ಬ್ರೇಕಿಂಗ್ ನ್ಯೂಸ್
25-01-25 05:05 pm Mangalore Correspondent ಕರಾವಳಿ
ಮಂಗಳೂರು, ಜ.25: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳದ ಕಲಾವಿದ ಆನಂದ ಕಟೀಲು(47) 25 ದಿನಗಳ ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಜನವರಿ 1ರಂದು ಕಿನ್ನಿಗೋಳಿಯಲ್ಲಿ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದಾಗ ಪಲ್ಟಿಯಾಗಿ ಚಾಲನೆ ಮಾಡುತ್ತಿದ್ದ ಆನಂದ ತೀವ್ರ ಗಾಯಗೊಂಡಿದ್ದರು. ಆನಂತರ, ಕುತ್ತಿಗೆಯ ಭಾಗಕ್ಕೆ ಪೆಟ್ಟು ಬಿದ್ದ ಕಾರಣ ಮಂಗಳೂರಿನ ಸಿಟಿ ಹಾಸ್ಪಿಟಲ್ ಗೆ ದಾಖಲು ಮಾಡಲಾಗಿತ್ತು. ಆದರೆ ಶಸ್ತ್ರ ಚಿಕಿತ್ಸೆ ನಡೆಸಲು ಎಂಟು ಲಕ್ಷ ಖರ್ಚು ಆಗಬಹುದೆಂದು ವೈದ್ಯರು ಹೇಳಿದ್ದರಿಂದ ಅವರನ್ನು ಎರಡು ದಿನಗಳ ಬಳಿಕ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಎದ್ದು ಕುಳಿತುಕೊಳ್ಳುವುದಕ್ಕೆ ಆಗದೇ ಬಳಲುತ್ತಿದ್ದ ಅವರಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಲಭಿಸಿರಲಿಲ್ಲ. ಇದರಿಂದಾಗಿ 25 ದಿನಗಳ ಕಾಲ ನರಳಿದ ಅವರು ಜ.25ರ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಆಸ್ಪತ್ರೆ ಖರ್ಚು ನೋಡಿಕೊಳ್ಳುತ್ತೇವೆಂದು ಮೇಳದ ವ್ಯವಸ್ಥಾಪಕರು ಹೇಳಿದ್ದರೂ, ಹೆಚ್ಚಿನ ನೆರವು ನೀಡಿಲ್ಲ. ಈವರೆಗೆ 30 ಸಾವಿರ ಮಾತ್ರ ನೀಡಿದ್ದಾರೆ. 35 ವರ್ಷಗಳಿಂದ ಕಟೀಲು ಮೇಳದ ಕಲಾವಿದರಾಗಿದ್ದು, ಕೆಲವೊಮ್ಮೆ ಬಿಡುವು ಸಿಕ್ಕಾಗ ಆಟೋ ರಿಕ್ಷಾ ಚಲಾಯಿಸುತ್ತಿದ್ದರು ಎಂದು ಅವರ ಪತ್ನಿ ತಿಳಿಸಿದ್ದಾರೆ.
ಆನಂದ ಅವರು ಮೂಲತಃ ಕಾಸರಗೋಡು ಜಿಲ್ಲೆಯ ಜೋಡುಕಲ್ಲು ನಿವಾಸಿಯಾಗಿದ್ದು, ಮದುವೆಯಾದ ಬಳಿಕ ಕಟೀಲು ದೇವಸ್ಥಾನದ ಬಳಿಯಲ್ಲೇ ಮನೆ ಮಾಡಿ ಪತ್ನಿಯೊಂದಿಗೆ ನೆಲೆಸಿದ್ದರು. ಮದುವೆಯಾಗಿ 12 ವರ್ಷಗಳಾದರೂ ದಂಪತಿಗೆ ಮಕ್ಕಳು ಇರಲಿಲ್ಲ. ಈಗ ಅಪಘಾತಕ್ಕೀಡಾಗಿ ಮೃತಪಟ್ಟಿದ್ದು, ಮೇಳದ ಕಡೆಯವರ ನಿರ್ಲಕ್ಷ್ಯದಿಂದಲೇ ಸಾವಾಗಿದೆ. 25 ದಿನಗಳಲ್ಲಿ ಆಸ್ಪತ್ರೆಯಲ್ಲಿದ್ದರೂ, ಇಬ್ಬರು ಕಲಾವಿದರು ಮಾತ್ರ ಬಂದು ನೋಡಿದ್ದರು. ಇತರ ಯಾರು ಕೂಡ ಸಹಾಯ ಮಾಡಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ.
Mangalore 47 year old Yakshagana artist dies of road accident. The deceased has been identified as Anand Kateel.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm