ಬ್ರೇಕಿಂಗ್ ನ್ಯೂಸ್
25-01-25 05:05 pm Mangalore Correspondent ಕರಾವಳಿ
ಮಂಗಳೂರು, ಜ.25: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳದ ಕಲಾವಿದ ಆನಂದ ಕಟೀಲು(47) 25 ದಿನಗಳ ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಜನವರಿ 1ರಂದು ಕಿನ್ನಿಗೋಳಿಯಲ್ಲಿ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದಾಗ ಪಲ್ಟಿಯಾಗಿ ಚಾಲನೆ ಮಾಡುತ್ತಿದ್ದ ಆನಂದ ತೀವ್ರ ಗಾಯಗೊಂಡಿದ್ದರು. ಆನಂತರ, ಕುತ್ತಿಗೆಯ ಭಾಗಕ್ಕೆ ಪೆಟ್ಟು ಬಿದ್ದ ಕಾರಣ ಮಂಗಳೂರಿನ ಸಿಟಿ ಹಾಸ್ಪಿಟಲ್ ಗೆ ದಾಖಲು ಮಾಡಲಾಗಿತ್ತು. ಆದರೆ ಶಸ್ತ್ರ ಚಿಕಿತ್ಸೆ ನಡೆಸಲು ಎಂಟು ಲಕ್ಷ ಖರ್ಚು ಆಗಬಹುದೆಂದು ವೈದ್ಯರು ಹೇಳಿದ್ದರಿಂದ ಅವರನ್ನು ಎರಡು ದಿನಗಳ ಬಳಿಕ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಎದ್ದು ಕುಳಿತುಕೊಳ್ಳುವುದಕ್ಕೆ ಆಗದೇ ಬಳಲುತ್ತಿದ್ದ ಅವರಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಲಭಿಸಿರಲಿಲ್ಲ. ಇದರಿಂದಾಗಿ 25 ದಿನಗಳ ಕಾಲ ನರಳಿದ ಅವರು ಜ.25ರ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಆಸ್ಪತ್ರೆ ಖರ್ಚು ನೋಡಿಕೊಳ್ಳುತ್ತೇವೆಂದು ಮೇಳದ ವ್ಯವಸ್ಥಾಪಕರು ಹೇಳಿದ್ದರೂ, ಹೆಚ್ಚಿನ ನೆರವು ನೀಡಿಲ್ಲ. ಈವರೆಗೆ 30 ಸಾವಿರ ಮಾತ್ರ ನೀಡಿದ್ದಾರೆ. 35 ವರ್ಷಗಳಿಂದ ಕಟೀಲು ಮೇಳದ ಕಲಾವಿದರಾಗಿದ್ದು, ಕೆಲವೊಮ್ಮೆ ಬಿಡುವು ಸಿಕ್ಕಾಗ ಆಟೋ ರಿಕ್ಷಾ ಚಲಾಯಿಸುತ್ತಿದ್ದರು ಎಂದು ಅವರ ಪತ್ನಿ ತಿಳಿಸಿದ್ದಾರೆ.
ಆನಂದ ಅವರು ಮೂಲತಃ ಕಾಸರಗೋಡು ಜಿಲ್ಲೆಯ ಜೋಡುಕಲ್ಲು ನಿವಾಸಿಯಾಗಿದ್ದು, ಮದುವೆಯಾದ ಬಳಿಕ ಕಟೀಲು ದೇವಸ್ಥಾನದ ಬಳಿಯಲ್ಲೇ ಮನೆ ಮಾಡಿ ಪತ್ನಿಯೊಂದಿಗೆ ನೆಲೆಸಿದ್ದರು. ಮದುವೆಯಾಗಿ 12 ವರ್ಷಗಳಾದರೂ ದಂಪತಿಗೆ ಮಕ್ಕಳು ಇರಲಿಲ್ಲ. ಈಗ ಅಪಘಾತಕ್ಕೀಡಾಗಿ ಮೃತಪಟ್ಟಿದ್ದು, ಮೇಳದ ಕಡೆಯವರ ನಿರ್ಲಕ್ಷ್ಯದಿಂದಲೇ ಸಾವಾಗಿದೆ. 25 ದಿನಗಳಲ್ಲಿ ಆಸ್ಪತ್ರೆಯಲ್ಲಿದ್ದರೂ, ಇಬ್ಬರು ಕಲಾವಿದರು ಮಾತ್ರ ಬಂದು ನೋಡಿದ್ದರು. ಇತರ ಯಾರು ಕೂಡ ಸಹಾಯ ಮಾಡಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ.
Mangalore 47 year old Yakshagana artist dies of road accident. The deceased has been identified as Anand Kateel.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm