ಬ್ರೇಕಿಂಗ್ ನ್ಯೂಸ್
27-01-25 08:36 pm Mangalore Correspondent ಕರಾವಳಿ
ಮಂಗಳೂರು, ಜ.27: ಮಂಗಳೂರು ನಗರ ವ್ಯಾಪ್ತಿಯ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.
ಪಾಂಡೇಶ್ವರ ಠಾಣೆ ವ್ಯಾಪ್ತಿಯ ಅತ್ತಾವರದ ಮಣಿಪಾಲ್ ಶಾಲೆ, ಜಪ್ಪಿನಮೊಗರು ಪ್ರೆಸಿಡೆನ್ಸಿ ಶಾಲೆ ಮತ್ತು ಪಿಯು ಕಾಲೇಜು ಹಾಗೂ ನೀರುಮಾರ್ಗ ಬಳಿಯ ಕೇಂಬ್ರಿಡ್ಜ್ ಶಾಲೆಗಳಿಗೆ ಆವರಣದಲ್ಲಿ ಐಇಡಿ ಬಾಂಬ್ ಗಳಿವೆ ಎಂದು ಬೆದರಿಕೆ ಇಮೇಲ್ಗಳು ಬಂದಿದ್ದವು. ಬಾಂಬ್ ಬೆದರಿಕೆ ಇಮೇಲ್ ತಿಳಿಯುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ತೆರಳಿ ತಪಾಸಣೆ ನಡೆಸಿದ್ದಾರೆ. ಅಲ್ಲದೆ, ಬಾಂಬ್ ನಿಷ್ಕ್ರಿಯ ದಳಗಳು ಸಂಪೂರ್ಣ ತಪಾಸಣೆ ನಡೆಸಿವೆ.
ಪರಿಶೀಲನೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಇದಲ್ಲದೆ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸುರಕ್ಷತೆಗಾಗಿ ಶಾಲೆಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಲನವಲನ ಕಂಡರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲು ಸೂಚಿಸಲಾಗಿದೆ. ಬೆದರಿಕೆ ಇಮೇಲ್ಗಳಿಗೆ ಸಂಬಂಧಿಸಿ ಪ್ರತ್ಯೇಕ ಪ್ರಕರಣ ದಾಖಲಿಸಿದ್ದು ವಿವರವಾದ ತನಿಖೆ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಉಡುಪಿ ಶಾಲೆಯಲ್ಲೂ ಬೆದರಿಕೆ ಇಮೇಲ್
ಉಡುಪಿ ನಗರದ ಶಾರದಾ ರೆಸಿಡೆನ್ಸಿ ಸ್ಕೂಲ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಶಾಲೆಯ ಸಿಬ್ಬಂದಿ ಭಯಕ್ಕೀಡಾಗಿ ಮಕ್ಕಳನ್ನು ಹೊರಕ್ಕೆ ಕಳಿಸಿದ್ದಾರೆ. ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಮೈದಾನದ ಸಮೀಪದ ಖಾಸಗಿ ಶಾಲೆಯ ಇಮೇಲ್ ಗೆ ಬಾಂಬ್ ಸ್ಪೋಟದ ಸಂದೇಶ ಬಂದಿದೆ. ಶಾಲೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ, ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಿ ಮೈದಾನದಲ್ಲಿ ಇರಿಸಿದ್ದಾರೆ. ಪೊಲೀಸರು ತಪಾಸಣೆ ಬಳಿಕ ಹುಸಿ ಬೆದರಿಕೆ ಎಂದು ಖಚಿತ ಪಡಿಸಿದ್ದಾರೆ.
Mangalore Udupi schools receive hoax bomb threat, police deployed for additional security. According to sources, the email claiming presence of explosive material was received by Manipal School in Attavar under the Pandeshwar Police Station limits, Presidency and Cambridge School in Neermarga under the Mangaluru Rural Police Station limits.
21-07-25 01:31 pm
Bangalore Correspondent
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 03:11 pm
Mangalore Correspondent
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm