ಬ್ರೇಕಿಂಗ್ ನ್ಯೂಸ್
21-01-25 07:43 pm Mangalore Correspondent ಕರಾವಳಿ
ಮಂಗಳೂರು, ಜ.21: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಬ್ಯಾಂಕಿನ ಅಧ್ಯಕ್ಷ ಕೃಷ್ಣ ಶೆಟ್ಟಿ ಕಳವಾದ ಒಟ್ಟು ಚಿನ್ನದ ಬಗ್ಗೆ ಮತ್ತೆ ಮಾಹಿತಿ ನೀಡಿದ್ದಾರೆ. ಒಟ್ಟು 15 ಕೋಟಿಯಷ್ಟು ಚಿನ್ನಾಭರಣ ದರೋಡೆ ಆಗಿದೆ. ಅಲ್ಲದೆ, 11 ಲಕ್ಷ 70 ಸಾವಿರ ನಗದು ಕೂಡ ಕಳವು ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಆರೋಪಿ ಕಾಲಿಗೆ ಗುಂಡು ಹಾರಿಸಿದ ಅಲಂಕಾರಗುಡ್ಡೆ ಸ್ಥಳಕ್ಕೆ ಬ್ಯಾಂಕಿನ ಅಧ್ಯಕ್ಷ ಕೃಷ್ಣ ಶೆಟ್ಟಿ ಭೇಟಿ ನೀಡಿದ್ದು, ಸ್ಥಳದಲ್ಲಿದ್ದ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. ಸ್ಥಳೀಯರ ಬಗ್ಗೆ ನಿಮಗೇನಾದರೂ ಸಂಶಯ ಇದೆಯೇ ಎಂದು ಕೇಳಿದ್ದಕ್ಕೆ, ನಮಗೇನೂ ಇಲ್ಲ. ಪೊಲೀಸರು ತನಿಖೆ ನಡೆಸುತ್ತಾರೆ ಎಂದಿದ್ದಾರೆ.
ಒಟ್ಟು ಕಳವಾದ ಚಿನ್ನಾಭರಣದ ಬಗ್ಗೆ ಲೆಕ್ಕಾಚಾರ ಆಗಿದೆಯೇ ಎಂದು ಕೇಳಿದ್ದಕ್ಕೆ, ಎಲ್ಲ ಲೆಕ್ಕ ಮುಗಿದಿದೆ, ಒಟ್ಟು 15 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಕಳವಾಗಿದೆ. ಎಂಟು ಕೋಟಿಯ ಚಿನ್ನ ಲಾಕರಿನಲ್ಲಿ ಉಳಿದಿದೆ. ಈ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಿದ್ದೇವೆ ಎಂದಿದ್ದಾರೆ. ಮತ್ತೆ ಎಫ್ಐಆರ್ ನಲ್ಲಿ ಕಡಿಮೆ ಯಾಕೆ ತೋರಿಸಿದ್ದು ಎಂದು ಕೇಳಿದ್ದಕ್ಕೆ, ಅದು ಅಂದಾಜು ಹಾಕಿರೋದು, ನಾವು ಆಮೇಲೆ ಹೆಚ್ಚುವರಿ ಇರುವುದನ್ನು ಹೇಳಿದ್ದೇವೆ ಎಂದಿದ್ದಾರೆ.
ಇನ್ಶೂರೆನ್ಸ್ ಎಷ್ಟು ಸಿಗಬಹುದು ಎಂದು ಕೇಳಿದ್ದಕ್ಕೆ, ಇನ್ಶೂರೆನ್ಸ್ 19 ಕೋಟಿ ಇದೆ, ಮಹಜರು ಎಲ್ಲ ಆದಬಳಿಕ ಇನ್ಶೂರೆನ್ಸ್ ಪ್ರಕ್ರಿಯೆ ಆಗುತ್ತದೆ. ಒಂದು ವರ್ಷ ಬೇಕಾಗಬಹುದು. ಎಷ್ಟು ಸಿಗುತ್ತೆ ಎಂದು ನೋಡಬೇಕು ಎಂದು ಹೇಳಿದ್ದಾರೆ. ಪೊಲೀಸರು ಆರಂಭದಲ್ಲಿ 10ರಿಂದ 12 ಕೋಟಿ ಮೌಲ್ಯದ ಚಿನ್ನ ದರೋಡೆಯಾಗಿದೆ ಎಂದು ಹೇಳಿದ್ದರೂ, ಆನಂತರ ನಾಲ್ಕು ಕೋಟಿ ಚಿನ್ನವೆಂದು ಕಡಿಮೆ ತೋರಿಸಿದ್ದರು. ಪೊಲೀಸರ ಈ ನಡೆ ಸಂಶಯಕ್ಕೆ ಕಾರಣವಾಗಿತ್ತು.
Mangalore Kotekar bank robbery, 15 crore worth gold has been stolen says Bank president Krishna Shetty. Speaking to the media persons at the spot where the accused was shot to the leg by police he said that more than 15 crores of gold has been stolen and the FIR will be changed from 4 crores.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm