ಬ್ರೇಕಿಂಗ್ ನ್ಯೂಸ್
27-01-25 08:36 pm Mangalore Correspondent ಕರಾವಳಿ
ಮಂಗಳೂರು, ಜ.27: ಮಂಗಳೂರು ನಗರ ವ್ಯಾಪ್ತಿಯ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.
ಪಾಂಡೇಶ್ವರ ಠಾಣೆ ವ್ಯಾಪ್ತಿಯ ಅತ್ತಾವರದ ಮಣಿಪಾಲ್ ಶಾಲೆ, ಜಪ್ಪಿನಮೊಗರು ಪ್ರೆಸಿಡೆನ್ಸಿ ಶಾಲೆ ಮತ್ತು ಪಿಯು ಕಾಲೇಜು ಹಾಗೂ ನೀರುಮಾರ್ಗ ಬಳಿಯ ಕೇಂಬ್ರಿಡ್ಜ್ ಶಾಲೆಗಳಿಗೆ ಆವರಣದಲ್ಲಿ ಐಇಡಿ ಬಾಂಬ್ ಗಳಿವೆ ಎಂದು ಬೆದರಿಕೆ ಇಮೇಲ್ಗಳು ಬಂದಿದ್ದವು. ಬಾಂಬ್ ಬೆದರಿಕೆ ಇಮೇಲ್ ತಿಳಿಯುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ತೆರಳಿ ತಪಾಸಣೆ ನಡೆಸಿದ್ದಾರೆ. ಅಲ್ಲದೆ, ಬಾಂಬ್ ನಿಷ್ಕ್ರಿಯ ದಳಗಳು ಸಂಪೂರ್ಣ ತಪಾಸಣೆ ನಡೆಸಿವೆ.
ಪರಿಶೀಲನೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಇದಲ್ಲದೆ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸುರಕ್ಷತೆಗಾಗಿ ಶಾಲೆಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಲನವಲನ ಕಂಡರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲು ಸೂಚಿಸಲಾಗಿದೆ. ಬೆದರಿಕೆ ಇಮೇಲ್ಗಳಿಗೆ ಸಂಬಂಧಿಸಿ ಪ್ರತ್ಯೇಕ ಪ್ರಕರಣ ದಾಖಲಿಸಿದ್ದು ವಿವರವಾದ ತನಿಖೆ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಉಡುಪಿ ಶಾಲೆಯಲ್ಲೂ ಬೆದರಿಕೆ ಇಮೇಲ್
ಉಡುಪಿ ನಗರದ ಶಾರದಾ ರೆಸಿಡೆನ್ಸಿ ಸ್ಕೂಲ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಶಾಲೆಯ ಸಿಬ್ಬಂದಿ ಭಯಕ್ಕೀಡಾಗಿ ಮಕ್ಕಳನ್ನು ಹೊರಕ್ಕೆ ಕಳಿಸಿದ್ದಾರೆ. ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಮೈದಾನದ ಸಮೀಪದ ಖಾಸಗಿ ಶಾಲೆಯ ಇಮೇಲ್ ಗೆ ಬಾಂಬ್ ಸ್ಪೋಟದ ಸಂದೇಶ ಬಂದಿದೆ. ಶಾಲೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ, ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಿ ಮೈದಾನದಲ್ಲಿ ಇರಿಸಿದ್ದಾರೆ. ಪೊಲೀಸರು ತಪಾಸಣೆ ಬಳಿಕ ಹುಸಿ ಬೆದರಿಕೆ ಎಂದು ಖಚಿತ ಪಡಿಸಿದ್ದಾರೆ.
Mangalore Udupi schools receive hoax bomb threat, police deployed for additional security. According to sources, the email claiming presence of explosive material was received by Manipal School in Attavar under the Pandeshwar Police Station limits, Presidency and Cambridge School in Neermarga under the Mangaluru Rural Police Station limits.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm