangalore Kotekar bank robbery, meeting held between customers sdpi and police in regards to gold deposited
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm