ಬ್ರೇಕಿಂಗ್ ನ್ಯೂಸ್
25-01-25 05:05 pm Mangalore Correspondent ಕರಾವಳಿ
ಮಂಗಳೂರು, ಜ.25: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳದ ಕಲಾವಿದ ಆನಂದ ಕಟೀಲು(47) 25 ದಿನಗಳ ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಜನವರಿ 1ರಂದು ಕಿನ್ನಿಗೋಳಿಯಲ್ಲಿ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದಾಗ ಪಲ್ಟಿಯಾಗಿ ಚಾಲನೆ ಮಾಡುತ್ತಿದ್ದ ಆನಂದ ತೀವ್ರ ಗಾಯಗೊಂಡಿದ್ದರು. ಆನಂತರ, ಕುತ್ತಿಗೆಯ ಭಾಗಕ್ಕೆ ಪೆಟ್ಟು ಬಿದ್ದ ಕಾರಣ ಮಂಗಳೂರಿನ ಸಿಟಿ ಹಾಸ್ಪಿಟಲ್ ಗೆ ದಾಖಲು ಮಾಡಲಾಗಿತ್ತು. ಆದರೆ ಶಸ್ತ್ರ ಚಿಕಿತ್ಸೆ ನಡೆಸಲು ಎಂಟು ಲಕ್ಷ ಖರ್ಚು ಆಗಬಹುದೆಂದು ವೈದ್ಯರು ಹೇಳಿದ್ದರಿಂದ ಅವರನ್ನು ಎರಡು ದಿನಗಳ ಬಳಿಕ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಎದ್ದು ಕುಳಿತುಕೊಳ್ಳುವುದಕ್ಕೆ ಆಗದೇ ಬಳಲುತ್ತಿದ್ದ ಅವರಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಲಭಿಸಿರಲಿಲ್ಲ. ಇದರಿಂದಾಗಿ 25 ದಿನಗಳ ಕಾಲ ನರಳಿದ ಅವರು ಜ.25ರ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಆಸ್ಪತ್ರೆ ಖರ್ಚು ನೋಡಿಕೊಳ್ಳುತ್ತೇವೆಂದು ಮೇಳದ ವ್ಯವಸ್ಥಾಪಕರು ಹೇಳಿದ್ದರೂ, ಹೆಚ್ಚಿನ ನೆರವು ನೀಡಿಲ್ಲ. ಈವರೆಗೆ 30 ಸಾವಿರ ಮಾತ್ರ ನೀಡಿದ್ದಾರೆ. 35 ವರ್ಷಗಳಿಂದ ಕಟೀಲು ಮೇಳದ ಕಲಾವಿದರಾಗಿದ್ದು, ಕೆಲವೊಮ್ಮೆ ಬಿಡುವು ಸಿಕ್ಕಾಗ ಆಟೋ ರಿಕ್ಷಾ ಚಲಾಯಿಸುತ್ತಿದ್ದರು ಎಂದು ಅವರ ಪತ್ನಿ ತಿಳಿಸಿದ್ದಾರೆ.
ಆನಂದ ಅವರು ಮೂಲತಃ ಕಾಸರಗೋಡು ಜಿಲ್ಲೆಯ ಜೋಡುಕಲ್ಲು ನಿವಾಸಿಯಾಗಿದ್ದು, ಮದುವೆಯಾದ ಬಳಿಕ ಕಟೀಲು ದೇವಸ್ಥಾನದ ಬಳಿಯಲ್ಲೇ ಮನೆ ಮಾಡಿ ಪತ್ನಿಯೊಂದಿಗೆ ನೆಲೆಸಿದ್ದರು. ಮದುವೆಯಾಗಿ 12 ವರ್ಷಗಳಾದರೂ ದಂಪತಿಗೆ ಮಕ್ಕಳು ಇರಲಿಲ್ಲ. ಈಗ ಅಪಘಾತಕ್ಕೀಡಾಗಿ ಮೃತಪಟ್ಟಿದ್ದು, ಮೇಳದ ಕಡೆಯವರ ನಿರ್ಲಕ್ಷ್ಯದಿಂದಲೇ ಸಾವಾಗಿದೆ. 25 ದಿನಗಳಲ್ಲಿ ಆಸ್ಪತ್ರೆಯಲ್ಲಿದ್ದರೂ, ಇಬ್ಬರು ಕಲಾವಿದರು ಮಾತ್ರ ಬಂದು ನೋಡಿದ್ದರು. ಇತರ ಯಾರು ಕೂಡ ಸಹಾಯ ಮಾಡಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ.
Mangalore 47 year old Yakshagana artist dies of road accident. The deceased has been identified as Anand Kateel.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm