ಬ್ರೇಕಿಂಗ್ ನ್ಯೂಸ್
22-01-25 12:39 pm Mangalore Correspondent ಕರಾವಳಿ
ಮಂಗಳೂರು, ಜ.22: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಮುರುಗಂಡಿ ದೇವರ್ ಮತ್ತು ಜೋಶುವಾ ರಾಜೇಂದ್ರನ್ ಅವರನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದು, ಅಲ್ಲಿನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುರುಗಂಡಿ ದೇವರ್ ತಿರುನಲ್ವೇಲಿ ಜಿಲ್ಲೆಯ ಪದ್ಮನೇರಿ ಗ್ರಾಮದ ಕಾಲಕ್ಕಾಡ್ ನಿವಾಸಿಯಾಗಿದ್ದು, ಜೋಶುವಾ ಅದೇ ಜಿಲ್ಲೆಯ ಕಲ್ಲಿಡೈಕುರುಚ್ಚಿ ನಿವಾಸಿಯಾಗಿದ್ದಾನೆ. ಸ್ಥಳೀಯ ಪೊಲೀಸರ ನೆರವು ಪಡೆದು ಮಂಗಳೂರು ಪೊಲೀಸರು ಬಂಧಿಸಿದ್ದು, ಸ್ಥಳೀಯ ಅಂಬಾಸಮುದ್ರಂ ಜುಡೀಶಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ. ಈ ವೇಳೆ, ಎರಡು ಕೇಜಿ ಚಿನ್ನಾಭರಣ ಮತ್ತು ಮೂರು ಲಕ್ಷ ನಗದು, ಒಂದು ರಿವಾಲ್ವರ್, ಮೂರು ಬುಲೆಟ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾಗಿ ಕೋರ್ಟಿಗೆ ಮಾಹಿತಿ ನೀಡಿದ್ದಾಗಿ ದಿ ಹಿಂದು ಪತ್ರಿಕೆ ತಿರುನಲ್ವೇಲಿಯಿಂದ ವರದಿ ಮಾಡಿದೆ.




ಮಂಗಳವಾರ ಸ್ಥಳೀಯ ಕೋರ್ಟಿಗೆ ಹಾಜರುಪಡಿಸಿ ಮುರುಗನ್ ಮತ್ತು ಜೋಶುವಾನನ್ನು ಮಂಗಳೂರು ಪೊಲೀಸರು ಬಾಡಿ ವಾರೆಂಟ್ ಪಡೆದು ಜೊತೆಗೆ ಕರೆತಂದಿದ್ದಾರೆ. ಇದಕ್ಕೂ ಮೊದಲೇ ಇನ್ನೊಬ್ಬ ಆರೋಪಿ ಕಣ್ಣನ್ ಮಣಿ ಮುಂಬೈನಲ್ಲಿ ಸೆರೆಸಿಕ್ಕಿದ್ದು, ಆತನನ್ನು ಮಂಗಳೂರಿಗೆ ಕರೆತಂದು ಎಸ್ಕೇಪ್ ಆಗಲು ಯತ್ನಿಸಿದ್ದಕ್ಕೆ ಗುಂಡಿನ ರುಚಿ ತೋರಿಸಿದ್ದಾರೆ. ಫೈರಿಂಗ್ ಆದ ಸ್ಥಳಕ್ಕೆ ಬಂದಿದ್ದ ಕೋಟೆಕಾರು ಸಹಕಾರಿ ಬ್ಯಾಂಕಿನ ಅಧ್ಯಕ್ಷ ಕೃಷ್ಣ ಶೆಟ್ಟಿ, ಬ್ಯಾಂಕಿನಲ್ಲಿ ಕಳವಾದ ಚಿನ್ನಾಭರಣದ ಬಗ್ಗೆ ಲೆಕ್ಕ ಆಗಿದ್ದು ಒಟ್ಟು 15 ಕೋಟಿಗೂ ಹೆಚ್ಚು ಮೊತ್ತದ ಚಿನ್ನ ದರೋಡೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೆ, ಎಫ್ಐಆರ್ ನಲ್ಲಿ ಅಂದಾಜು ಲೆಕ್ಕ ಕೊಡಲಾಗಿತ್ತು. ಅದನ್ನು ಮತ್ತೆ ಸೇರಿಸಲಾಗುವುದು ಎಂದು ಹೇಳಿದ್ದರು.
ಇದೀಗ ತಮಿಳುನಾಡಿನಲ್ಲಿ ವಶಕ್ಕೆ ಪಡೆದ ಇಬ್ಬರನ್ನು ಕೋರ್ಟಿಗೆ ಹಾಜರುಪಡಿಸಿದ ವೇಳೆ ಎರಡು ಕೇಜಿ ಚಿನ್ನಾಭರಣವೆಂದು ತೋರಿಸಲಾಗಿದೆ. ಮುಂಬೈನಲ್ಲಿ ಬಂಧಿಸಲ್ಪಟ್ಟ ಆರೋಪಿಯ ಬಳಿ ಎಷ್ಟು ಸಿಕ್ಕಿದೆಯೆಂದು ಪೊಲೀಸರು ಮಾಹಿತಿ ನೀಡಿಲ್ಲ. ಪ್ರಕರಣದಲ್ಲಿ ಇನ್ನೂ ಆರು ಮಂದಿ ಪರಾರಿಯಾಗಿದ್ದು, ಅವರು ತಮ್ಮೊಂದಿಗೆ ಚಿನ್ನಾಭರಣ ಇಟ್ಟುಕೊಂಡು ಹೋಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಮೊನ್ನೆ ಮಂಗಳೂರಿನಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಗೋಣಿ ಚೀಲದಲ್ಲಿ ಒಯ್ದಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದರು.
Kotekar bank robbery case, police seize 2 kilos of gold and cash worth 3 lakhs from accused murgan at Tirunelveli. The police also seized a revolver with three bullets from them. After producing them before Ambasamudram Judicial Magistrate Achuthan on Tuesday, the police took the duo to Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm