ಬ್ರೇಕಿಂಗ್ ನ್ಯೂಸ್
27-01-25 10:57 pm Mangalore Correspondent ಕರಾವಳಿ
ಮಂಗಳೂರು, ಜ.27: ಪ್ರಕರಣ ಒಂದರಲ್ಲಿ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದ ಸ್ಕೂಟರ್ ಅನ್ನು ಬಿಡುಗಡೆ ಮಾಡಲು ಕೋರ್ಟ್ ಆದೇಶ ಆಗಿದ್ದರೂ ಬಿಡುಗಡೆ ಮಾಡಬೇಕಿದ್ದರೆ 5 ಸಾವಿರ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹಮ್ಮದ್ ಶರೀಫ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಬಿಟ್ಟು ಕೊಡಬೇಕಿದ್ದರೆ 5 ಸಾವಿರ ರೂ. ಕೊಡಬೇಕೆಂದು ಮಹಮ್ಮದ್ ಶರೀಫ್ ಹೇಳಿದ್ದು, ಅವರು ಹಣ ಕಡಿಮೆ ಮಾಡುವಂತೆ ಕೇಳಿಕೊಂಡಾಗ ಠಾಣೆಯ ಬರಹಗಾರ್ತಿ ನಾಗರತ್ನ ಎಚ್.ಸಿ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಅದರಂತೆ, ನಾಗರತ್ನ ಬಳಿ ಹೋದಾಗ ಬೈದು 3 ಸಾವಿರ ಲಂಚ ನೀಡುವಂತೆ ಹೇಳಿದ್ದಾರೆ. ಕಾನೂನು ಪ್ರಕಾರ ಮಾಡಬೇಕಿದ್ದ ಸರ್ಕಾರಿ ಕೆಲಸಕ್ಕೆ ಲಂಚ ನೀಡಲು ಒಪ್ಪದ ಫಿರ್ಯಾದಿ ವ್ಯಕ್ತಿ ನೇರವಾಗಿ ಲೋಕಾಯುಕ್ತ ಗಮನಕ್ಕೆ ತಂದಿದ್ದಾರೆ.
ಲೋಕಾಯುಕ್ತ ಠಾಣೆಯಲ್ಲಿ ಮಹಮ್ಮದ್ ಶರೀಫ್ ಹಾಗೂ ನಾಗರತ್ನ ವಿರುದ್ಧ ಪ್ರಕರಣ ದಾಖಲಿಸಿದ ಅಧಿಕಾರಿಗಳು ಜ.27ರಂದು ಟ್ರಾಪ್ ಮಾಡಿದ್ದು, ಮಹಮ್ಮದ್ ಶರೀಫ್ ಹಾಗೂ ಸಿಬಂದಿ ಪ್ರವೀಣ್ ನಾಯ್ಕ ಮೂರು ಸಾವಿರ ರೂ. ಲಂಚದ ಹಣ ಸ್ವೀಕರಿಸುವಾಗಲೇ ಬಲೆಗೆ ಬಿದ್ದಿದ್ದಾರೆ. ಆರೋಪಿತ ಅಧಿಕಾರಿ ಮತ್ತು ಸಿಬಂದಿಯನ್ನು ಲೋಕಾಯುಕ್ತ ತಂಡ ವಶಕ್ಕೆ ಪಡೆದು ತನಿಖೆ ಕೈಗೊಂಡಿದೆ. ಲೋಕಾಯುಕ್ತ ಪ್ರಭಾರ ಎಸ್ಪಿ ಡಾ.ನಂದಿನಿ ಬಿ.ಎನ್, ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ, ಚಂದ್ರಶೇಖರ್ ಕೆ.ಎನ್, ಉಡುಪಿ ಪೊಲೀಸ್ ಠಾಣೆಯ ನಿರೀಕ್ಷಕ ಮಂಜುನಾಥ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.
Mangalore North police station traffic inspector Muhammad Sharief caught by lokayukta for taking bribe for releasing a two wheeler even after court order.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm