ಬ್ರೇಕಿಂಗ್ ನ್ಯೂಸ್
21-01-25 07:43 pm Mangalore Correspondent ಕರಾವಳಿ
ಮಂಗಳೂರು, ಜ.21: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಬ್ಯಾಂಕಿನ ಅಧ್ಯಕ್ಷ ಕೃಷ್ಣ ಶೆಟ್ಟಿ ಕಳವಾದ ಒಟ್ಟು ಚಿನ್ನದ ಬಗ್ಗೆ ಮತ್ತೆ ಮಾಹಿತಿ ನೀಡಿದ್ದಾರೆ. ಒಟ್ಟು 15 ಕೋಟಿಯಷ್ಟು ಚಿನ್ನಾಭರಣ ದರೋಡೆ ಆಗಿದೆ. ಅಲ್ಲದೆ, 11 ಲಕ್ಷ 70 ಸಾವಿರ ನಗದು ಕೂಡ ಕಳವು ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಆರೋಪಿ ಕಾಲಿಗೆ ಗುಂಡು ಹಾರಿಸಿದ ಅಲಂಕಾರಗುಡ್ಡೆ ಸ್ಥಳಕ್ಕೆ ಬ್ಯಾಂಕಿನ ಅಧ್ಯಕ್ಷ ಕೃಷ್ಣ ಶೆಟ್ಟಿ ಭೇಟಿ ನೀಡಿದ್ದು, ಸ್ಥಳದಲ್ಲಿದ್ದ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. ಸ್ಥಳೀಯರ ಬಗ್ಗೆ ನಿಮಗೇನಾದರೂ ಸಂಶಯ ಇದೆಯೇ ಎಂದು ಕೇಳಿದ್ದಕ್ಕೆ, ನಮಗೇನೂ ಇಲ್ಲ. ಪೊಲೀಸರು ತನಿಖೆ ನಡೆಸುತ್ತಾರೆ ಎಂದಿದ್ದಾರೆ.
ಒಟ್ಟು ಕಳವಾದ ಚಿನ್ನಾಭರಣದ ಬಗ್ಗೆ ಲೆಕ್ಕಾಚಾರ ಆಗಿದೆಯೇ ಎಂದು ಕೇಳಿದ್ದಕ್ಕೆ, ಎಲ್ಲ ಲೆಕ್ಕ ಮುಗಿದಿದೆ, ಒಟ್ಟು 15 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಕಳವಾಗಿದೆ. ಎಂಟು ಕೋಟಿಯ ಚಿನ್ನ ಲಾಕರಿನಲ್ಲಿ ಉಳಿದಿದೆ. ಈ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಿದ್ದೇವೆ ಎಂದಿದ್ದಾರೆ. ಮತ್ತೆ ಎಫ್ಐಆರ್ ನಲ್ಲಿ ಕಡಿಮೆ ಯಾಕೆ ತೋರಿಸಿದ್ದು ಎಂದು ಕೇಳಿದ್ದಕ್ಕೆ, ಅದು ಅಂದಾಜು ಹಾಕಿರೋದು, ನಾವು ಆಮೇಲೆ ಹೆಚ್ಚುವರಿ ಇರುವುದನ್ನು ಹೇಳಿದ್ದೇವೆ ಎಂದಿದ್ದಾರೆ.
ಇನ್ಶೂರೆನ್ಸ್ ಎಷ್ಟು ಸಿಗಬಹುದು ಎಂದು ಕೇಳಿದ್ದಕ್ಕೆ, ಇನ್ಶೂರೆನ್ಸ್ 19 ಕೋಟಿ ಇದೆ, ಮಹಜರು ಎಲ್ಲ ಆದಬಳಿಕ ಇನ್ಶೂರೆನ್ಸ್ ಪ್ರಕ್ರಿಯೆ ಆಗುತ್ತದೆ. ಒಂದು ವರ್ಷ ಬೇಕಾಗಬಹುದು. ಎಷ್ಟು ಸಿಗುತ್ತೆ ಎಂದು ನೋಡಬೇಕು ಎಂದು ಹೇಳಿದ್ದಾರೆ. ಪೊಲೀಸರು ಆರಂಭದಲ್ಲಿ 10ರಿಂದ 12 ಕೋಟಿ ಮೌಲ್ಯದ ಚಿನ್ನ ದರೋಡೆಯಾಗಿದೆ ಎಂದು ಹೇಳಿದ್ದರೂ, ಆನಂತರ ನಾಲ್ಕು ಕೋಟಿ ಚಿನ್ನವೆಂದು ಕಡಿಮೆ ತೋರಿಸಿದ್ದರು. ಪೊಲೀಸರ ಈ ನಡೆ ಸಂಶಯಕ್ಕೆ ಕಾರಣವಾಗಿತ್ತು.
Mangalore Kotekar bank robbery, 15 crore worth gold has been stolen says Bank president Krishna Shetty. Speaking to the media persons at the spot where the accused was shot to the leg by police he said that more than 15 crores of gold has been stolen and the FIR will be changed from 4 crores.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm