ಬ್ರೇಕಿಂಗ್ ನ್ಯೂಸ್
21-01-25 09:43 pm Mangalore Correspondent ಕರಾವಳಿ
ಮಂಗಳೂರು, ಜ.21: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಗೆ ಅಡಗಿಕೊಳ್ಳಲು ಸಹಾಯ ಮಾಡಿದ್ದ ಮತ್ತೊಬ್ಬ ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ.
ಅತೀಕ್ ಅಹ್ಮದ್ ಬಂಧಿತ ವ್ಯಕ್ತಿಯಾಗಿದ್ದು ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ 21ನೇ ಆರೋಪಿಯಾಗಿದ್ದಾನೆ. ಮುಸ್ತಫಾ ಪೈಚಾರ್ ಪ್ರಕರಣದ ಸೂತ್ರಧಾರನಾಗಿದ್ದು ಆತನಿಗೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಅತೀಕ್ ಅಹ್ಮದ್ ಸಹಾಯ ಮಾಡಿದ್ದ. ಚೆನ್ನೈ ಮತ್ತಿತರ ಕಡೆ ಅಡಗಿ ಕುಳಿತುಕೊಳ್ಳಲು ಆಶ್ರಯ ಮಾಡಿ ಕೊಟ್ಟಿದ್ದ. ಎರಡು ವರ್ಷದ ಬಳಿಕ 2024ರ ಮೇ ತಿಂಗಳಲ್ಲಿ ಮುಸ್ತಫಾ ಎನ್ಐಎ ಬಲೆಗೆ ಬಿದ್ದಿದ್ದ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ಎನ್ಐಎ 2022ರ ಆಗಸ್ಟ್ ತಿಂಗಳಲ್ಲಿ ಕೈಗೆತ್ತಿಕೊಂಡಿತ್ತು. ಹಿಂದು ಸಂಘಟನೆ ಮತ್ತು ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿ ಕೊಲ್ಲುವುದಕ್ಕಾಗಿ ಪಿಎಫ್ಐ ಸಶಸ್ತ್ರ ಸರ್ವಿಸ್ ಟೀಮ್ ರೆಡಿ ಮಾಡಿತ್ತು. ದೇಶಾದ್ಯಂತ ದೇಶದ್ರೋಹಿ ಚಟುವಟಿಕೆ ನಡೆಸಲು ಸದ್ದಿಲ್ಲದೆ ಕೆಲಸ ಮಾಡುತ್ತಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಎಫ್ಐ ಸರ್ವಿಸ್ ಟೀಮ್ ನಲ್ಲಿ ಮುಸ್ತಫಾ ಮುಖ್ಯಸ್ಥನಾಗಿದ್ದ.
ಎನ್ಐಎ ಅಧಿಕಾರಿಗಳು ಪ್ರಕರಣದಲ್ಲಿ ತನಿಖೆ ಮುಂದುವರಿಸಿದ್ದು ಇನ್ನೂ ಆರು ಮಂದಿಯ ಪತ್ತೆಗಾಗಿ ಬಲೆ ಬೀಸಿದೆ. ಆರು ಮಂದಿಯ ಪತ್ತೆಗೆ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಿಸಿದೆ.
The National Investigation Agency (NIA) on Tuesday announced the arrest of a key accused who allegedly sheltered the chief conspirator in the Praveen Nettaru murder case. Ateeq Ahmed is the 21st accused to be arrested in the case relating to the brutal killing of Nettaruin Bellare village of Dakshina Kannada District, Karnataka, by members of the banned Popular Front of India (PFI) in July 2022, the agency said.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm